AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ
ಆಲಿಯಾ ಭಟ್ - ರಣ್​​ಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on:Jun 01, 2021 | 5:56 PM

Share

ರಣಬೀರ್​ ಕಪೂರ್​ ನಟನೆಯ ‘ಯೇ ಜವಾನಿ ಹೇ ದೀವಾನಿ’ ಸಿನಿಮಾ ತೆರೆಕಂಡು 8 ವರ್ಷಗಳು ಕಳೆದಿವೆ. 2013ರಲ್ಲಿ ತೆರೆಗೆ ಬಂದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಇತ್ತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇಂದಿಗೂ ಸಿನಿಮಾವನ್ನು ಕಣ್ತುಂಬಿಕೊಂಡು ಆನಂದಿಸುವವರ ಸಂಖ್ಯೆ ದೊಡ್ಡದಿದೆ. ಈ ಚಿತ್ರ ತೆರೆಕಂಡ ನಂತರದಲ್ಲಿ ರಣಬೀರ್ ಮನಸ್ಸು ಬದಲಾಯಿತಂತೆ. ಈ ಬಗ್ಗೆ ರಣಬೀರ್ ಹೇಳಿಕೊಂಡಿದ್ದಾರೆ.

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ರಣಬೀರ್​ ಬನ್ನಿ ಆಗಿ ಕಾಣಿಸಿಕೊಂಡಿದ್ದರು. ಮದುವೆ, ಮಕ್ಕಳು, ಕೆಲಸ ಎನ್ನುವ ಜಂಜಾಟವಿಲ್ಲದೆ ಬದುಕುವ ವ್ಯಕ್ತಿ ಬನ್ನಿ. ಆತ ಜೀವನದಲ್ಲಿ ಹೊಸತನ್ನು ಹುಡುಕುವ ವ್ಯಕ್ತಿ. ಈ ಪಾತ್ರ ಅನೇಕರ ಮೇಲೆ ಪ್ರಭಾವ ಬೀರಿತ್ತು.

ಈ ಸಿನಿಮಾ ರಿಲೀಸ್​ ಆಗುವಾಗ ರಣಬೀರ್​ ವಯಸ್ಸು 30. ಆಗಲೇ ಅವರು ಮದುವೆ ಆಗಿ, ಮಕ್ಕಳನ್ನು ಮಾಡಿಕೊಂಡು ಸಿಂಪಲ್​ ಆಗಿ ಜೀವನ ನಡೆಸುವ ಆಲೋಚನೆಯಲ್ಲಿದ್ದರು. ಆಗ ಅವರಿಗೆ ಸಿಕ್ಕಿದ್ದು ನಿರ್ದೇಶಕ ಅಯಾನ್. ಅವರು,ಮದುವೆ ಮಕ್ಕಳನ್ನು ಇಷ್ಟು ಬೇಗ ಮಾಡಿಕೊಳ್ಳದೆ, ಜಗತ್ತನ್ನು ನೋಡಬೇಕೆನ್ನುವ ಕಿವಿಮಾತು ಹೇಳಿದ್ದರು. ಇದನ್ನು ಗಂಭೀರವಾಗಿ ಸ್ವೀಕರಿಸಿದ ರಣಬೀರ್​ ಹಾಗೆಯೇ ಮಾಡಿದರು. ಹೀಗಾಗಿ, ಆ ಸಂದರ್ಭದಲ್ಲಿ ಅವರು ಮದುವೆಯಿಂದ ಸ್ವಲ್ಪ ವರ್ಷ ದೂರ ಇರುವ ಆಲೋಚನೆಗೆ ಬಂದರು.

ಆಲಿಯಾ ಭಟ್​-ರಣಬೀರ್​ ಕಳೆದ ಮೂರು ವರ್ಷಗಳಿಂದ ರಿಲೇಶನ್​ ಶಿಪ್​ನಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಮಾಲ್ಡೀವ್ಸ್​ಗೆ ತೆರಳಿ ಟ್ರೋಲ್​ ಆಗಿದ್ದರು. ‘ಬ್ರಹ್ಮಾಸ್ತ್ರ’ ಸಿನಿಮಾ ಮೂಲಕ ಅಯಾನ್​ ಹಾಗೂ ರಣಬೀರ್​ ಮತ್ತೆ ಒಂದಾಗಿದ್ದಾರೆ. ಈ ಚಿತ್ರದಲ್ಲಿ ಆಲಿಯಾ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ಹಿಂದೆ ಬಿದ್ದಿವೆ. ಇನ್ನು, ಈ ಸಿನಿಮಾ ಕಣ್ತುಂಬಿಕೊಳ್ಳೋಕೆ ಪ್ರೇಕ್ಷಕರು ಕಾತುರರಾಗಿದ್ದಾರೆ. ರಣಬೀರ್​ ಹಾಗೂ ಆಲಿಯಾ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೊದಲ ಚಿತ್ರ ಇದಾಗಿದೆ. 2022ರ ವೇಳೆಗೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

Published On - 5:51 pm, Tue, 1 June 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?