AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಆದವರಿಗೆ ಅಟ್ರ್ಯಾಕ್ಟ್ ಆಗಲ್ಲ’; ಶೋಯೆಬ್ ಜೊತೆ ಸಂಬಂಧ ಕಲ್ಪಿಸಿದವರಿಗೆ ಪಾಕ್ ನಟಿಯ ಉತ್ತರ

ಶೋಯೆಬ್ ಮಲ್ಲಿಕ್ ಹಾಗೂ ಸಾನಿಯಾ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇವರ ದಾಂಪತ್ಯಕ್ಕೆ ಆಯೆಶಾ ಹುಳಿ ಹಿಂಡುವ ಕೆಲಸ ಮಾಡಿದ್ದರು ಎಂದು ಹೇಳಲಾಗಿತ್ತು.

‘ಮದುವೆ ಆದವರಿಗೆ ಅಟ್ರ್ಯಾಕ್ಟ್ ಆಗಲ್ಲ’; ಶೋಯೆಬ್ ಜೊತೆ ಸಂಬಂಧ ಕಲ್ಪಿಸಿದವರಿಗೆ ಪಾಕ್ ನಟಿಯ ಉತ್ತರ
ಆಯೆಶಾ-ಸಾನಿಯಾ, ಶೋಯೆಬ್
ರಾಜೇಶ್ ದುಗ್ಗುಮನೆ
|

Updated on: Feb 22, 2023 | 3:44 PM

Share

ಪಾಕ್ ಕ್ರಿಕೆಟರ್ ಶೋಯೆಬ್ ಮಲ್ಲಿಕ್ (Shoaib Malik) ಹಾಗೂ ಸಾನಿಯಾ ಮಿರ್ಜಾ ದಾಂಪತ್ಯ ಕೊನೆಯಾಗಲಿದೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಅಷ್ಟೇ ಅಲ್ಲ, ಇದಕ್ಕೆ ಪಾಕ್ ನಟಿ ಆಯೆಶಾ ಓಮರ್ (Ayesha Omar) ಕಾರಣ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ಟಾಕ್ ಶೋ ಒಂದರಲ್ಲಿ ಆಯೆಶಾ ಮಾತನಾಡಿದ್ದಾರೆ. ‘ಮದುವೆ ಆದವರಿಗೆ ನಾನು ಅಟ್ರ್ಯಾಕ್ಟ್​ ಆಗಲ್ಲ’ ಎಂದು ನೇರ ಮಾತುಗಳಿಂದ ಅವರು ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶೋಯೆಬ್ ಮಲ್ಲಿಕ್ ಹಾಗೂ ಸಾನಿಯಾ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇವರ ದಾಂಪತ್ಯಕ್ಕೆ ಆಯೆಶಾ ಹುಳಿ ಹಿಂಡುವ ಕೆಲಸ ಮಾಡಿದ್ದರು ಎಂದು ಹೇಳಲಾಗಿತ್ತು. ಈ ವದಂತಿ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಅನೇಕರು ಶೋಯೆಬ್ ಮಲ್ಲಿಕ್ ಅವರನ್ನು ದೂರಿದರೆ ಇನ್ನೂ ಕೆಲವರು ಆಯೆಶಾ ವಿರುದ್ಧ ಕಿಡಿಕಾರಿದ್ದರು. ಪಾಕ್​ನ ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ನಡೆಸಿಕೊಡುವ ಟಾಕ್​ಶೋನಲ್ಲಿ ಆಯೆಶಾ ಈ ಬಗ್ಗೆ ಮಾತನಾಡಿದ್ದಾರೆ.

‘ನೀವು ಶೋಯೆಬ್ ಮಲ್ಲಿಕ್ ಜೊತೆ ಡೇಟಿಂಗ್ ಮಾಡುತ್ತಿದ್ದೀರಂತೆ ಹೌದೇ’ ಎಂದು ಶೋಯೆಬ್ ಅಖ್ತರ್ ಅವರು ಆಯೆಶಾ ಬಳಿ ಕೇಳಿದರು. ಇದಕ್ಕೆ ಉತ್ತರಿಸಿದ ಅವರು, ‘ಇದನ್ನು ನಿಮಗೆ ಹೇಳಿದ್ದು ಯಾರು’ ಎಂದು ಆಯೆಶಾ ಮರುಪ್ರಶ್ನೆ ಹಾಕಿದರು. ಆಗ ಅಖ್ತರ್ ಅವರು, ಎಲ್ಲೋ ಓದಿದ್ದು ಎಂದರು. ‘ನಾನು ಮದುವೆ ಆದ ವ್ಯಕ್ತಿಗೆ ಅಥವಾ ಕಮಿಟ್ ಆದವರಿಗೆ ಆಕರ್ಷಿತಗೊಳ್ಳುವುದಿಲ್ಲ. ನಾನು ಹೇಗೆ ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ಆಯೆಶಾ ಹೇಳಿದರು.

ಇದನ್ನೂ ಓದಿ: ‘ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’: ‘ರಾವಲ್ಪಿಂಡಿ ಎಕ್ಸ್‌ಪ್ರೆಸ್; ವೇಗಕ್ಕೆ ಬ್ರೇಕ್ ಹಾಕಿದ ಶೋಯೆಬ್ ಅಖ್ತರ್

ಈ ಮೊದಲು ಈ ವಿಚಾರವಾಗಿ ಅವರು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ‘ಅವರು ಖುಷಿಯಿಂದ ಮದುವೆ ಆಗಿದ್ದಾರೆ. ನಾನು ಇಬ್ಬರನ್ನೂ ಗೌರವಿಸುತ್ತೇನೆ. ಶೋಯೆಬ್ ಹಾಗೂ ನಾನು ಒಳ್ಳೆಯ ಫ್ರೆಂಡ್ಸ್. ನಾವಿಬ್ಬರೂ ಪರಸ್ಪರ ಗೌರವಿಸುತ್ತೇವೆ. ಈ ರೀತಿಯ ಸಂಬಂಧಗಳು ಜಗತ್ತಿನಲ್ಲಿ ಇವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!