AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು.

ರಣಬೀರ್ ಕಪೂರ್ ಮದುವೆ ಆಗದೆ ಇರಲು ಕಾರಣವಾಗಿದ್ದು ಈ ವ್ಯಕ್ತಿ; ಹೆಸರು ಬಹಿರಂಗ
ಆಲಿಯಾ ಭಟ್ - ರಣ್​​ಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on:Jun 01, 2021 | 5:56 PM

Share

ರಣಬೀರ್​ ಕಪೂರ್​ ನಟನೆಯ ‘ಯೇ ಜವಾನಿ ಹೇ ದೀವಾನಿ’ ಸಿನಿಮಾ ತೆರೆಕಂಡು 8 ವರ್ಷಗಳು ಕಳೆದಿವೆ. 2013ರಲ್ಲಿ ತೆರೆಗೆ ಬಂದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಇತ್ತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇಂದಿಗೂ ಸಿನಿಮಾವನ್ನು ಕಣ್ತುಂಬಿಕೊಂಡು ಆನಂದಿಸುವವರ ಸಂಖ್ಯೆ ದೊಡ್ಡದಿದೆ. ಈ ಚಿತ್ರ ತೆರೆಕಂಡ ನಂತರದಲ್ಲಿ ರಣಬೀರ್ ಮನಸ್ಸು ಬದಲಾಯಿತಂತೆ. ಈ ಬಗ್ಗೆ ರಣಬೀರ್ ಹೇಳಿಕೊಂಡಿದ್ದಾರೆ.

‘ಯೇ ಜವಾನಿ ಹೇ ದೀವಾನಿ’ ಸಿನಿಮಾದಲ್ಲಿ ರಣಬೀರ್, ದೀಪಿಕಾ, ಕಲ್ಕಿ ಕೊಚ್ಲಿನ್​, ಆದಿತ್ಯ ರಾಯ್​ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ರಣಬೀರ್​ ಬನ್ನಿ ಆಗಿ ಕಾಣಿಸಿಕೊಂಡಿದ್ದರು. ಮದುವೆ, ಮಕ್ಕಳು, ಕೆಲಸ ಎನ್ನುವ ಜಂಜಾಟವಿಲ್ಲದೆ ಬದುಕುವ ವ್ಯಕ್ತಿ ಬನ್ನಿ. ಆತ ಜೀವನದಲ್ಲಿ ಹೊಸತನ್ನು ಹುಡುಕುವ ವ್ಯಕ್ತಿ. ಈ ಪಾತ್ರ ಅನೇಕರ ಮೇಲೆ ಪ್ರಭಾವ ಬೀರಿತ್ತು.

ಈ ಸಿನಿಮಾ ರಿಲೀಸ್​ ಆಗುವಾಗ ರಣಬೀರ್​ ವಯಸ್ಸು 30. ಆಗಲೇ ಅವರು ಮದುವೆ ಆಗಿ, ಮಕ್ಕಳನ್ನು ಮಾಡಿಕೊಂಡು ಸಿಂಪಲ್​ ಆಗಿ ಜೀವನ ನಡೆಸುವ ಆಲೋಚನೆಯಲ್ಲಿದ್ದರು. ಆಗ ಅವರಿಗೆ ಸಿಕ್ಕಿದ್ದು ನಿರ್ದೇಶಕ ಅಯಾನ್. ಅವರು,ಮದುವೆ ಮಕ್ಕಳನ್ನು ಇಷ್ಟು ಬೇಗ ಮಾಡಿಕೊಳ್ಳದೆ, ಜಗತ್ತನ್ನು ನೋಡಬೇಕೆನ್ನುವ ಕಿವಿಮಾತು ಹೇಳಿದ್ದರು. ಇದನ್ನು ಗಂಭೀರವಾಗಿ ಸ್ವೀಕರಿಸಿದ ರಣಬೀರ್​ ಹಾಗೆಯೇ ಮಾಡಿದರು. ಹೀಗಾಗಿ, ಆ ಸಂದರ್ಭದಲ್ಲಿ ಅವರು ಮದುವೆಯಿಂದ ಸ್ವಲ್ಪ ವರ್ಷ ದೂರ ಇರುವ ಆಲೋಚನೆಗೆ ಬಂದರು.

ಆಲಿಯಾ ಭಟ್​-ರಣಬೀರ್​ ಕಳೆದ ಮೂರು ವರ್ಷಗಳಿಂದ ರಿಲೇಶನ್​ ಶಿಪ್​ನಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಮಾಲ್ಡೀವ್ಸ್​ಗೆ ತೆರಳಿ ಟ್ರೋಲ್​ ಆಗಿದ್ದರು. ‘ಬ್ರಹ್ಮಾಸ್ತ್ರ’ ಸಿನಿಮಾ ಮೂಲಕ ಅಯಾನ್​ ಹಾಗೂ ರಣಬೀರ್​ ಮತ್ತೆ ಒಂದಾಗಿದ್ದಾರೆ. ಈ ಚಿತ್ರದಲ್ಲಿ ಆಲಿಯಾ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ಹಿಂದೆ ಬಿದ್ದಿವೆ. ಇನ್ನು, ಈ ಸಿನಿಮಾ ಕಣ್ತುಂಬಿಕೊಳ್ಳೋಕೆ ಪ್ರೇಕ್ಷಕರು ಕಾತುರರಾಗಿದ್ದಾರೆ. ರಣಬೀರ್​ ಹಾಗೂ ಆಲಿಯಾ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೊದಲ ಚಿತ್ರ ಇದಾಗಿದೆ. 2022ರ ವೇಳೆಗೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

Published On - 5:51 pm, Tue, 1 June 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!