BAFTA 2023: ಬ್ರಿಟಿಷ್​ ಅಕಾಡೆಮಿ ಫಿಲ್ಮ್​ ಅವಾರ್ಡ್ಸ್​ನಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕೆ ಸಿಕ್ಕಿಲ್ಲ ಮನ್ನಣೆ; ಕಾರಣ ಏನು?

BAFTA Awards 2023 | RRR Movie: ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಇದರಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕೆ ಯಾವುದೇ ಪ್ರಶಸ್ತಿ ಸಿಕ್ಕಿಲ್ಲ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

BAFTA 2023: ಬ್ರಿಟಿಷ್​ ಅಕಾಡೆಮಿ ಫಿಲ್ಮ್​ ಅವಾರ್ಡ್ಸ್​ನಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕೆ ಸಿಕ್ಕಿಲ್ಲ ಮನ್ನಣೆ; ಕಾರಣ ಏನು?
ಜೂನಿಯರ್​ ಎನ್​ಟಿಆರ್​
Follow us
|

Updated on:Feb 21, 2023 | 12:30 PM

ಭಾರತದ ಸಿನಿಮಾಗಳು ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಳ್ಳುವಲ್ಲಿಯೂ ಯಶಸ್ವಿ ಆಗುತ್ತಿವೆ. ‘ಆರ್​ಆರ್​ಆರ್​’ (RRR Movie) ಚಿತ್ರಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಸಿಕ್ಕಿರುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ ಪ್ರಶಸ್ತಿಗೂ ನಾಮಿನೇಟ್​ ಆಗಿದೆ. ಆದರೆ ಈ ಸಿನಿಮಾವನ್ನು ‘ಬ್ರಿಟಿಷ್​ ಅಕಾಡೆಮಿ ಫಿಲ್ಮ್​ ಅವಾರ್ಡ್ಸ್​’ (British Academy Film Awards) ಕಡೆಗಣಿಸಿದೆ. 77ನೇ ಸಾಲಿನ BAFTA ಸಮಾರಂಭದಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕೆ ಯಾವುದೇ ಪ್ರಶಸ್ತಿ ಸಿಕ್ಕಿಲ್ಲ. ಒಂದು ವಿಭಾಗದಲ್ಲೂ ನಾಮಿನೇಟ್​ ಆಗಿಲ್ಲ. ಇದು ಭಾರತೀಯರ ಕೋಪಕ್ಕೆ ಕಾರಣ ಆಗಿದೆ. ಹಾಗಾಗಿ ಈ ಪ್ರಶಸ್ತಿ ಬಗ್ಗೆ ನೆಟ್ಟಿಗರು ಖಾರವಾಗಿ ಕಮೆಂಟ್​ ಮಾಡುತ್ತಿದ್ದಾರೆ. ಹಾಗಾದರೆ ‘ಆರ್​ಆರ್​ಆರ್’ ಚಿತ್ರವನ್ನು BAFTA (BAFTA 2023) ಅವಾರ್ಡ್ಸ್​ನಲ್ಲಿ ಕಡೆಗಣಿಸಲು ಕಾರಣ ಏನು? ಇಲ್ಲಿದೆ ಉತ್ತರ..

‘ಆರ್​ಆರ್​ಆರ್’​ ಸಿನಿಮಾದಲ್ಲಿ ಸ್ವಾತಂತ್ರ್ಯಪೂರ್ವದ ಕಥೆಯನ್ನು ಹೇಳಲಾಗಿದೆ. ಬ್ರಿಟಿಷರು ಭಾರತೀಯರ ಮೇಲೆ ಮಾಡಿದ ದಬ್ಬಾಳಿಕೆಯನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಕೊಮರಮ್​ ಭೀಮ್​ ಮತ್ತು ಅಲ್ಲುರಿ ಸೀತಾರಾಮ ರಾಜು ಅವರ ಪಾತ್ರಗಳು ಈ ಚಿತ್ರದಲ್ಲಿ ವಿಜೃಂಭಿಸಿವೆ. ಬ್ರಿಟಿಷರ ಕರಾಳ ಇತಿಹಾಸವನ್ನು ತೋರಿಸಿದ್ದರಿಂದಲೇ ‘ಬ್ರಿಟಿಷ್​ ಅಕಾಡೆಮಿ ಫಿಲ್ಮ್​ ಅವಾರ್ಡ್ಸ್​’ಗೆ ‘ಆರ್​ಆರ್​ಆರ್’ ಸಿನಿಮಾ ನಾಮಿನೇಟ್​ ಆಗಿಲ್ಲ ಮತ್ತು ಯಾವುದೇ ಪ್ರಶಸ್ತಿ ಸಿಕ್ಕಿಲ್ಲ ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
‘ಗೋಲ್ಡನ್​ ಗ್ಲೋಬ್​​’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್​ಆರ್​ಆರ್​’ ಚಿತ್ರ
Image
Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ
Image
Golden Globes 2023: ಅತ್ಯುತ್ತಮ ಒರಿಜಿನಲ್ ಸಾಂಗ್ ಪ್ರಶಸ್ತಿ ಬಾಚಿಕೊಂಡ ಆರ್​ಆರ್​ಆರ್​ನ ನಾಟು ನಾಟು ಹಾಡು
Image
RRR: ಜಪಾನ್​ನಲ್ಲಿ ಮೊದಲ ದಿನವೇ 1 ಕೋಟಿ ರೂಪಾಯಿ ಗಳಿಸಿದ ‘ಆರ್​ಆರ್​ಆರ್​’: ಜೋರಾಗಿದೆ ಕ್ರೇಜ್​

ಇದನ್ನೂ ಓದಿ:  ‘ಗೋಲ್ಡನ್​ ಗ್ಲೋಬ್​​’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್​ಆರ್​ಆರ್​’ ಚಿತ್ರ

ರಾಜಮೌಳಿ ಅವರು ನಿರ್ದೇಶನದಲ್ಲಿ ಮೂಡಿಬಂದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಗೆದ್ದ ಬಳಿಕ ಅನೇಕರು ಈ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಹಾಲಿವುಡ್​ ನಿರ್ದೇಶಕರಾದ ಜೇಮ್ಸ್​ ಕ್ಯಾಮೆರಾನ್​, ಸ್ಟೀವನ್​ ಸ್ಪೀಲ್​ಬರ್ಗ್​ ಸೇರಿದಂತೆ ಅನೇಕ ದಿಗ್ಗಜರು ಈ ಚಿತ್ರವನ್ನು ಕೊಂಡಾಡಿದ್ದಾರೆ. ಆದರೆ ಬ್ರಿಟಿಷ್​ ಮಂದಿ ಮಾತ್ರ ನಿರ್ಲಕ್ಷ್ಯ ಮಾಡಿದ್ದಾರೆ.

ಇದನ್ನೂ ಓದಿ: SS Rajamouli: ಎಸ್​ಎಸ್​​ ರಾಜಮೌಳಿ ಬಿಜೆಪಿ ಪರವೇ? ಮೌನ ಮುರಿದ ನಿರ್ದೇಶಕ  

ಆಸ್ಕರ್​ ಗೆಲ್ಲುವ ಭರವಸೆಯಲ್ಲಿ ‘ನಾಟು ನಾಟು..’ ಸಾಂಗ್​:

ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ‘ನಾಟು ನಾಟು..’ ಹಾಡು ಜನಮನ ಗೆದ್ದಿದೆ. ಈ ಹಾಡಿಗೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಸಿಕ್ಕಿದೆ. ಈಗ ಆಸ್ಕರ್​ಗೂ ನಾಮಿನೇಟ್​ ಆಗಿದೆ. ಈ ಹಾಡಿಗೆ ಖಂಡಿತವಾಗಿಯೂ ಆಸ್ಕರ್​ ಪ್ರಶಸ್ತಿ ಸಿಗಲಿದೆ ಎಂದು ಫ್ಯಾನ್ಸ್​ ನಿರೀಕ್ಷಿಸಿದ್ದಾರೆ. ಮಾರ್ಚ್​ 12ರಂದು ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರು ‘ನಾಟು ನಾಟು..’ ಹಾಡಿನಲ್ಲಿ ಭರ್ಜರಿಯಾಗಿ ಡ್ಯಾನ್ಸ್​ ಮಾಡಿದ್ದಾರೆ. ಪ್ರೇಮ್​ ರಕ್ಷಿತ್ ಅವರು ಈ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:30 pm, Tue, 21 February 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ