AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಸಿನಿಮಾ ವಿರುದ್ಧ ಬಾಲಕೃಷ್ಣ ಅಭಿಮಾನಿಗಳು ಗರಂ, ಫ್ಯಾನ್ಸ್ ವಾರ್ ಶುರು

ತೆಲುಗು ಚಿತ್ರರಂಗದಲ್ಲಿ ಫ್ಯಾನ್ಸ್ ವಾರ್ ಹೆಚ್ಚಾಗಿತ್ತು, ಆದರೆ ಇತ್ತೀಚೆಗೆ ಅದು ಕಡಿಮೆಯಾಗಿತ್ತು. ಇದೀಗ ‘ಆಯ್’ ಹೆಸರಿನ ತೆಲುಗು ಸಿನಿಮಾದಿಂದಾಗಿ ಫ್ಯಾನ್ಸ್ ವಾರ್​ಗೆ ಮತ್ತೆ ಜೀವ ಬಂದಂತಾಗಿದೆ. ‘ಆಯ್’ ಸಿನಿಮಾಕ್ಕೆ ಬಾಲಯ್ಯ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ತೆಲುಗು ಸಿನಿಮಾ ವಿರುದ್ಧ ಬಾಲಕೃಷ್ಣ ಅಭಿಮಾನಿಗಳು ಗರಂ, ಫ್ಯಾನ್ಸ್ ವಾರ್ ಶುರು
ಮಂಜುನಾಥ ಸಿ.
|

Updated on: Sep 15, 2024 | 7:49 AM

Share

ತೆಲುಗು ಚಿತ್ರರಂಗದಲ್ಲಿ ಫ್ಯಾನ್ಸ್ ವಾರ್ ಎಂಬುದು ದಶಕಗಳಿಂದಲೂ ನಡೆದುಕೊಂಡು ಬಂದಿದೆ. ಸ್ವತಃ ಮೆಗಾಸ್ಟಾರ್ ಚಿರಂಜೀವಿ ಹೇಳಿರುವಂತೆ ಸೀನಿಯರ್ ಎನ್​ಟಿಆರ್, ಎಎನ್​ಆರ್ ಇನ್ನಿತರೆ ಕೆಲವು ನಟರ ಅಭಿಮಾನಿಗಳು ಸಹ ಒಬ್ಬರ ಮೇಲೊಬ್ಬರು ಕಿತ್ತಾಡಿಕೊಳ್ಳುತ್ತಿದ್ದರಂತೆ. ಅದಾದ ಬಳಿಕ ಚಿರಂಜೀವಿ ಹಾಗೂ ಬಾಲಕೃಷ್ಣ ಅಭಿಮಾನಿಗಳಂತೂ ದಶಕಗಳ ಕಾಲ ಹೊಡೆದಾಡಿಕೊಂಡಿದ್ದಾರೆ. ಇತ್ತೀಚೆಗೆ ಬಾಲಯ್ಯ ಹಾಗೂ ಚಿರಂಜೀವಿ ಆ ಫ್ಯಾನ್ಸ್​ ವಾರ್​ಗೆ ಬ್ರೇಕ್ ಹಾಕಿದ್ದರು. ಆದರೆ ತೆಲುಗಿನಲ್ಲಿ ಇತ್ತೀಚೆಗೆ ಬಿಡುಗಡೆ ಆಗಿರುವ ಹೊಸ ಸಿನಿಮಾ ಒಂದು ಈ ಇಬ್ಬರ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಪ್ರಾರಂಭ ಮಾಡಿದೆ. ವಿಶೇಷವಾಗಿ ಬಾಲಯ್ಯ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ನಂದಮೂರಿ ಕುಟುಂಬದ ಸಂಬಂಧಿಯೇ ಆಗಿರುವ ನಾರ್ನೆ ನಿತಿನ್ ನಟಿಸಿರುವ ‘ಆಯ್’ ಹೆಸರಿನ ಸಿನಿಮಾ ಬಿಡುಗಡೆ ಆಗಿದೆ. ಹಳ್ಳಿಯಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ಬಾಲಕೃಷ್ಣ ಹಾಗೂ ಚಿರಂಜೀವಿ ಇಬ್ಬರ ರೆಫೆರೆನ್ಸ್ ಸಹ ಇದೆ. ಆದರೆ ಇದೇ ಈಗ ಸಿನಿಮಾದ ಮೇಲೆ ಬಾಲಯ್ಯ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ನಂದಮೂರಿ ಬಾಲಕೃಷ್ಣಗೆ ಇಲ್ಲ ಸಚಿವ ಸ್ಥಾನ, ಅಭಿಮಾನಿಗಳ ಬೇಸರ

ಸಿನಿಮಾದಲ್ಲಿ ವಿಲನ್ ನಟ ನಂದಮೂರಿ ಬಾಲಕೃಷ್ಣ ಅಭಿಮಾನಿ. ತನ್ನ ವಿರುದ್ಧ ಬಂದವರನ್ನೆಲ್ಲ ಹೊಡೆದು ಬುದ್ಧಿ ಕಲಿಸುತ್ತಿರುತ್ತಾನೆ. ಆದರೆ ಆತನನ್ನು ಹೊಡೆದು ಬುದ್ದಿ ಕಲಿಸುವ ನಾಯಕ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿ. ಬಾಲಯ್ಯ ಅಭಿಮಾನಿಯನ್ನು ವಿಲನ್ ಮಾಡಿ, ಆತನಿಗೆ ಹೊಡೆಯುವ ಹೀರೋ ಅನ್ನು ಚಿರಂಜೀವಿ ಅಭಿಮಾನಿಯನ್ನಾಗಿ ಮಾಡಿರುವುದಕ್ಕೆ ಬಾಲಯ್ಯ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತೊಂದು ವಿಶೇಷವೆಂದರೆ ‘ಆಯ್’ ಸಿನಿಮಾದ ನಾಯಕ ಸ್ವತಃ ನಂದಮೂರಿ ಕುಟುಂಬದ ಸಂಬಂಧಿ.

ಕೆಲ ದಿನಗಳ ಹಿಂದೆ ನಂದಮೂರಿ ಬಾಲಕೃಷ್ಣ ಚಿತ್ರರಂಗಕ್ಕೆ ಬಂದು 50 ವರ್ಷವಾದ ಸಂದರ್ಭದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಿರಂಜೀವಿ ಸಹ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಬಾಲಕೃಷ್ಣ ಮತ್ತು ಚಿರಂಜೀವಿ ತಮ್ಮ ಸೋದರತೆ ಪ್ರದರ್ಶಿಸಿದರು. ಅಲ್ಲದೆ ಚರಂಜೀವಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಬಾಲಯ್ಯ ಹಾಗೂ ನಾನು ಒಂದೇ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆ ಇದೆ. ನಮ್ಮಿಬ್ಬರ ಸೂಪರ್ ಹಿಟ್ ಸಿನಿಮಾಗಳಾದ ‘ನರಸಿಂಹರೆಡ್ಡಿ’ ಮತ್ತು ‘ಇಂದ್ರ’ ಪಾತ್ರಗಳನ್ನು ಒಟ್ಟಿಗೆ ಸೇರಿಸಿ ಯಾರಾದರೂ ಚೆನ್ನಾಗಿರುತ್ತದೆ ಎಂಬ ಐಡಿಯಾ ಸಹ ಕೊಟ್ಟಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್