AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೀ ಅದು ಎಣ್ಣೆ ಅಲ್ಲ, ಗ್ರಾಫಿಕ್ಸ್ ಬಾಟಲಿ’; ಬಾಲಯ್ಯ ವಿವಾದ ಮುಚ್ಚಿಹಾಕಲು ನಿರ್ಮಾಪಕ ಕೊಟ್ಟ ಉತ್ತರವಿದು

‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾದ ಘಟನೆ ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಅವರು ಸಿಟ್ಟಲ್ಲಿ ಅಂಜಲಿ ಅವರನ್ನು ತಳ್ಳಿದ್ದರು. ಅಂಜಲಿ ಇದನ್ನು ಹಾಸ್ಯ ರೂಪದಲ್ಲೇ ಸ್ವೀಕರಿಸಿದ್ದಾರೆ. ಆದರೆ, ನೆಟ್ಟಿಗರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

‘ರೀ ಅದು ಎಣ್ಣೆ ಅಲ್ಲ, ಗ್ರಾಫಿಕ್ಸ್ ಬಾಟಲಿ’; ಬಾಲಯ್ಯ ವಿವಾದ ಮುಚ್ಚಿಹಾಕಲು ನಿರ್ಮಾಪಕ ಕೊಟ್ಟ ಉತ್ತರವಿದು
ಬಾಲಕೃಷ್ಣ
ರಾಜೇಶ್ ದುಗ್ಗುಮನೆ
|

Updated on:May 31, 2024 | 7:07 AM

Share

ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ನಡೆದ ‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್​ನಲ್ಲಿ ಬಾಲಯ್ಯ ಅವರು ನಟಿ ಅಂಜಲಿ ಅವರನ್ನು ತಳ್ಳಿದ್ದರು. ಅದಕ್ಕೂ ಮೊದಲು ಬಾಲಯ್ಯ ಕಾಲ ಕೆಳಗೆ ಆಲ್ಕೋಹಾಲ್​ ಇದೆ ಎನ್ನಲಾದ ಬಾಟಲಿ ಒಂದು ಕಾಣಿಸಿತ್ತು. ಬಾಲಯ್ಯ ಅವರು ಕುಡಿದಿದ್ದರಿಂದಲೇ ಈ ರೀತಿ ಆಗಿದೆ ಎಂದು ಅನೇಕರು ಮಾತನಾಡಿಕೊಂಡಿದ್ದರು. ಈಗ ‘ಗ್ಯಾಂಗ್ ಆಫ್ ಗೋದಾವರಿ’ ಸಿನಿಮಾದ ನಿರ್ಮಾಪಕರು ಈ ವಿವಾದದಿಂದ ತಪ್ಪಿಸಿಕೊಳ್ಳಲು ಹಾರಿಕೆ ಉತ್ತರ ನೀಡಿದ್ದಾರೆ. ‘ಅದು ಗ್ರಾಫಿಕ್ಸ್ ಬಾಟಲಿ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾದ ಘಟನೆ ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಅವರು ಸಿಟ್ಟಲ್ಲಿ ಅಂಜಲಿ ಅವರನ್ನು ತಳ್ಳಿದ್ದರು. ಅಂಜಲಿ ಇದನ್ನು ಹಾಸ್ಯ ರೂಪದಲ್ಲೇ ಸ್ವೀಕರಿಸಿದ್ದಾರೆ. ಆದರೆ, ನೆಟ್ಟಿಗರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಬಾಲಯ್ಯ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. ‘ಕುಡಿದ ಏಟಲ್ಲಿ ಈ ರೀತಿ ಮಾಡಿದರು’ ಎನ್ನುವ ಆರೋಪ ಬಂತು. ಈ ಘಟನೆಯಿಂದ ಎಚ್ಚೆತ್ತಿರುವ ಸಿನಿಮಾದ ನಿರ್ಮಾಪಕ ನಾಗ ವಂಶಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವೇದಿಕೆ ಮೇಲೇ ನಟಿಯನ್ನು ತಳ್ಳಿದ ಬಾಲಯ್ಯ; ಶಾಕಿಂಗ್ ವಿಡಿಯೋ ವೈರಲ್

‘ಆ ಬಾಟಲಿಯನ್ನು ಗ್ರಾಫಿಕ್ಸ್ ಮೂಲಕ ಸೇರಿಸಲಾಗಿದೆ. ನಿಜವಾಗಿ ಅಲ್ಲಿ ಯಾವುದೇ ಬಾಟಲಿ ಇರಲಿಲ್ಲ’ ಎಂದಿದ್ದಾರೆ ನಾಗ ವಂಶಿ. ಈ ಮಾತನ್ನು ಕೇಳಿ ಫ್ಯಾನ್ಸ್ ನಕ್ಕು ನಕ್ಕು ಸುಸ್ತಾಗಿದ್ದಾರೆ. ‘ಸುಳ್ಳು ಹೇಳಿದರೂ ಎಲ್ಲರೂ ನಂಬುವಂತ ಸುಳ್ಳನ್ನು ಹೇಳಬೇಕು’ ಎನ್ನುವ ಕಿವಿಮಾತನ್ನು ಕೆಲವರು ಹೇಳಿದ್ದಾರೆ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಶೋಭಿತಾ-ನಾಗ ಚೈತನ್ಯ ಪ್ರೀತಿ ವಿಚಾರಕ್ಕೆ ಇಂದೇ ಸಿಗಲಿದೆ ಸ್ಪಷ್ಟನೆ

#sobhitadhulipal #Nagachaitanya

ಶೋಭಿತಾ-ನಾಗ ಚೈತನ್ಯ ಪ್ರೀತಿ ವಿಚಾರಕ್ಕೆ ಇಂದೇ ಸಿಗಲಿದೆ ಸ್ಪಷ್ಟನೆ

ಕೆಲವರು ಬಾಲಯ್ಯ ಅವರು ನಡೆದುಕೊಂಡ ರೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ‘ಬಾಲಯ್ಯ ಹಾಗೂ ಅಂಜಲಿ ಈ ಮೊದಲು ಒಟ್ಟಾಗಿ ನಟಿಸಿದ್ದಾರೆ. ಅವರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಈ ಕಾರಣಕ್ಕೆ ಅವರು ತಳ್ಳಿದ್ದಾರೆ. ಗಂಭೀರವಾಗಿ ತಳ್ಳಿದ್ದರೆ ಅಂಜಲಿ ಏಕೆ ನಗುತ್ತಿದ್ದರು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಅಂದಹಾಗೆ, ಬಾಲಯ್ಯ ಅವರ ಕಾಲ ಅಡಿಯಲ್ಲಿ ಎರಡು ನೀರಿನ ಬಾಟಲಿ ಇತ್ತು. ಒಂದು ಬಾಟಲಿಯಲ್ಲಿ ನೀರು ಹಾಗೂ ಮತ್ತೊಂದು ಬಾಟಲಿಯಲ್ಲಿ ಮದ್ಯದ ರೀತಿಯ ದ್ರವ ಇತ್ತು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Fri, 31 May 24

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK