AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಸಿನಿಮಾ ವಿರುದ್ಧ ಬಾಲಕೃಷ್ಣ ಅಭಿಮಾನಿಗಳು ಗರಂ, ಫ್ಯಾನ್ಸ್ ವಾರ್ ಶುರು

ತೆಲುಗು ಚಿತ್ರರಂಗದಲ್ಲಿ ಫ್ಯಾನ್ಸ್ ವಾರ್ ಹೆಚ್ಚಾಗಿತ್ತು, ಆದರೆ ಇತ್ತೀಚೆಗೆ ಅದು ಕಡಿಮೆಯಾಗಿತ್ತು. ಇದೀಗ ‘ಆಯ್’ ಹೆಸರಿನ ತೆಲುಗು ಸಿನಿಮಾದಿಂದಾಗಿ ಫ್ಯಾನ್ಸ್ ವಾರ್​ಗೆ ಮತ್ತೆ ಜೀವ ಬಂದಂತಾಗಿದೆ. ‘ಆಯ್’ ಸಿನಿಮಾಕ್ಕೆ ಬಾಲಯ್ಯ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ತೆಲುಗು ಸಿನಿಮಾ ವಿರುದ್ಧ ಬಾಲಕೃಷ್ಣ ಅಭಿಮಾನಿಗಳು ಗರಂ, ಫ್ಯಾನ್ಸ್ ವಾರ್ ಶುರು
ಮಂಜುನಾಥ ಸಿ.
|

Updated on: Sep 15, 2024 | 7:49 AM

Share

ತೆಲುಗು ಚಿತ್ರರಂಗದಲ್ಲಿ ಫ್ಯಾನ್ಸ್ ವಾರ್ ಎಂಬುದು ದಶಕಗಳಿಂದಲೂ ನಡೆದುಕೊಂಡು ಬಂದಿದೆ. ಸ್ವತಃ ಮೆಗಾಸ್ಟಾರ್ ಚಿರಂಜೀವಿ ಹೇಳಿರುವಂತೆ ಸೀನಿಯರ್ ಎನ್​ಟಿಆರ್, ಎಎನ್​ಆರ್ ಇನ್ನಿತರೆ ಕೆಲವು ನಟರ ಅಭಿಮಾನಿಗಳು ಸಹ ಒಬ್ಬರ ಮೇಲೊಬ್ಬರು ಕಿತ್ತಾಡಿಕೊಳ್ಳುತ್ತಿದ್ದರಂತೆ. ಅದಾದ ಬಳಿಕ ಚಿರಂಜೀವಿ ಹಾಗೂ ಬಾಲಕೃಷ್ಣ ಅಭಿಮಾನಿಗಳಂತೂ ದಶಕಗಳ ಕಾಲ ಹೊಡೆದಾಡಿಕೊಂಡಿದ್ದಾರೆ. ಇತ್ತೀಚೆಗೆ ಬಾಲಯ್ಯ ಹಾಗೂ ಚಿರಂಜೀವಿ ಆ ಫ್ಯಾನ್ಸ್​ ವಾರ್​ಗೆ ಬ್ರೇಕ್ ಹಾಕಿದ್ದರು. ಆದರೆ ತೆಲುಗಿನಲ್ಲಿ ಇತ್ತೀಚೆಗೆ ಬಿಡುಗಡೆ ಆಗಿರುವ ಹೊಸ ಸಿನಿಮಾ ಒಂದು ಈ ಇಬ್ಬರ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಪ್ರಾರಂಭ ಮಾಡಿದೆ. ವಿಶೇಷವಾಗಿ ಬಾಲಯ್ಯ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ನಂದಮೂರಿ ಕುಟುಂಬದ ಸಂಬಂಧಿಯೇ ಆಗಿರುವ ನಾರ್ನೆ ನಿತಿನ್ ನಟಿಸಿರುವ ‘ಆಯ್’ ಹೆಸರಿನ ಸಿನಿಮಾ ಬಿಡುಗಡೆ ಆಗಿದೆ. ಹಳ್ಳಿಯಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ಬಾಲಕೃಷ್ಣ ಹಾಗೂ ಚಿರಂಜೀವಿ ಇಬ್ಬರ ರೆಫೆರೆನ್ಸ್ ಸಹ ಇದೆ. ಆದರೆ ಇದೇ ಈಗ ಸಿನಿಮಾದ ಮೇಲೆ ಬಾಲಯ್ಯ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ನಂದಮೂರಿ ಬಾಲಕೃಷ್ಣಗೆ ಇಲ್ಲ ಸಚಿವ ಸ್ಥಾನ, ಅಭಿಮಾನಿಗಳ ಬೇಸರ

ಸಿನಿಮಾದಲ್ಲಿ ವಿಲನ್ ನಟ ನಂದಮೂರಿ ಬಾಲಕೃಷ್ಣ ಅಭಿಮಾನಿ. ತನ್ನ ವಿರುದ್ಧ ಬಂದವರನ್ನೆಲ್ಲ ಹೊಡೆದು ಬುದ್ಧಿ ಕಲಿಸುತ್ತಿರುತ್ತಾನೆ. ಆದರೆ ಆತನನ್ನು ಹೊಡೆದು ಬುದ್ದಿ ಕಲಿಸುವ ನಾಯಕ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿ. ಬಾಲಯ್ಯ ಅಭಿಮಾನಿಯನ್ನು ವಿಲನ್ ಮಾಡಿ, ಆತನಿಗೆ ಹೊಡೆಯುವ ಹೀರೋ ಅನ್ನು ಚಿರಂಜೀವಿ ಅಭಿಮಾನಿಯನ್ನಾಗಿ ಮಾಡಿರುವುದಕ್ಕೆ ಬಾಲಯ್ಯ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತೊಂದು ವಿಶೇಷವೆಂದರೆ ‘ಆಯ್’ ಸಿನಿಮಾದ ನಾಯಕ ಸ್ವತಃ ನಂದಮೂರಿ ಕುಟುಂಬದ ಸಂಬಂಧಿ.

ಕೆಲ ದಿನಗಳ ಹಿಂದೆ ನಂದಮೂರಿ ಬಾಲಕೃಷ್ಣ ಚಿತ್ರರಂಗಕ್ಕೆ ಬಂದು 50 ವರ್ಷವಾದ ಸಂದರ್ಭದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಿರಂಜೀವಿ ಸಹ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಬಾಲಕೃಷ್ಣ ಮತ್ತು ಚಿರಂಜೀವಿ ತಮ್ಮ ಸೋದರತೆ ಪ್ರದರ್ಶಿಸಿದರು. ಅಲ್ಲದೆ ಚರಂಜೀವಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಬಾಲಯ್ಯ ಹಾಗೂ ನಾನು ಒಂದೇ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆ ಇದೆ. ನಮ್ಮಿಬ್ಬರ ಸೂಪರ್ ಹಿಟ್ ಸಿನಿಮಾಗಳಾದ ‘ನರಸಿಂಹರೆಡ್ಡಿ’ ಮತ್ತು ‘ಇಂದ್ರ’ ಪಾತ್ರಗಳನ್ನು ಒಟ್ಟಿಗೆ ಸೇರಿಸಿ ಯಾರಾದರೂ ಚೆನ್ನಾಗಿರುತ್ತದೆ ಎಂಬ ಐಡಿಯಾ ಸಹ ಕೊಟ್ಟಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?