AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಜತೆ ವಿವಾಹಿತ ಹೀರೋ ಸುತ್ತಾಟ; ರಸ್ತೆಯಲ್ಲಿ ರಂಪ ಮಾಡಿ ನಟಿಗೆ ಥಳಿಸಿದ ಪತ್ನಿ; ವಿಡಿಯೋ ವೈರಲ್​

Prakruti Mishra Viral Video: ಬಾಬುಶಾನ್​ ಮೊಹಂತಿ ಮತ್ತು ಪ್ರಕೃತಿ ಮಿಶ್ರಾ ಒಂದೇ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಟನ ಪತ್ನಿ ಬಂದು ಅಡ್ಡಗಟ್ಟಿದ್ದಾರೆ. ಅಲ್ಲದೇ ಪ್ರಕೃತಿ ಮೇಲೆ ಅವರು ಹಲ್ಲೆ ಮಾಡಿದ್ದಾರೆ.

ನಟಿ ಜತೆ ವಿವಾಹಿತ ಹೀರೋ ಸುತ್ತಾಟ; ರಸ್ತೆಯಲ್ಲಿ ರಂಪ ಮಾಡಿ ನಟಿಗೆ ಥಳಿಸಿದ ಪತ್ನಿ; ವಿಡಿಯೋ ವೈರಲ್​
ನಟಿ ಮೇಲೆ ಹಲ್ಲೆಯ ವೈರಲ್​ ವಿಡಿಯೋ
TV9 Web
| Updated By: ಮದನ್​ ಕುಮಾರ್​|

Updated on:Jul 25, 2022 | 8:21 AM

Share

ಸೆಲೆಬ್ರಿಟಿಗಳ ಸಂಸಾರದ ಗಲಾಟೆ ತುಂಬ ವೇಗವಾಗಿ ಜಗಜ್ಜಾಹೀರಾಗುತ್ತದೆ. ಈ ವಿಚಾರದಲ್ಲಿ ನಟ-ನಟಿಯರು ಎಷ್ಟು ಹುಷಾರಾಗಿದ್ದರೂ ಸಾಲದು. ಕೆಲವೇ ದಿನಗಳ ಹಿಂದೆ ತೆಲುಗು ನಟ ನರೇಶ್​ ಹಾಗೂ ಅವರ ಪತ್ನಿ ರಮ್ಯಾ ರಘುಪತಿ ನಡುವೆ ಇಂಥ ಜಟಾಪಟಿ ಏರ್ಪಟ್ಟಿತ್ತು. ನರೇಶ್​ ಜೊತೆ ಪವಿತ್ರಾ ಲೋಕೇಶ್​ ಅವರಿಗೆ ಅಫೇರ್​ ಇದೆ ಎಂದು ರಮ್ಯಾ ಆರೋಪಿಸಿದ್ದೂ ಅಲ್ಲದೇ ಚಪ್ಪಲಿ ಹಿಡಿದು ಹೊಡೆದಾಟಕ್ಕೆ ನಿಂತಿದ್ದರು. ಈಗ ಒಡಿಯಾ ಚಿತ್ರರಂಗದಲ್ಲೂ ಇದೇ ರೀತಿಯ ಘಟನೆ ನಡೆದಿದೆ. ನಟ ಬಾಬುಶಾನ್​ ಮೊಹಂತಿ (Babushaan Mohanty) ಅವರು ನಟಿ ಪ್ರಕೃತಿ ವಿಶ್ರಾ (Prakruti Mishra) ಜೊತೆ ಸುತ್ತಾಡುತ್ತಿರುವುದನ್ನು ಖಂಡಿಸಿ ಅವರ ಪತ್ನಿ ತೃಪ್ತಿ ಅವರು ರಂಪಾಟ ಮಾಡಿದ್ದಾರೆ. ಆ ವಿಡಿಯೋ (Prakruti Mishra Viral Video) ಸಖತ್​ ವೈರಲ್​ ಆಗಿದೆ.

ಒಡಿಯಾ ಸಿನಿಮಾ ಮತ್ತು ಹಿಂದಿ ಕಿರುತೆರೆಯಲ್ಲಿ ನಟಿ ಪ್ರಕೃತಿ ಮಿಶ್ರಾ ಅವರು ಫೇಮಸ್​ ಆಗಿದ್ದಾರೆ. ಅವರ ಜೊತೆ ಸಿನಿಮಾವೊಂದರಲ್ಲಿ ಬಾಬುಶಾನ್​ ಮೊಂಹತಿ ನಟಿಸಿದ್ದಾರೆ. ಒಟ್ಟಿಗೆ ನಟಿಸಿದ ಬಳಿಕ ಇಬ್ಬರ ನಡುವಿನ ಸ್ನೇಹ ಹೆಚ್ಚಿದೆ. ಇದರಿಂದ ಬಾಬುಶಾನ್​ ಪತ್ನಿ ತೃಪ್ತಿಯ ನಿದ್ದೆ ಕೆಟ್ಟಿದೆ. ಬಾಬುಶಾನ್​ ಮತ್ತು ಪ್ರಕೃತಿ ಮಿಶ್ರಾ ನಡುವಿನ ಸಂಬಂಧ ಅಂತ್ಯಗೊಳಿಸಲು ತೃಪ್ತಿ ಅವರು ನಡುರಸ್ತೆಯಲ್ಲಿ ನಿಂತು ಕೈ-ಕೈ ಮಿಲಾಯಿಸಿದ್ದಾರೆ.

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಬಾಬುಶಾನ್​ ಮೊಹಂತಿ ಮತ್ತು ಪ್ರಕೃತಿ ಮಿಶ್ರಾ ಒಂದೇ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ತೃಪ್ತಿ ಅವರು ಬಂದು ಅಡ್ಡಗಟ್ಟಿದ್ದಾರೆ. ಅಲ್ಲದೇ ಪ್ರಕೃತಿ ಮೇಲೆ ಅವರು ಹಲ್ಲೆ ಮಾಡಿದ್ದಾರೆ. ಈ ಘಟನೆಯಿಂದ ಬಾಬುಶಾನ್​ ವಿಚಲಿತರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ನನ್ನ ಕುಟುಂಬದವರಿಗೆ ನೋವಾಗಿದೆ ಎಂಬುದು ನನಗೆ ತಿಳಿದಿರಲಿಲ್ಲ. ಕುಟುಂಬದವರಿಗೆ ಇಷ್ಟ ಇಲ್ಲ ಎಂದರೆ ನಾನು ಪ್ರಕೃತಿ ಜತೆ ಸಿನಿಮಾ ಮಾಡಲ್ಲ. ಅನಿವಾರ್ಯವಾದರೆ, ಭವಿಷ್ಯದಲ್ಲಿ ಯಾವ ನಟಿಯ ಜೊತೆಗೂ ಸಿನಿಮಾ ಮಾಡುವುದಿಲ್ಲ’ ಎಂದು ಹೇಳಿದ್ದಾರೆ.

‘ನಮ್ಮ ಸಂಸಾರ ಚೆನ್ನಾಗಿಯೇ ಇತ್ತು. ಆದರೆ ಪ್ರಕೃತಿ ಎಂಟ್ರಿ ಆದ ಬಳಿಕ ಬಿರುಕು ಮೂಡಿತು’ ಎಂದು ತೃಪ್ತಿ ಹೇಳಿದ್ದಾರೆ. ಹಲ್ಲೆ ಮಾಡಿದ್ದಕ್ಕಾಗಿ ಅವರ ಮೇಲೆ ದೂರು ದಾಖಲಾಗಿದೆ. ಈ ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Published On - 8:21 am, Mon, 25 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!