AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ
ಆಲಿಯಾ ಭಟ್ - ರಣ್​​ಬೀರ್ ಕಪೂರ್
Follow us
ರಾಜೇಶ್ ದುಗ್ಗುಮನೆ
|

Updated on:Jun 01, 2021 | 5:56 PM

ರಣಬೀರ್​ ಕಪೂರ್​ ನಟನೆಯ ‘ಯೇ ಜವಾನಿ ಹೇ ದೀವಾನಿ’ ಸಿನಿಮಾ ತೆರೆಕಂಡು 8 ವರ್ಷಗಳು ಕಳೆದಿವೆ. 2013ರಲ್ಲಿ ತೆರೆಗೆ ಬಂದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಇತ್ತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇಂದಿಗೂ ಸಿನಿಮಾವನ್ನು ಕಣ್ತುಂಬಿಕೊಂಡು ಆನಂದಿಸುವವರ ಸಂಖ್ಯೆ ದೊಡ್ಡದಿದೆ. ಈ ಚಿತ್ರ ತೆರೆಕಂಡ ನಂತರದಲ್ಲಿ ರಣಬೀರ್ ಮನಸ್ಸು ಬದಲಾಯಿತಂತೆ. ಈ ಬಗ್ಗೆ ರಣಬೀರ್ ಹೇಳಿಕೊಂಡಿದ್ದಾರೆ.

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ರಣಬೀರ್​ ಬನ್ನಿ ಆಗಿ ಕಾಣಿಸಿಕೊಂಡಿದ್ದರು. ಮದುವೆ, ಮಕ್ಕಳು, ಕೆಲಸ ಎನ್ನುವ ಜಂಜಾಟವಿಲ್ಲದೆ ಬದುಕುವ ವ್ಯಕ್ತಿ ಬನ್ನಿ. ಆತ ಜೀವನದಲ್ಲಿ ಹೊಸತನ್ನು ಹುಡುಕುವ ವ್ಯಕ್ತಿ. ಈ ಪಾತ್ರ ಅನೇಕರ ಮೇಲೆ ಪ್ರಭಾವ ಬೀರಿತ್ತು.

ಈ ಸಿನಿಮಾ ರಿಲೀಸ್​ ಆಗುವಾಗ ರಣಬೀರ್​ ವಯಸ್ಸು 30. ಆಗಲೇ ಅವರು ಮದುವೆ ಆಗಿ, ಮಕ್ಕಳನ್ನು ಮಾಡಿಕೊಂಡು ಸಿಂಪಲ್​ ಆಗಿ ಜೀವನ ನಡೆಸುವ ಆಲೋಚನೆಯಲ್ಲಿದ್ದರು. ಆಗ ಅವರಿಗೆ ಸಿಕ್ಕಿದ್ದು ನಿರ್ದೇಶಕ ಅಯಾನ್. ಅವರು,ಮದುವೆ ಮಕ್ಕಳನ್ನು ಇಷ್ಟು ಬೇಗ ಮಾಡಿಕೊಳ್ಳದೆ, ಜಗತ್ತನ್ನು ನೋಡಬೇಕೆನ್ನುವ ಕಿವಿಮಾತು ಹೇಳಿದ್ದರು. ಇದನ್ನು ಗಂಭೀರವಾಗಿ ಸ್ವೀಕರಿಸಿದ ರಣಬೀರ್​ ಹಾಗೆಯೇ ಮಾಡಿದರು. ಹೀಗಾಗಿ, ಆ ಸಂದರ್ಭದಲ್ಲಿ ಅವರು ಮದುವೆಯಿಂದ ಸ್ವಲ್ಪ ವರ್ಷ ದೂರ ಇರುವ ಆಲೋಚನೆಗೆ ಬಂದರು.

ಆಲಿಯಾ ಭಟ್​-ರಣಬೀರ್​ ಕಳೆದ ಮೂರು ವರ್ಷಗಳಿಂದ ರಿಲೇಶನ್​ ಶಿಪ್​ನಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಮಾಲ್ಡೀವ್ಸ್​ಗೆ ತೆರಳಿ ಟ್ರೋಲ್​ ಆಗಿದ್ದರು. ‘ಬ್ರಹ್ಮಾಸ್ತ್ರ’ ಸಿನಿಮಾ ಮೂಲಕ ಅಯಾನ್​ ಹಾಗೂ ರಣಬೀರ್​ ಮತ್ತೆ ಒಂದಾಗಿದ್ದಾರೆ. ಈ ಚಿತ್ರದಲ್ಲಿ ಆಲಿಯಾ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ಹಿಂದೆ ಬಿದ್ದಿವೆ. ಇನ್ನು, ಈ ಸಿನಿಮಾ ಕಣ್ತುಂಬಿಕೊಳ್ಳೋಕೆ ಪ್ರೇಕ್ಷಕರು ಕಾತುರರಾಗಿದ್ದಾರೆ. ರಣಬೀರ್​ ಹಾಗೂ ಆಲಿಯಾ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೊದಲ ಚಿತ್ರ ಇದಾಗಿದೆ. 2022ರ ವೇಳೆಗೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

Published On - 5:51 pm, Tue, 1 June 21

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್