AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಕ್ಕಳ ಬಗ್ಗೆ ಚಿರಂಜೀವಿ ಹೇಳಿಕೆಗೆ ತೀವ್ರ ಆಕ್ರೋಶ

Megastar Chiranjeevi: ಮೆಗಾಸ್ಟಾರ್ ಚಿರಂಜೀವಿಗೆ ಕಳೆದ ವರ್ಷ ಭಾರತದ ಎರಡನೇ ಅತ್ಯುನ್ನತ ನಾಗರೀಕ ಗೌರವವಾದ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ. ಆದರೆ ಇದೀಗ ಚಿರಂಜೀವಿ ನೀಡಿರುವ ಹೇಳಿಕೆಯೊಂದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚಿರಂಜೀವಿ, ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ಹೆಣ್ಣು ಮಕ್ಕಳ ಬಗ್ಗೆ ಚಿರಂಜೀವಿ ಹೇಳಿಕೆಗೆ ತೀವ್ರ ಆಕ್ರೋಶ
Chiranjeevi
ಮಂಜುನಾಥ ಸಿ.
|

Updated on: Feb 12, 2025 | 2:08 PM

Share

ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕಳೆದ ವರ್ಷವಷ್ಟೆ ದೇಶದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ. ಚಿರಂಜೀವಿ ಅವರಿಗೆ ಪದ್ಮವಿಭೂಷಣ ಘೋಷಣೆಯಾದಾಗ ಪ್ರಶಸ್ತಿಗೆ ಅವರು ಅರ್ಹರು ಎಂದೇ ವ್ಯಾಖ್ಯಾನಿಸಲಾಗಿತ್ತು. ಚಿರಂಜೀವಿ ಅವರ ಐದು ದಶಕಗಳ ಸಿನಿಮಾ ವೃತ್ತಿ ಪಯಣ ನೋಡಿದರೂ ಇದು ನಿಜವೇ ಅನಿಸುತ್ತದೆ. ಆದರೆ ಇತ್ತೀಚೆಗೆ ಚಿರಂಜೀವಿ ನೀಡಿರುವ ಹೇಳಿಕೆಯೊಂದು ಅವರನ್ನು ವಿವಾದಕ್ಕೆ ದೂಡಿದೆ. ಸಿನಿಮಾ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಮಾತನಾಡುತ್ತಾ ತಮಾಷೆಯ ಧಾಟಿಯಲ್ಲಿ ಆಡಿರುವ ಮಾತಿನಿಂದ ಜನರ ಆಕ್ರೋಶಕ್ಕೆ ಗುರಿ ಆಗಿದ್ದಾರೆ ಮೆಗಾಸ್ಟಾರ್.

ನಟ ಚಿರಂಜೀವಿ, ತಮ್ಮ ಆತ್ಮಿಯ ಮಿತ್ರ, ತೆಲುಗು ಚಿತ್ರರಂಗದ ಲೆಜೆಂಡರಿ ಹಾಸ್ಯನಟ ಬ್ರಹ್ಮಾನಂದಂ ಅವರು ನಟಿಸಿರುವ ‘ಬ್ರಹ್ಮ ಆನಂದಂ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ‘ನಮ್ಮ ಮನೆಯಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾನು ಮನೆಯಲ್ಲಿದ್ದಾಗ ಮಕ್ಕಳೊಟ್ಟಿಗೆ ಇದ್ದೇನೆ ಎನಿಸುವುದಿಲ್ಲ ಬದಲಿಗೆ ಲೇಡೀಸ್ ಹಾಸ್ಟೆಲ್​ನ ವಾರ್ಡನ್ ಆಗಿದ್ದೇನೆ ಅನಿಸುತ್ತದೆ’ ಎಂದು ತಮಾಷೆ ಮಾಡಿದರು.

ಇದನ್ನೂ ಓದಿ:ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಅನುಪಮ್ ಖೇರ್, ಚಿರಂಜೀವಿ; ಕಾರಣವೇನು?

ಮುಂದುವರೆದು, ‘ರಾಮ್ ಚರಣ್ ಗಂಡು ಮಗುವಿಗೆ ಜನ್ಮ ನೀಡಲಿ ಎಂಬುದು ನನ್ನ ಬಯಕೆ ಆಗಿತ್ತು. ನಮ್ಮ ತಲೆಮಾರನ್ನು ರಾಮ್ ಚರಣ್ ಮಗ ಮುಂದೆ ತೆಗೆದುಕೊಂಡು ಹೋಗಲಿ ಎಂಬುದು ಉದ್ದೇಶವಾಗಿತ್ತು. ಆದರೆ ರಾಮ್ ಚರಣ್​ಗೆ ಮಗಳೆಂದರೆ ಪಂಚ ಪ್ರಾಣ ಹಾಗಾಗಿ ರಾಮ್ ಚರಣ್ ಮತ್ತೊಂದು ಹೆಣ್ಣು ಮಗುವಿಗೆ ತಂದೆ ಆಗುತ್ತಾನೇನೋ ಎಂಬ ಭಯ ಇದೆ’ ಎಂದಿದ್ದಾರೆ ನಟ ಚಿರಂಜೀವಿ.

ಚಿರಂಜೀವಿ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಚಿರಂಜೀವಿ ಅವರ ಹೇಳಿಕೆಯನ್ನು ಮಹಿಳಾ ವಿರೋಧಿ ಎಂದು ಕರೆಯಲಾಗಿದೆ. ಚಿರಂಜೀವಿ ಹೇಳಿಕೆ ಭ್ರೂಣ ಹತ್ಯೆಗೆ ಇಂಬು ನೀಡುವಂತಿದೆ, ಹೆಣ್ಣು ಮಕ್ಕಳು ಕುಟುಂಬಕ್ಕೆ ಭಾರ ಎಂಬ ಅರ್ಥ ಹೊಮ್ಮಿಸುವಂತಿದೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!