AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 24ರಂದು ನಿರ್ದೇಶಕಿಯರ ಕಿರುಚಿತ್ರೋತ್ಸವ ‘ಅವಳ ಹೆಜ್ಜೆ’; ವಿಜೇತರಿಗೆ 1 ಲಕ್ಷ ರೂ. ಬಹುಮಾನ

ಸಿನಿಮಾ ಕ್ಷೇತ್ರದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಇದೆ. ಈ ವಿಚಾರದಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ಅಗತ್ಯವಿದೆ. ‘ಅವಳ ಹೆಜ್ಜೆ ಕಿರುಚಿತ್ರೋತ್ಸವ’ ಮೂಲಕ ಅಂಥ ಪ್ರಯತ್ನ ಆಗಲಿದೆ. ಮಹಿಳೆಯರು ನಿರ್ದೇಶಿಸಿದ ವಿಶೇಷವಾದ ಕೆಲವು ಕಿರುಚಿತ್ರಗಳ ಪ್ರದರ್ಶನ ನಡೆಯಲಿದೆ. ಸಂವಾದ ಕೂಡ ಹಮ್ಮಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಮೇ 24ರಂದು ನಿರ್ದೇಶಕಿಯರ ಕಿರುಚಿತ್ರೋತ್ಸವ ‘ಅವಳ ಹೆಜ್ಜೆ’; ವಿಜೇತರಿಗೆ 1 ಲಕ್ಷ ರೂ. ಬಹುಮಾನ
Avala Hejje Women's Short Film Festival
ಮದನ್​ ಕುಮಾರ್​
|

Updated on: May 20, 2026 | 6:10 PM

Share

ಚಿತ್ರರಂಗದಲ್ಲಿ ಮಹಿಳಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗುಬ್ಬಿವಾಣಿ ಟ್ರಸ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮೇ 24ರ ಭಾನುವಾರದಂದು ‘ಅವಳ ಹೆಜ್ಜೆ ಕಿರುಚಿತ್ರೋತ್ಸವ 2026’ (Avala Hejje Women’s Short Film Festival) ಚಲನಚಿತ್ರ ಹಬ್ಬ ಆಯೋಜನೆಗೊಂಡಿದೆ. ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7ರವರೆಗೆ ನಡೆಯಲಿರುವ ಈ ಸಿನಿಮಾ ಉತ್ಸವದಲ್ಲಿ ಮಹಿಳೆಯರೇ ನಿರ್ದೇಶಿಸಿದ ಆಯ್ದ ಕಲಾತ್ಮಕ ಹಾಗೂ ವಿಭಿನ್ನ ಕಿರುಚಿತ್ರಗಳು (Short Films) ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ಚಿತ್ರಕ್ಕೆ ಭರ್ಜರಿ 1 ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆಯಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿರುವ ಈ ಚಿತ್ರೋತ್ಸವದಲ್ಲಿ ಒಟ್ಟು 2 ಹಂತಗಳಲ್ಲಿ ಪ್ರದರ್ಶನಗಳು ನಡೆಯಲಿವೆ. ಮೊದಲ ಅವಧಿಯಲ್ಲಿ ಅನು ಕುಲಕರ್ಣಿ ಅವರ ‘ಕಾಶಿ ಕೈಲಾಸ’, ಅಶ್ವಿನಿ ಅನೀಶ್ ಅವರ ‘ಸೋರುತಿಹುದು ಮನೆಯ ಮಾಳಿಗಿ’, ಸುಪ್ರಿಯಾ ಶಂಕರ ನಿಪ್ಪಾಣಿ ಅವರ ‘ರೊಟ್ಟಿ’, ಸೀಮಾ ಶಶಿಧರ್ ಅವರ ‘ಎ ಲಿಟ್ಲ್ ಕೇರ್’ ಹಾಗೂ ಸೌರಭಾ ರಾವ್ ನಿರ್ದೇಶನದ ‘ಹುಲಿಯಪ್ಪ’ ಚಿತ್ರಗಳ ಪ್ರದರ್ಶನ ಆಗಲಿದೆ.

ಮಧ್ಯಾಹ್ನದ ನಂತರದ ದ್ವಿತೀಯ ಅವಧಿಯಲ್ಲಿ ಸುಷ್ಮಾ ಭಾರದ್ವಾಜ್ ಅವರ ‘ದಾರಿ’, ಸುನಯನಾ ಸುರೇಶ್ ಅವರ ‘ಮೌನ ರಾಗ’, ಶ್ರೇಯ ಸುನಿಲ್ ಅವರ ‘ಆ ಮಾಡಿ’, ಹರ್ಷಿತಾ ಜಿ. ಮತ್ತು ರಚನಾ ಸುವರ್ಣ ಜಂಟಿಯಾಗಿ ನಿರ್ದೇಶಿಸಿರುವ ‘ಗೆಜ್ಜೆ’ ಹಾಗೂ ವನು ಪಾಟೀಲ್ ಅವರ ‘ನಿತ್ಯ’ ಕಿರುಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕೇವಲ ಸಿನಿಮಾ ವೀಕ್ಷಣೆಗಷ್ಟೇ ಸೀಮಿತವಾಗದೆ, ಚಿತ್ರಪ್ರೇಮಿಗಳಿಗೆ ನಿರ್ದೇಶಕಿಯರೊಂದಿಗೆ ನೇರವಾಗಿ ಸಂವಹನ ನಡೆಸಲು ಪ್ರಶ್ನೋತ್ತರ ಅವಧಿಯನ್ನು ಕೂಡ ಹಮ್ಮಿಕೊಳ್ಳಲಾಗಿದೆ.

ಚಿತ್ರೋತ್ಸವದ ಪ್ರಮುಖ ಆಕರ್ಷಣೆಯಾಗಿ ಸಂಜೆ 5 ಗಂಟೆಗೆ ‘ಸಿನಿಮಾದಲ್ಲಿ ಅವಳ ಹೆಜ್ಜೆ ಅ-ಅಃ ವರೆಗೆ’ ಎಂಬ ವಿಶೇಷ ಚರ್ಚಾಗೋಷ್ಠಿ ಆಯೋಜಿತವಾಗಿದೆ. ಚಿತ್ರೋತ್ಸವದ ನಿರ್ದೇಶಕಿ ಶಾಂತಲಾ ದಾಮ್ಲ ನಡೆಸಿಕೊಡಲಿರುವ ಈ ಗೋಷ್ಠಿಯಲ್ಲಿ ಸ್ಯಾಂಡಲ್‌ವುಡ್ ನಟಿ ನೀತು ಶೆಟ್ಟಿ, ಗ್ರೀಷ್ಮಾ ಶ್ರೀಧರ್, ಸಂಗೀತಾ ನಂಜುಂಡಸ್ವಾಮಿ ಮತ್ತು ಸಂಜೋತಾ ಭಂಡಾರಿ ಭಾಗವಹಿಸಿ ಚಿತ್ರರಂಗದಲ್ಲಿ ಮಹಿಳೆಯರ ಪಯಣದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಕುಣಿ’ ಕಿರುಚಿತ್ರಕ್ಕೆ ಫಿದಾ ಆದ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು

ಸಂಜೆ 6 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ವಿಜೇತರ ಹೆಸರುಗಳನ್ನು ಪ್ರಕಟಿಸಿ, ಪ್ರಶಸ್ತಿ ಹಾಗೂ 1 ಲಕ್ಷ ರೂಪಾಯಿ ನಗದು ಬಹುಮಾನವನ್ನು ವಿತರಿಸಲಾಗುವುದು. ಸಿನಿಮಾ ಆಸಕ್ತರಿಗೆ ಇದೊಂದು ಅತ್ಯುತ್ತಮ ಸಾಂಸ್ಕೃತಿಕ ವೇದಿಕೆಯಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಟ್ರಸ್ಟ್ ಕೋರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?