AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಂ 4’ ಸಿನಿಮಾ ಘೋಷಣೆ; ಸಿಕ್ವೇಲ್ ನಿರ್ಧಾರಕ್ಕೆ ಅಭಿಮಾನಿಗಳ ಕಿಡಿ

Drishyam 4 Announcement: ಮಲಯಾಳಂನ ಸೂಪರ್‌ಹಿಟ್ 'ದೃಶ್ಯಂ' ಸರಣಿಯ ನಾಲ್ಕನೇ ಭಾಗದ ಘೋಷಣೆಗೆ ಅಭಿಮಾನಿಗಳಿಂದ ನಿರಾಸೆ ವ್ಯಕ್ತವಾಗಿದೆ. ಮೂರನೇ ಭಾಗವೇ ನಿರೀಕ್ಷೆ ತಲುಪಲು ವಿಫಲವಾಗಿದ್ದು, ಈಗ ಮತ್ತೆ 'ದೃಶ್ಯಂ 4' ಮಾಡುವ ನಿರ್ಧಾರಕ್ಕೆ ಪ್ರೇಕ್ಷಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

'ದೃಶ್ಯಂ 4' ಸಿನಿಮಾ ಘೋಷಣೆ; ಸಿಕ್ವೇಲ್ ನಿರ್ಧಾರಕ್ಕೆ ಅಭಿಮಾನಿಗಳ ಕಿಡಿ
ಮೋಹನ್​ಲಾಲ್ Image Credit source: Drihshyam Team
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 25, 2026 | 11:18 AM

Share

ಮುಖ್ಯಾಂಶಗಳು

  • 'ದೃಶ್ಯಂ 4' ಪ್ರಕಟಣೆ ಬೆನ್ನಲ್ಲೇ ವ್ಯಕ್ತವಾಯ್ತು ತೀವ್ರ ಅಸಮಾಧಾನ
  • ಮೂರನೇ ಭಾಗದಲ್ಲೇ ಕಳೆದುಹೋಗಿತ್ತು ಮೊದಲಿನ ಆ ಟ್ವಿಸ್ಟ್ ಮ್ಯಾಜಿಕ್
  • ನಿರ್ದೇಶಕ ಜೀತು ಜೋಸೆಫ್ ಮುಂದಿರುವ ಕಠಿಣ ಸವಾಲು

ಮಲಯಾಳಂ ಚಿತ್ರರಂಗದ ಯಶಸ್ವಿ ಸರಣಿ ‘ದೃಶ್ಯಂ’ ಸಿನಿಮಾ ಪ್ರೇಕ್ಷಕರನ್ನು ಅಪಾರವಾಗಿ ರಂಜಿಸಿತ್ತು. ಆದರೆ ಈಗ ನಾಲ್ಕನೇ ಭಾಗದ ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಟ್ ಫ್ರಾಂಚೈಸಿಯನ್ನು ಅನಗತ್ಯವಾಗಿ ಮುಂದುವರಿಸಲಾಗುತ್ತಿದೆ ಎಂದು ವೀಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಅಭಿಮಾನಿಗಳು ಈಗಾಗಲೇ ‘ದೃಶ್ಯಂ 3’ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದರು. ಆ ಸಿನಿಮಾ ಕೂಡ ನಿರೀಕ್ಷಿತ ಮಟ್ಟ ತಲುಪಲು ವಿಫಲವಾಗಿತ್ತು. ಮೂರನೇ ಭಾಗವು ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಋಣಾತ್ಮಕ ಪ್ರತಿಕ್ರಿಯೆ ಪಡೆಯಿತು. ಸರಣಿಯಲ್ಲೇ ಇದು ಅತ್ಯಂತ ವೀಕ್ ಸಿನಿಮಾ ಎಂದು ಪ್ರೇಕ್ಷಕರು ಕರೆದಿದ್ದಾರೆ.

ಮೋಹನ್‌ಲಾಲ್ ಅವರ ನಟನೆ ಮತ್ತು ಭಾವನಾತ್ಮಕ ಸನ್ನಿವೇಶಗಳು ಗಮನಸೆಳೆದಿದ್ದವು. ಆದರೆ ಕಥೆಯನ್ನು ಅನಗತ್ಯವಾಗಿ ಎಳೆಯಲಾಗಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಕ್ಲಿಷ್ಟಕರ ನಿರೂಪಣೆ ಪ್ರೇಕ್ಷಕರಿಗೆ ಬೇಸರ ತರಿಸಿತ್ತು. ಕಥೆಯಲ್ಲಿ ಯಾವುದೇ ಹೊಸತನ ಇಲ್ಲದಿರುವುದು ಪ್ರೇಕ್ಷಕರ ನಿರಾಸೆಗೆ ಪ್ರಮುಖ ಕಾರಣವಾಗಿತ್ತು.

ಮೊದಲ ಎರಡು ಭಾಗಗಳು ಅತ್ಯುತ್ತಮ ಸಸ್ಪೆನ್ಸ್ ಹೊಂದಿದ್ದವು. ಟ್ವಿಸ್ಟ್ ಹಾಗೂ ಡ್ರಾಮಾ ಪ್ರೇಕ್ಷಕರನ್ನು ಸೀಟಿನ ತುದಿಯಲ್ಲಿ ಕುಳಿತುಕೊಳ್ಳುವಂತೆ ಮಾಡಿದ್ದವು. ಮೂರನೇ ಭಾಗದಲ್ಲಿ ಆ ರೀತಿಯ ಮ್ಯಾಜಿಕ್ ಸಂಪೂರ್ಣವಾಗಿ ಮಾಯವಾಗಿತ್ತು. ಇದರಿಂದಾಗಿ ನಾಲ್ಕನೇ ಭಾಗದ ಮೇಲಿನ ಭರವಸೆ ಸಂಪೂರ್ಣವಾಗಿ ಹುಸಿಯಾಗಿದೆ. ಈ ಸಿನಿಮಾ ಹಣ ಮಾಡುವ ತಂತ್ರ ಎಂದು ಅನೇಕರು ಕಿಡಿಕಾರಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಇದನ್ನೂ ಓದಿ: ಮೋಹನ್‌ಲಾಲ್ ನಟನೆಯ  ದೃಶ್ಯಂ ಒಟಿಟಿ ರಿಲೀಸ್ ಡೇಟ್ ಫಿಕ್ಸ್? ಇಲ್ಲಿದೆ ಅಪ್‌ಡೇಟ್

ಈಗ ನಿರ್ದೇಶಕ ಜೀತು ಜೋಸೆಫ್ ಅವರ ನಡೆ ಕುತೂಹಲ ಮೂಡಿಸಿದೆ. ಅವರು ಹಳೆಯ ಕಥೆಯನ್ನು ಮುಂದುವರಿಸುತ್ತಾರೋ ಅಥವಾ ಹೊಸ ಕಾನ್ಸೆಪ್ಟ್ ತರುತ್ತಾರೋ ಎಂಬ ಪ್ರಶ್ನೆ ಎದ್ದಿದೆ. ಮುಂದಿನ ದಿನಗಳಲ್ಲಿ ‘ದೃಶ್ಯಂ 4’ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ. ಈ ಹೊಸ ಭಾಗವು ಹಳೆಯ ಯಶಸ್ಸನ್ನು ಮರಳಿ ತರುತ್ತದೆಯೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು