AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋನಲ್ಲೇ ನಟಿಗೆ ಪ್ರಪೋಸ್​ ಮಾಡಿದ್ದ ಕಿರುತೆರೆ ನಟ; ಲಾಕ್​ಡೌನ್​ನಿಂದ ಮುರಿದು ಬಿತ್ತು ಸಂಬಂಧ

ಹಿಂದಿ ಕಿರುತೆರೆ ನಟ ಅವಿನಾಶ್​ ಸಚ್​ದೇವ್​ ಅವರು ನಟಿ ಪಲಕಾ​ ಪುರ್​ಸ್ವಾಮಿ ಜತೆ ಪ್ರೀತಿಯಲ್ಲಿದ್ದರು. 2018ರಲ್ಲಿ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಭೇಟಿ ಆಗಿದ್ದ ಇಬ್ಬರೂ ನಂತರ ಗೆಳೆಯರಾಗಿದ್ದರು.

ರಿಯಾಲಿಟಿ ಶೋನಲ್ಲೇ ನಟಿಗೆ ಪ್ರಪೋಸ್​ ಮಾಡಿದ್ದ ಕಿರುತೆರೆ ನಟ; ಲಾಕ್​ಡೌನ್​ನಿಂದ ಮುರಿದು ಬಿತ್ತು ಸಂಬಂಧ
ರಿಯಾಲಿಟಿ ಶೋನಲ್ಲೇ ನಟಿಗೆ ಪ್ರಪೋಸ್​ ಮಾಡಿದ್ದ ಕಿರುತೆರೆ ನಟ; ಲಾಕ್​ಡೌನ್​ನಿಂದ ಮುರಿದು ಬಿತ್ತು ಸಂಬಂಧ
TV9 Web
| Edited By: |

Updated on:Jul 15, 2021 | 7:02 PM

Share

ಲಾಕ್​ಡೌನ್​ನಿಂದ ಸಾಕಷ್ಟು ಸಂಬಂಧಗಳು ಮುರಿದು ಬಿದ್ದಿವೆ. ಒಬ್ಬರನ್ನೊಬ್ಬರು ಭೇಟಿ ಮಾಡಲು ಸಾಧ್ಯವಾಗದೆ ರಿಲೇಶನ್​ಶಿಪ್​ ಕೊನೆಗೊಂಡ ಉದಾಹರಣೆ ಸಾಕಷ್ಟಿದೆ. ಈಗ ಸೆಲೆಬ್ರಿಟಿ ಜೋಡಿಯೊಂದು ಲಾಕ್​ಡೌನ್​ ಕಾರಣ ನೀಡಿ ದೂರವಾಗುತ್ತಿದೆ. ಈ ವಿಚಾರವನ್ನು ಕಿರುತೆರೆ ನಟ ಖಚಿತಪಡಿಸಿದ್ದಾರೆ.

ಹಿಂದಿ ಕಿರುತೆರೆ ನಟ ಅವಿನಾಶ್​ ಸಚ್​ದೇವ್​ ಅವರು ನಟಿ ಪಲಕಾ​ ಪುರ್​ಸ್ವಾಮಿ ಜತೆ ಪ್ರೀತಿಯಲ್ಲಿದ್ದರು. 2018ರಲ್ಲಿ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಭೇಟಿ ಆಗಿದ್ದ ಇಬ್ಬರೂ ನಂತರ ಗೆಳೆಯರಾಗಿದ್ದರು. ಇವರ ಗೆಳೆತನ ಪ್ರೀತಿಗೆ ತಿರುಗಿತ್ತು.  ‘ನಚ್​ ಬಲಿಯೇ ಸೀಸನ್​ 9’ರಲ್ಲಿ ರಿಯಾಲಿಟಿಶೋನಲ್ಲಿ ಅವಿನಾಶ್ ತಮ್ಮ ಪ್ರೀತಿ ವ್ಯಕ್ತಪಡಿಸಿದ್ದರು​ . ಆ ಬಳಿಕ ಇಬ್ಬರೂ ರೋಕಾ ಕಾರ್ಯಕ್ರಮವನ್ನೂ ಮಾಡಿಕೊಂಡಿದ್ದರು. ಈಗ ಇವರ ಸಂಬಂಧ ಮುರಿದು ಬಿದ್ದಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದು ನಿಜ ಎಂದು ವಿಶಾಲ್​ ಒಪ್ಪಿಕೊಂಡಿದ್ದಾರೆ.

‘ನಮ್ಮಿಬ್ಬರ ನಡುವೆ ನಂಬಿಕೆ ವಿಚಾರದಲ್ಲಿ ಸಮಸ್ಯೆ ಆಗಿದೆ. ಹೀಗಾಗಿ ತಾತ್ಕಾಲಿಕವಾಗಿ ನಮ್ಮ ಸಂಬಂಧಕ್ಕೆ ವಿರಾಮ ಹಾಕುತ್ತಿದ್ದೇವೆ. ಹಾಗಂತ ಇದು ಪೂರ್ಣ ವಿರಾಮ ಅಲ್ಲ. ನಮ್ಮಿಬ್ಬರ ನಡುವೆ ವೈಮನಸ್ಸು ಬೆಳೆಯೋಕೆ ಕಾರಣ ಲಾಕ್​ಡೌನ್​. ಇಬ್ಬರೂ ಒಟ್ಟಾಗಿ ಸಮಯ ಕಳೆಯೋಕೆ ಆಗುತ್ತಿಲ್ಲ. ಹೀಗಾಗಿ, ನಮ್ಮ ಸಂಬಂಧದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ, ನಮ್ಮ ಸಂಬಂಧ ಕೊನೆಯಾಗಿಲ್ಲ’ ಎಂದಿದ್ದಾರೆ ಅವಿನಾಶ್​. ಇನ್ನು, ಕಮ್ಯುನಿಕೇಷನ್​ ಗ್ಯಾಪ್​ನಿಂದ ಇಬ್ಬರ ನಡುವೆ ಅಂತರ ಬೆಳೆದಿದೆ ಎಂದು ಪಲಕಾ​ ಹೇಳಿದ್ದಾರೆ.

ಅವಿನಾಶ್​ ಹಾಗೂ ಪಲಕಾ​ ಇಬ್ಬರೂ ಹೋಟೆಲ್​ ನಡೆಸುತ್ತಿದ್ದಾರೆ. ಒಂದೊಮ್ಮೆ ಇಬ್ಬರೂ ಬೇರೆ ಆದರೆ, ಅವರ ಈ​ ಉದ್ಯಮದ ಮೇಲೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೂ ಇಬ್ಬರೂ ಬೇರೆ ಆಗುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಅವಿನಾಶ್​ ಪಲಕಾ​ ಅವರು ಪರಸ್ಪರ ಅನ್​ ಫಾಲೋ ಮಾಡಿಕೊಂಡಿದ್ದಾರೆ. ಇದಾದ ಬೆನ್ನಲ್ಲೇ ಇಬ್ಬರ ನಡುವೆ ಬ್ರೇಕಪ್​ ಆಗಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಇವರಿಂದಲೇ ಸ್ಪಷ್ಟನೆ ಸಿಕ್ಕಂತಾಗಿದೆ.

ರುಬಿನಾ ದಿಲೈಕ್​-ಅವಿನಾಶ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಬ್ರೇಕಪ್​ ಆಗಿತ್ತು. ಶಾಲ್ಮಲೀ ದೇಸಾಯಿ ಅವರನ್ನು ಅವಿನಾಶ್​ ಮದುವೆ ಆಗಿದ್ದರು. ಇಬ್ಬರೂ 2017ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು.

ಇದನ್ನೂ ಓದಿ: ಕಾಟನ್​ಪೇಟೆಯಲ್ಲಿ ಸನ್ನಿ ಲಿಯೋನ್ ಡಾನ್ಸ್​; ಮತ್ತೆ ಕರ್ನಾಟಕಕ್ಕೆ ಬಂದ ಬಾಲಿವುಡ್​ ನಟಿ  

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?

Published On - 6:18 pm, Thu, 15 July 21

Follow Us
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು