AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಖಂಡ 2’ ಹೇಗಿದೆ? ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?

Akhanda 2 twitter review: ನಂದಮೂರಿ ಬಾಲಕೃಷ್ಣ ನಟಿಸಿರುವ ‘ಅಖಂಡ 2’ ಸಿನಿಮಾ ಇಂದು (ಡಿಸೆಂಬರ್ 12) ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಮಂದಿ ಟ್ವಿಟ್ಟರ್​​ನಲ್ಲಿ ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದವರಿಗೆ ಸಿನಿಮಾ ಇಷ್ಟವಾಯ್ತೆ? ಯಾವ ಅಂಶ ಚೆನ್ನಾಗಿದೆ? ಯಾವ ಅಂಶಗಳು ಚೆನ್ನಾಗಿಲ್ಲ? ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ.

‘ಅಖಂಡ 2’ ಹೇಗಿದೆ? ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
Akhanda 2
ಮಂಜುನಾಥ ಸಿ.
|

Updated on: Dec 12, 2025 | 9:34 AM

Share

ನಂದಮೂರಿ ಬಾಲಕೃಷ್ಣ (Nandamuri Balakrishna) ನಟನೆಯ ‘ಅಖಂಡ 2’ ಸಿನಿಮಾ ಕೆಲವು ಅಡೆತಡೆಗಳ ಬಳಿಕ ಇಂದು (ಡಿಸೆಂಬರ್ 12) ಬಿಡುಗಡೆ ಆಗಿದೆ. ಬೆಂಗಳೂರು ಸೇರಿದಂತೆ ಇನ್ನೂ ಹಲವು ಕಡೆಗಳಲ್ಲಿ ಡಿಸೆಂಬರ್ 11 ರ ರಾತ್ರಿಯೇ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ‘ಅಖಂಡ 2’ ಸಿನಿಮಾ 2021 ರಲ್ಲಿ ಬಿಡುಗಡೆ ಆಗಿದ್ದ ‘ಅಖಂಡ’ ಸಿನಿಮಾದ ಸೀಕ್ವೆಲ್ ಆಗಿದ್ದು, ಬಾಲಯ್ಯ ಅವರು ಉಗ್ರ ನಾಗಾ ಸಾಧುವಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಅಖಂಡ 2’ ಸಿನಿಮಾ ನೋಡಿದ ಪ್ರೇಕ್ಷಕರು ಹಲವರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ..

ಇಂಡಿಯನ್ ಫ್ಲಿಕ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ಮಾಡಲಾಗಿರುವ ಟ್ವೀಟ್​​ನಲ್ಲಿ ‘ಅಖಂಡ 2’ ಸಿನಿಮಾ ಬಹಳ ಸಾಧಾರಣವಾದ ಸಿನಿಮಾ ಎನ್ನಲಾಗಿದೆ. ಬಾಲಯ್ಯ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ನಿಮಿಷಕ್ಕೊಮ್ಮೆ ಬರುವ ಭಾಷಣ, ತಲೆ ಬುಡವಿಲ್ಲದ ಆಕ್ಷನ್ ದೃಶ್ಯಗಳು ತಲೆನೋವು ತರಿಸುತ್ತವೆ, ಜೊತೆಗೆ ಸಿನಿಮಾದ ಹಿನ್ನೆಲೆ ಸಂಗೀತ ಸಹ ಇರಿಟೇಟ್ ಮಾಡುತ್ತದೆ. ನೀವೊಬ್ಬ ಅಭಿಮಾನಿ ಆಗಿದ್ದರಷ್ಟೆ ಸಿನಿಮಾ ನೋಡಿ ಎಂದಿದೆ ಟ್ವೀಟ್.

ವೀರಾರ ಎಂಬುವರು ಟ್ವೀಟ್ ಮಾಡಿ, ‘ಅಖಂಡ 2’ ಸಿನಿಮಾನಲ್ಲಿ ಎಲ್ಲಿಯೂ ಲಾಜಿಕ್ ಎಂಬುದೇ ಇಲ್ಲ. ಇಡೀ ಸಿನಿಮಾನಲ್ಲಿ ಬಾಲಯ್ಯ ರುದ್ರ ತಾಂಡವ ಆಡಿದ್ದಾರೆ. ಬಾಲಯ್ಯ ಅಭಿಮಾನಿಗಳಿಗೆ ಹೇಳಿ ಮಾಡಿಸಿದ ಸಿನಿಮಾ ಎಂದಿದ್ದಾರೆ. ಸಿನಿಮಾಕ್ಕೆ ಎರಡು ಸ್ಟಾರ್ಸ್ಟ್ ಕೊಟ್ಟಿದ್ದಾರೆ.

ಬಾಸ್ ಎಂಬುವರು ಟ್ವೀಟ್ ಮಾಡಿ, ‘ಅಖಂಡ 2’ ಸಿನಿಮಾದ ಮೊದಲಾರ್ಧ ಕ್ಲೀಷೆ ದೃಶ್ಯಗಳಿದ್ದರೂ ತುಸು ಡೀಸೆಂಟ್ ಆಗಿದೆ. ದ್ವಿತೀಯಾರ್ಧ ಬಹಳ ಕ್ಲೀಷೆ ಮತ್ತು ಕ್ರಿಂಜ್ ದೃಶ್ಯಗಳನ್ನು ಒಳಗೊಂಡಿದೆ. ತಮನ್ನ ಅವರ ಸಂಗೀತ ಸಿನಿಮಾದ ಪ್ಲಸ್ ಪಾಯಿಂಟ್. ಮಕ್ಕಳನ್ನು ಸಿನಿಮಾಕ್ಕೆ ಕರೆದುಕೊಂಡು ಹೋಗಬೇಡಿ, ಖಂಡಿತ ಭಯಪಟ್ಟು ಕಣ್ಣೀರು ಹಾಕುತ್ತಾರೆ ಎಂದಿದ್ದಾರೆ.

ತೆಲುಗು ಬಾಕ್ಸ್ ಆಫೀಸ್​​ನವರು ಟ್ವೀಟ್​ ಮಾಡಿದ್ದು, ‘ದೇವರು, ಧರ್ಮದ ಹೆಸರಲ್ಲಿ ಬಾಲಕೃಷ್ಣ ಮತ್ತು ಬೊಯಪಾಟಿ ಶ್ರೀನು ಅವರು ಬಹಳ ಕ್ರಿಂಜ್ ಆದ ಕತೆಯನ್ನು ಹೆಣೆದಿದ್ದಾರೆ. ‘ಅಖಂಡ 2’ ಸಿನಿಮಾವನ್ನು ಬಾಲಯ್ಯ ಜೀವನ ಪರ್ಯಂತ ಟ್ರೋಲ್ ಮಾಡಬಹುದು ಅಷ್ಟು ಕ್ರಿಂಜ್ ದೃಶ್ಯಗಳು ಸಿನಿಮಾನಲ್ಲಿವೆ. ಮೊದಲಾರ್ಧಕ್ಕಿಂತಲೂ ದ್ವಿತೀಯಾರ್ಧ ಬಹಳ ಭಯಾನಕವಾಗಿದೆ. ‘ಅಖಂಡ 2’ಗಿಂತಲೂ ‘ಅಖಂಡ’ ನೂರು ಪಟ್ಟು ಉತ್ತಮವಾಗಿತ್ತು ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ