AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ

ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಅದ್ದೂರಿಯಾಗಿ ತೆರೆಕಾಣುತ್ತಿದೆ. ಈ ಸಿನಿಮಾದಲ್ಲಿ ಮೆಗಾ ಸ್ಟಾರ್ ಚಿರಂಜೀವಿ, ನಯನತಾರಾ, ದಗ್ಗುಬಾಟಿ ವೆಂಕಟೇಶ್ ಮುಂತಾದವರು ನಟಿಸಿದ್ದಾರೆ. ‘ಬುಕ್ ಮೈ ಶೋ’ನಲ್ಲಿ ಈ ಸಿನಿಮಾ ಬಗ್ಗೆ ಯಾರೂ ಕೂಡ ವಿಮರ್ಶೆ ಮತ್ತು ರೇಟಿಂಗ್ ನೀಡುವಂತಿಲ್ಲ.

ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ
Chiranjeevi
ಮದನ್​ ಕುಮಾರ್​
|

Updated on: Jan 11, 2026 | 8:46 AM

Share

ಮೆಗಾ ಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ರಂದು ಬಿಡುಗಡೆ ಆಗುತ್ತಿದೆ. ಸಂಕ್ರಾಂತಿ ಪ್ರಯುಕ್ತ ಈ ಚಿತ್ರವನ್ನು ನೋಡಲು ಚಿರಂಜೀವಿ (Chiranjeevi) ಫ್ಯಾನ್ಸ್ ಕಾತರದಿಂದ ಕಾದಿದ್ದಾರೆ. ಫಸ್ಟ್ ಡೇ ಫಸ್ಟ್ ಶೋ ಈ ಚಿತ್ರವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ‘ಬುಕ್ ಮೈ ಶೋ’ (Book My Show) ಮೂಲಕ ಯಾರೂ ಕೂಡ ಈ ಸಿನಿಮಾಗೆ ರೇಟಿಂಗ್ ನೀಡುವಂತಿಲ್ಲ. ವಿಮರ್ಶೆ ತಿಳಿಸುವಂತಿಲ್ಲ! ಈ ರೀತಿ ನ್ಯಾಯಾಲಯದ ಆದೇಶ ಇದೆ. ಈ ಮೊದಲು ಕನ್ನಡದ ‘ದಿ ಡೆವಿಲ್’, ‘ಮಾರ್ಕ್’, ‘45’ ಸಿನಿಮಾಗಳು ಕೂಡ ಇದೇ ಹಾದಿಯನ್ನು ಅನುಸರಿಸಿದ್ದವು.

ದರ್ಶನ್ ಅಭಿನಯದ ‘ದಿ ಡೆವಿಲ್’, ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’, ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾಗಳು ಬಿಡುಗಡೆ ಆಗುವಾಗ ಫ್ಯಾನ್ಸ್ ವಾರ್ ನಡೆಯುತ್ತಿತ್ತು. ಆಗ ಕೆಲವರು ಬೇಕಂತಲೇ ಈ ಸಿನಿಮಾಗಳಿಗೆ ನೆಗೆಟಿವ್ ಪ್ರಚಾರ ಮಾಡುವ ಸಾಧ್ಯತೆ ಇತ್ತು. ಅದನ್ನು ತಪ್ಪಿಸಲು ಕೋರ್ಟ್​ ಮೊರೆ ಹೋಗಲಾಗಿತ್ತು. ‘ಬುಕ್ ಮೈ ಶೋ’ ರೀತಿಯ ಪ್ಲಾಟ್​ಫಾರ್ಮ್ ಮೂಲಕ ಜನರು ವಿಮರ್ಶೆ ಅಥವಾ ರೇಟಿಂಗ್ ನೀಡುವುದನ್ನು ತಡೆಯಲಾಗಿತ್ತು.

ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಸಹ ಕೋರ್ಟ್​​ ಮೊರೆ ಹೋಗಿದೆ. ಈ ಸಿನಿಮಾಗೆ ರಿವ್ಯೂ ಮತ್ತು ರೇಟಿಂಗ್ ನೀಡುವ ಆಯ್ಕೆಯನ್ನು ತೆಗೆದುಹಾಕಲಾಗಿದೆ. ಕೋರ್ಟ್ ಆದೇಶದ ಮೇರೆಗೆ ಈ ರೀತಿ ಮಾಡಲಾಗಿದೆ ಎಂದು ‘ಬುಕ್ ಮೈ ಶೋ’ ಪ್ರಕಟಿಸಿದೆ. ಸ್ಟಾರ್ ನಟರ ಸಿನಿಮಾಗಳು ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಸಿನಿಮಾಗಳ ವಿರುದ್ಧ ಅಪಪ್ರಚಾರ ಮಾಡಲು ಕೆಲವು ಕಿಡಿಗೇಡಿಗಳು ‘ಬುಕ್ ಮೈ ಶೋ’ ರೀತಿಯ ವೇದಿಕೆಗಳನ್ನು ಬಳಸಿಕೊಳ್ಳುತ್ತಾರೆ. ಅದರಿಂದಾಗಿ ಸಿನಿಮಾಗಳಿಗೆ ಹೊಡೆತ ಬೀಳುತ್ತದೆ. ಅದೇ ರೀತಿ, ಕೆಲವರು ಅತಿಯಾಗಿ ಸಿನಿಮಾವನ್ನು ಹೊಗಳುತ್ತಾರೆ. ಹಣ ಪಡೆದು ಉತ್ತಮ ರೇಟಿಂಗ್ ನೀಡಲಾಗುತ್ತದೆ. ಇದರಿಂದ ಪ್ರೇಕ್ಷಕರಿಗೆ ಮೋಸ ಆದಂತೆ ಆಗುತ್ತದೆ. ಇಂಥ ಸಮಸ್ಯೆಗಳನ್ನು ತಪ್ಪಿಸಲು ವಿಮರ್ಶೆ ಮತ್ತು ರೇಟಿಂಗ್ ನೀಡುವ ಆಯ್ಕೆಯನ್ನೇ ಚಿತ್ರತಂಡಗಳು ತೆಗೆದು ಹಾಕುತ್ತಿವೆ.

ಇದನ್ನೂ ಓದಿ: ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ

ಅನಿಲ್ ರವಿಪುಡಿ ಅವರು ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಶೈನ್ ಸ್ಕ್ರೀನ್ಸ್’ ಮತ್ತು ‘ಗೋಲ್ಡ್ ಬಾಕ್ಸ್ ಎಂಟರ್​ಟೇನ್ಮೆಂಟ್’ ಸಂಸ್ಥೆಗಳ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಚಿರಂಜೀವಿ ಜೊತೆಯಲ್ಲಿ ನಯನತಾರಾ, ದಗ್ಗುಬಾಟಿ ವೆಂಕಟೇಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ‘ದಿ ರಾಜಾ ಸಾಬ್’ ಸಿನಿಮಾಗೆ ‘ಮನ ಶಂಕರ ವರ ಪ್ರಸಾದ್ ಗಾರು’ ಚಿತ್ರ ಪೈಪೋಟಿ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು