AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಹಾಡಿಗೆ ಸ್ಟೆಪ್​ ಹಾಕಿದ ಭಜರಂಗಿ ಭಾಯಿಜಾನ್​ ಸಿನಿಮಾದ ಹರ್ಷಾಲಿ ಮಲ್ಹೋತ್ರಾ; ವಿಡಿಯೋ ವೈರಲ್

ನೀಲಿ ಬಣ್ಣದ ಅನಾರ್ಕಲಿ ತೊಟ್ಟು ಹರ್ಷಾಲಿ ಹಿಂದಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಸಿಂಪಲ್​ ಹಾಡಿಗೆ ಅವರು ಹೆಜ್ಜೆ ಹಾಕಿದ್ದು, ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸದ್ಯ,  ಈ ವಿಡಿಯೋಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹಿಂದಿ ಹಾಡಿಗೆ ಸ್ಟೆಪ್​ ಹಾಕಿದ ಭಜರಂಗಿ ಭಾಯಿಜಾನ್​ ಸಿನಿಮಾದ ಹರ್ಷಾಲಿ ಮಲ್ಹೋತ್ರಾ; ವಿಡಿಯೋ ವೈರಲ್
ಹರ್ಷಾಲಿ ಮಲ್ಹೋತ್ರಾ
ರಾಜೇಶ್ ದುಗ್ಗುಮನೆ
|

Updated on:Dec 20, 2021 | 3:08 PM

Share

ಭಜರಂಗಿ ಭಾಯಿಜಾನ್​ ಸಿನಿಮಾದಲ್ಲಿ ಹರ್ಷಾಲಿ ಮಲ್ಹೋತ್ರಾ ನಟಿಸಿದ್ದರು. ಈ ಸಿನಿಮಾ ಅವರ ಖ್ಯಾತಿಯನ್ನು ಹೆಚ್ಚಿಸಿತ್ತು. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಹೀಗಾಗಿ, ಅವರು ಸದಾ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್​ ಆಗಿರುತ್ತಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ನೀಲಿ ಬಣ್ಣದ ಅನಾರ್ಕಲಿ ತೊಟ್ಟು ಹರ್ಷಾಲಿ ಹಿಂದಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಸಿಂಪಲ್​ ಹಾಡಿಗೆ ಅವರು ಹೆಜ್ಜೆ ಹಾಕಿದ್ದು, ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸದ್ಯ,  ಈ ವಿಡಿಯೋಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಭಜರಂಗಿ ಭಾಯಿಜಾನ್​ ಸಿನಿಮಾದಲ್ಲಿ ಹರ್ಷಾಲಿ ಮುನ್ನಿ ಆಗಿ ಕಾಣಿಸಿಕೊಂಡಿದ್ದರು. ಈ ಹೆಸರಿನ ಮೂಲಕವೇ ಹೆಚ್ಚು ಖ್ಯಾತಿ ಗಳಿಸಿಕೊಂಡಿದ್ದರು. ‘ಮುನ್ನಿ ಉತ್ತಮವಾಗಿ ಡಾನ್ಸ್​ ಕೂಡ ಮಾಡುತ್ತಾರೆ ಎಂದು ಕೆಲವರು ಕಮೆಂಟ್ ಬಾಕ್ಸ್​ನಲ್ಲಿ ಬರೆದಿದ್ದಾರೆ. ಇನ್ನೂ ಕೆಲವರು, ಅತ್ಯುತ್ತಮ ಡಾನ್ಸ್​ ಪರ್ಫಾರ್ಮೆನ್ಸ್​ ಎಂದು ಹೊಗಳಿದ್ದಾರೆ.

ಇತ್ತೀಚೆಗಷ್ಟೇ ಹರ್ಷಾಲಿ 13 ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಾದ ನಂತರ ಅವರು ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದರು.

ಭಜರಂಗಿ ಭಾಯಿಜಾನ್​ 2015ರ ಜುಲೈ ತಿಂಗಳಲ್ಲಿ ತೆರೆಗೆ ಬಂದಿತ್ತು. ಹರ್ಷಾಲಿ ಪಾಕಿಸ್ತಾನದ ಹುಡುಗಿ ಆಗಿ ಕಾಣಿಸಿಕೊಂಡಿದ್ದರು. ಕುಟುಂಬದಿಂದ ಬೇರೆ ಆಗುವ ಮುನ್ನಿ, ಭಾರತದಲ್ಲಿ ಸಿಕ್ಕಿ ಬೀಳುತ್ತಾಳೆ. ಆಗ ಅವಳಿಗೆ ಪವನ್​ ಕುಮಾರ್ ಚತುರ್ವೇದಿ  (ಸಲ್ಮಾನ್​ ಖಾನ್​) ಪರಿಚಯ ಆಗುತ್ತದೆ. ನಂತರ ಆಕೆಯನ್ನು ಭಜರಂಗಿ ಹೇಗೆ ಪಾಕಿಸ್ತಾನಕ್ಕೆ ತಲುಪಿಸುತ್ತಾರೆ ಎನ್ನುವುದೇ ಸಿನಿಮಾ ಕಥೆ. 90 ಕೋಟಿ ವೆಚ್ಛದಲ್ಲಿ ಸಿದ್ಧವಾದ ಈ ಸಿನಿಮಾ ದೊಡ್ಡಮಟ್ಟದಲ್ಲಿ ಕಮಾಯಿ ಮಾಡಿತ್ತು.

ಇದನ್ನೂ ಓದಿ: ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​

Published On - 6:09 pm, Mon, 7 June 21

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ