AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ
ಆಲಿಯಾ ಭಟ್ - ರಣ್​​ಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on:Jun 01, 2021 | 5:56 PM

Share

ರಣಬೀರ್​ ಕಪೂರ್​ ನಟನೆಯ ‘ಯೇ ಜವಾನಿ ಹೇ ದೀವಾನಿ’ ಸಿನಿಮಾ ತೆರೆಕಂಡು 8 ವರ್ಷಗಳು ಕಳೆದಿವೆ. 2013ರಲ್ಲಿ ತೆರೆಗೆ ಬಂದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಇತ್ತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇಂದಿಗೂ ಸಿನಿಮಾವನ್ನು ಕಣ್ತುಂಬಿಕೊಂಡು ಆನಂದಿಸುವವರ ಸಂಖ್ಯೆ ದೊಡ್ಡದಿದೆ. ಈ ಚಿತ್ರ ತೆರೆಕಂಡ ನಂತರದಲ್ಲಿ ರಣಬೀರ್ ಮನಸ್ಸು ಬದಲಾಯಿತಂತೆ. ಈ ಬಗ್ಗೆ ರಣಬೀರ್ ಹೇಳಿಕೊಂಡಿದ್ದಾರೆ.

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ರಣಬೀರ್​ ಬನ್ನಿ ಆಗಿ ಕಾಣಿಸಿಕೊಂಡಿದ್ದರು. ಮದುವೆ, ಮಕ್ಕಳು, ಕೆಲಸ ಎನ್ನುವ ಜಂಜಾಟವಿಲ್ಲದೆ ಬದುಕುವ ವ್ಯಕ್ತಿ ಬನ್ನಿ. ಆತ ಜೀವನದಲ್ಲಿ ಹೊಸತನ್ನು ಹುಡುಕುವ ವ್ಯಕ್ತಿ. ಈ ಪಾತ್ರ ಅನೇಕರ ಮೇಲೆ ಪ್ರಭಾವ ಬೀರಿತ್ತು.

ಈ ಸಿನಿಮಾ ರಿಲೀಸ್​ ಆಗುವಾಗ ರಣಬೀರ್​ ವಯಸ್ಸು 30. ಆಗಲೇ ಅವರು ಮದುವೆ ಆಗಿ, ಮಕ್ಕಳನ್ನು ಮಾಡಿಕೊಂಡು ಸಿಂಪಲ್​ ಆಗಿ ಜೀವನ ನಡೆಸುವ ಆಲೋಚನೆಯಲ್ಲಿದ್ದರು. ಆಗ ಅವರಿಗೆ ಸಿಕ್ಕಿದ್ದು ನಿರ್ದೇಶಕ ಅಯಾನ್. ಅವರು,ಮದುವೆ ಮಕ್ಕಳನ್ನು ಇಷ್ಟು ಬೇಗ ಮಾಡಿಕೊಳ್ಳದೆ, ಜಗತ್ತನ್ನು ನೋಡಬೇಕೆನ್ನುವ ಕಿವಿಮಾತು ಹೇಳಿದ್ದರು. ಇದನ್ನು ಗಂಭೀರವಾಗಿ ಸ್ವೀಕರಿಸಿದ ರಣಬೀರ್​ ಹಾಗೆಯೇ ಮಾಡಿದರು. ಹೀಗಾಗಿ, ಆ ಸಂದರ್ಭದಲ್ಲಿ ಅವರು ಮದುವೆಯಿಂದ ಸ್ವಲ್ಪ ವರ್ಷ ದೂರ ಇರುವ ಆಲೋಚನೆಗೆ ಬಂದರು.

ಆಲಿಯಾ ಭಟ್​-ರಣಬೀರ್​ ಕಳೆದ ಮೂರು ವರ್ಷಗಳಿಂದ ರಿಲೇಶನ್​ ಶಿಪ್​ನಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಮಾಲ್ಡೀವ್ಸ್​ಗೆ ತೆರಳಿ ಟ್ರೋಲ್​ ಆಗಿದ್ದರು. ‘ಬ್ರಹ್ಮಾಸ್ತ್ರ’ ಸಿನಿಮಾ ಮೂಲಕ ಅಯಾನ್​ ಹಾಗೂ ರಣಬೀರ್​ ಮತ್ತೆ ಒಂದಾಗಿದ್ದಾರೆ. ಈ ಚಿತ್ರದಲ್ಲಿ ಆಲಿಯಾ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ಹಿಂದೆ ಬಿದ್ದಿವೆ. ಇನ್ನು, ಈ ಸಿನಿಮಾ ಕಣ್ತುಂಬಿಕೊಳ್ಳೋಕೆ ಪ್ರೇಕ್ಷಕರು ಕಾತುರರಾಗಿದ್ದಾರೆ. ರಣಬೀರ್​ ಹಾಗೂ ಆಲಿಯಾ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೊದಲ ಚಿತ್ರ ಇದಾಗಿದೆ. 2022ರ ವೇಳೆಗೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

Published On - 5:51 pm, Tue, 1 June 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?