AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ: ದಿ ಎಪಿಕ್’ ರಿಲೀಸ್​ಗೂ ಮೊದಲು ರಾಜಮೌಳಿ-ಪ್ರಭಾಸ್​ಗೆ ಸುದೀಪ್ ಅಭಿಮಾನಿಗಳ ಎಚ್ಚರಿಕೆ

ಬಾಹುಬಲಿ: ದಿ ಎಪಿಕ್ ಅಕ್ಟೋಬರ್ 31ರಂದು ತೆರೆಗೆ ಬರುತ್ತಿದೆ. 10 ವರ್ಷ ಪೂರೈಸಿದ ಬಾಹುಬಲಿ ಸಂಭ್ರಮಕ್ಕಾಗಿ ಸಿದ್ಧವಾಗಿರುವ ಈ ಚಿತ್ರದಲ್ಲಿ ಸುದೀಪ್ ಅವರ ಅಸ್ಲಾಮ್ ಖಾನ್ ಪಾತ್ರದ ದೃಶ್ಯದ ಬಗ್ಗೆ ಅಭಿಮಾನಿಗಳಿಗೆ ಆತಂಕವಿದೆ. ಒಂದು ವೇಳೆ ಸುದೀಪ್ ದೃಶ್ಯ ತೆಗೆದುಹಾಕಿದರೆ, ರಾಜಮೌಳಿ ಮತ್ತು ಪ್ರಭಾಸ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸುವುದಾಗಿ ಸುದೀಪ್ ಫ್ಯಾನ್ಸ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ಬಾಹುಬಲಿ: ದಿ ಎಪಿಕ್’ ರಿಲೀಸ್​ಗೂ ಮೊದಲು ರಾಜಮೌಳಿ-ಪ್ರಭಾಸ್​ಗೆ ಸುದೀಪ್ ಅಭಿಮಾನಿಗಳ ಎಚ್ಚರಿಕೆ
ಬಾಹುಬಲಿ
ರಾಜೇಶ್ ದುಗ್ಗುಮನೆ
|

Updated on: Oct 30, 2025 | 11:28 AM

Share

‘ಬಾಹುಬಲಿ: ದಿ ಎಪಿಕ್’ (Bahubali: The Epic) ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಬಾಹುಬಲಿ: ದಿ ಬಿಗಿನಿಂಗ್’ ಹಾಗೂ ‘ಬಾಹುಬಲಿ 2: ದಿ ಕನ್​ಕ್ಲ್ಯೂಶನ್’ ಸಿನಿಮಾಗಳನ್ನು ಒಂದುಗೂಡಿಸಿ ‘ಬಾಹುಬಲಿ: ದಿ ಎಪಿಕ್’ ಸಿನಿಮಾ ಸಿದ್ಧಗೊಂಡಿದೆ. ‘ಬಾಹುಬಲಿ’ ಸಿನಿಮಾ ರಿಲೀಸ್ ಆಗಿ 10 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸುದೀಪ್ ಅಭಿಮಾನಿಗಳು ಒಂದು ದೊಡ್ಡ ಎಚ್ಚರಿಕೆ ನೀಡಿದ್ದಾರೆ.

ಸುದೀಪ್ ಅವರು ‘ಬಾಹುಬಲಿ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಹೆಸರು ಅಸ್ಲಾಮ್ ಖಾನ್. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಅವರು ತೆರೆಮೇಲೆ ಕಾಣಿಸಿಕೊಳ್ಳೋದು ಕೆಲವೇ ನಿಮಿಷ ಆದರೂ ಈ ಪಾತ್ರ ಗಮನ ಸೆಳೆಯುವ ರೀತಿಯಲ್ಲಿ ಇತ್ತು. ಈಗ ‘ಬಾಹುಬಲಿ: ದಿ ಎಪಿಕ್’ ಚಿತ್ರದಲ್ಲಿ ಈ ದೃಶ್ಯ ಇರುತ್ತದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ
Image
‘ನನ್ನ ಮತ್ತು ಅವರ ಮಧ್ಯೆ ಯಾರೂ ಬರಬೇಡಿ’; ಅಶ್ವಿನಿಗೆ ಎಚ್ಚರಿಸಿದ ರಕ್ಷಿತಾ
Image
ಸೇಡು ತೀರಿಸಿಕೊಳ್ಳಲು ತಮ್ಮದೇ ತಂಡದ ರಾಶಿಕಾಗೆ ಮಣ್ಣು ಮುಕ್ಕಿಸಿದ ಗಿಲ್ಲಿ ನಟ
Image
ಸಾಯುವುದಕ್ಕೂ ಸರಿಯಾಗಿ ಒಂದು ವರ್ಷ ಮೊದಲು ಅಪ್ಪು ಮಾಡಿದ ಒಳ್ಳೆಯ ಕೆಲಸ ನೋಡಿ

ಇದನ್ನೂ ಓದಿ: ಬಿಡುಗಡೆ ಆಯ್ತು ‘ಬಾಹುಬಲಿ: ದಿ ಎಪಿಕ್’ ಟೀಸರ್, ವಿಶೇಷತೆಯೇನು?

‘ಬಾಹುಬಲಿ: ದಿ ಎಪಿಕ್’ ಸಿನಿಮಾದ ಅವಧಿ 3 ಗಂಟೆ 45 ನಿಮಿಷ ಇದೆ. ಇದರಲ್ಲಿ ಹಲವು ವಿಚಾರಗಳನ್ನು ರಾಜಮೌಳಿ ಅವರು ತೋರಿಸಬೇಕಿದೆ. ಆದರೆ, ಅದು ಸಣ್ಣ ವಿಚಾರ ಏನು ಅಲ್ಲ. ಈ ವೇಳೆ ಹಲವು ದೃಶ್ಯಗಳನ್ನು ರಾಜಮೌಳಿ ಕೈ ಬಿಡಬೇಕಾದ ಪರಿಸ್ಥಿತಿ ಎದುರಾಗಬಹುದು. ಈಗ ಸುದೀಪ್ ದೃಶ್ಯ ಇರುತ್ತದೆಯೋ ಅಥವಾ ಇಲ್ಲವೋ ಎಂಬ ಆತಂಕ ಸುದೀಪ್ ಅಭಿಮಾನಿಗಳಿಗೆ ಮೂಡಿದೆ.

ಸುದೀಪ್ ಪಾತ್ರದ ಬಗ್ಗೆ ಮಾಡಲಾದ ಟ್ವೀಟ್

ಬ್ಲ್ಯಾಕ್ ಆ್ಯಡಮ್ ಹೆಸರಿನ ಟ್ವಿಟರ್ ಖಾತೆ ಮೂಲಕ ಪೋಸ್ಟ್ ಒಂದನ್ನು ಹಾಕಲಾಗಿದೆ. ಇವರು ತಮ್ಮನ್ನು ಸುದೀಪ್ ಅಭಿಮಾನಿ ಎಂದು ಕರೆದುಕೊಂಡಿದ್ದಾರೆ. ‘ಕೆಳಗೆ ತೋರಿಸಿದ (ಬಾಹುಬಲಿ ಸಿನಿಮಾದ ಸುದೀಪ್ ಇರೋ ದೃಶ್ಯ) ದೃಶ್ಯ ಬಾಹುಬಲಿ ದಿ ಎಪಿಕ್ ಚಿತ್ರದಿಂದ ತೆಗೆಯಲ್ಪಟ್ಟರೆ ಪ್ರಭಾಸ್ ಹಾಗೂ ರಾಜಮೌಳಿ ಅವರುಗಳು ಸುದೀಪ್ ಅಭಿಮಾನಿಗಳಿಂದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ಕರ್ನಾಟಕದಲ್ಲಿ ನಿಮ್ಮ ಸಿನಿಮಾಗಳನ್ನು ಬಹಿಷ್ಕಾರ ಮಾಡುತ್ತೇವೆ. ಇದು ಕಠಿಣ ಎಚ್ಚರಿಕೆ’ ಎಂದು ಬರೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ