AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗಲೇ ಕಿತ್ತುಹಾಕಿ’: ಜೂ ಎನ್​ಟಿಆರ್ ಫ್ಲೆಕ್ಸ್ ತೆಗೆಸಿದ ಬಾಲಕೃಷ್ಣ

Jr NTR: ನಂದಮೂರಿ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಗುಟ್ಟಲ್ಲ. ತಂದೆಯ ಪಣ್ಯಸ್ಮರಣೆ ಕಾರ್ಯಕ್ರಮಕ್ಕೆ ಬಂದ ಬಾಲಕೃಷ್ಣ, ಅಲ್ಲಿ ಜೂ ಎನ್​ಟಿಆರ್ ಫ್ಲೆಕ್ಸ್, ಬ್ಯಾನರ್​ಗಳನ್ನು ನೋಡಿ ಸಿಟ್ಟಾಗಿ ಕಿತ್ತುಹಾಕಿ ಎಂದಿರುವ ವಿಡಿಯೋ ವೈರಲ್ ಆಗಿದೆ.

‘ಈಗಲೇ ಕಿತ್ತುಹಾಕಿ’: ಜೂ ಎನ್​ಟಿಆರ್ ಫ್ಲೆಕ್ಸ್ ತೆಗೆಸಿದ ಬಾಲಕೃಷ್ಣ
ಮಂಜುನಾಥ ಸಿ.
|

Updated on: Jan 18, 2024 | 3:51 PM

Share

ನಂದಮೂರಿ (Nandamuri) ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಗುಟ್ಟಾಗಿ ಉಳಿದಿಲ್ಲ. ನಂದಮೂರಿ ಕುಟುಂಬದ ಜೂ ಎನ್​ಟಿಆರ್ ಹಾಗೂ ಅವರ ಸಹೋದರ ಕಲ್ಯಾಣ್ ರಾಮ್ ಒಂದೆಡೆ ಆದರೆ ಅವರ ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ಮತ್ತೋಂದೆಡೆ ಎಂಬಂತಾಗಿದ್ದಾರೆ. ಇದೀಗ ಈ ಇಬ್ಬರ ನಡುವೆ ಅದೆಷ್ಟು ದ್ವೇಷವಿದೆ, ವೈಷಮ್ಯವಿದೆ ಎಂಬುದಕ್ಕೆ ಮತ್ತೊಂದು ತಾಜಾ ಉದಾಹರಣೆ ದೊರೆತಿದೆ.

ಇಂದು (ಜನವರಿ 18) ಎನ್​ಟಿಆರ್ ಅವರ 18ನೇ ಪುಣ್ಯಸ್ಮರಣೆ. ಎನ್​ಟಿಆರ್ ಘಾಟ್​ ಬಳಿ ನಂದಮೂರಿ ಕುಟುಂಬದ ಗಣ್ಯರ ಭಾವಚಿತ್ರಗಳುಳ್ಳ ಫ್ಲೆಕ್ಸ್ ಬ್ಯಾನರ್​ಗಳನ್ನು ಅಭಿಮಾನಿಗಳು ಅಳವಡಿಸಿದ್ದರು. ಎನ್​ಟಿಆರ್ ಹಾಗೂ ಕಲ್ಯಾಣ್ ರಾಮ್ ಅವರುಗಳು ಬೆಳ್ಳಂಬೆಳಿಗ್ಗೆ ಆಗಮಿಸಿ ಎನ್​ಟಿಆರ್ ಸಮಾಧಿಗೆ ನಮಿಸಿ ತೆರಳಿದರು. ಅದಾದ ಬಳಿಕ ತುಸು ತಡವಾಗಿ ಬಂದ ನಂದಮೂರಿ ಬಾಲಕೃಷ್ಣ ಅಲ್ಲಿ ಹಾಕಲಾಗಿದ್ದ ಎನ್​ಟಿಆರ್ ಹಾಗೂ ಕಲ್ಯಾಣ್​ರಾಮ್​ರ ಫ್ಲೆಕ್ಸ್​ಗಳನ್ನು ನೋಡುತ್ತಲೇ ಗರಂ ಆದರು.

ತನ್ನ ಸಹಾಕನ ಬಳಿ ‘ಇವನ್ನೆಲ್ಲ ತೆಗಿಸು’ ಎಂದರು. ಬಳಿಕ ‘ಈಗಲೇ ಕಿತ್ತು ಹಾಕಿಸು’ ಎಂದು ಕೋಪದಿಂದಲೇ ಹೇಳಿ ಒಳನಡೆದರು. ತಂದೆ ಎನ್​ಟಿಆರ್ ಸಮಾಧಿಗೆ ನಮಿಸಿ ಬಾಲಕೃಷ್ಣ ಹೊರಡುತ್ತಿದ್ದಂತೆ, ಎನ್​ಟಿಆರ್ ಹಾಗೂ ಕಲ್ಯಾಣ್​ರಾಮ್​ರ ಚಿತ್ರಗಳನ್ನು ಹೊಂದಿದ್ದ ಎಲ್ಲ ಫ್ಲೆಕ್ಸ್​ಗಳನ್ನು ಕಿತ್ತು ಹಾಕಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಇದನ್ನೂ ಓದಿ:‘ಐ ಲವ್ ರಶ್ಮಿಕಾ’ ಎಂದರಾ ವಿಜಯ್ ದೇವರಕೊಂಡ, ಬಾಲಕೃಷ್ಣ ಎದುರು ನಾಚಿದ ನಟಿ

ಕೆಲ ತಿಂಗಳ ಮುಂಚೆ ಚಂದ್ರಬಾಬು ನಾಯ್ಡು, ಬಾಲಕೃಷ್ಣ ಸೇರಿಕೊಂಡು ಎನ್​ಟಿಆರ್ ಅವರ ಜನ್ಮಶತಮಾನೋತ್ಸವವನ್ನು ಆಂಧ್ರ, ತೆಲಂಗಾಣದ ಕೆಲವು ಕಡೆ ಅದ್ಧೂರಿಯಾಗಿ ಆಚರಿಸಿದರು. ನಟ ರಜನೀಕಾಂತ್, ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಆದರೆ ಅದೇ ಕುಟುಂಬಕ್ಕೆ ಸೇರಿದ ಜೂ ಎನ್​ಟಿಆರ್ ಹಾಗೂ ಕಲ್ಯಾಣ್ ರಾಮ್​ಗೆ ಆಹ್ವಾನ ನೀಡಿರಲಿಲ್ಲ. ಅಲ್ಲದೆ, ಜೂ ಎನ್​ಟಿಆರ್ ಚಿತ್ರವನ್ನು ಹಿಡಿದು ಕಾರ್ಯಕ್ರಮಕ್ಕೆ ಬಂದ ಅಭಿಮಾನಿಗಳನ್ನು ವಾಪಸ್ ಕಳಿಸಲಾಗಿತ್ತು.

ಈ ಬಿರುಕಿಗೆ ಮೂಲ ಕಾರಣ ಟಿಡಿಪಿ ಪಕ್ಷ ಹಾಗೂ ಅದರ ಮುಖ್ಯಸ್ಥ ಚಂದ್ರಬಾಬು ನಾಯ್ಡು ಎನ್ನಲಾಗುತ್ತಿದೆ. ಜೂ ಎನ್​ಟಿಆರ್​ಗೆ ಆಂಧ್ರ ಹಾಗೂ ತೆಲಂಗಾಣದಲ್ಲಿ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಒಂದೊಮ್ಮೆ ಟಿಡಿಪಿ ಪಕ್ಷಕ್ಕೆ ಅವರು ಬಂದರೆ ಪಕ್ಷದ ನಾಯತ್ವವನ್ನೇ ಅವರಿಗೆ ಬಿಟ್ಟುಕೊಡಬೇಕಾಗುತ್ತದೆ. ಆದರೆ ಚಂದ್ರಬಾಬು ನಾಯ್ಡು ತಮ್ಮ ಪುತ್ರ ನಾರಾ ಲೋಕೇಶ್ ಅನ್ನು ರಾಜಕೀಯ ನಾಯಕನನ್ನಾಗಿ ಬೆಳೆಸುವ ಪ್ರಯತ್ನದಲ್ಲಿದ್ದು, ಜೂ ಎನ್​ಟಿಆರ್ ಬಂದರೆ ಇದಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಅವರನ್ನು ದೂರ ಇಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಆರಂಭದಲ್ಲಿ ಜೂ ಎನ್​ಟಿಆರ್ ಇದಕ್ಕೆಲ್ಲ ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಚಂದ್ರಬಾಬು ನಾಯ್ಡುಗೆ ಸದನದಲ್ಲಿ ಅವಮಾನವಾದಾಗ ಸಹ ಆ ಬಗ್ಗೆ ವಿಡಿಯೋ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಅದಾದ ಬಳಿಕ ಆದ ಕೆಲವು ಘಟನೆಗಳಿಂದ ತೀವ್ರ ಬೇಸರಗೊಂಡ ಜೂ ಎನ್​ಟಿಆರ್. ಚಂದ್ರಬಾಬು ನಾಯ್ಡು ಬಂಧನವಾದಾಗಲೂ ಸಹ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಬದಲಿಗೆ ಕುಟುಂಬದ ಜೊತೆಗೆ ವಿದೇಶ ಪ್ರವಾಸಕ್ಕೆ ತೆರಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು