AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸಿ ನಂಬರ್ ಪಡೆಯಲು ಮತ್ತೊಂದು ಕಾರಿಗೆ ಕೊಡವಷ್ಟೇ ಹಣ ಕೊಟ್ಟ ಬಾಲಯ್ಯ

ನಟ ಹಾಗೂ ಶಾಸಕ ಬಾಲಕೃಷ್ಣ ಅವರು ತಮ್ಮ ಹೊಸ ಬಿಎಂಡಬ್ಲ್ಯೂ ಕಾರಿಗೆ TG09 F001 ನಂಬರ್ ಪ್ಲೇಟ್ ಪಡೆದುಕೊಂಡಿದ್ದಾರೆ. ಇದಕ್ಕಾಗಿ 7.75 ಲಕ್ಷ ರೂಪಾಯಿ ಪಾವತಿಸಿದ್ದಾರೆ. ಇದು ಸೆಲೆಬ್ರಿಟಿಗಳು ಫ್ಯಾನ್ಸಿ ನಂಬರ್ ಪ್ಲೇಟ್‌ಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ.

ಫ್ಯಾನ್ಸಿ ನಂಬರ್ ಪಡೆಯಲು ಮತ್ತೊಂದು ಕಾರಿಗೆ ಕೊಡವಷ್ಟೇ ಹಣ ಕೊಟ್ಟ ಬಾಲಯ್ಯ
ಬಾಲಯ್ಯ
ರಾಜೇಶ್ ದುಗ್ಗುಮನೆ
|

Updated on: Apr 20, 2025 | 3:07 PM

Share

ತಮ್ಮ ಕಾರುಗಳಿಗೆ ಫ್ಯಾನ್ಸಿ ನಂಬರ್ ಪಡೆದುಕೊಳ್ಳಲು ಅನೇಕರು ಬಯಸುತ್ತಾರೆ. ಅದರಲ್ಲೂ ಸೆಲೆಬ್ರಿಟಿಗಳು ತಮ್ಮ ಲಕ್ಕಿ ನಂಬರ್ ಪಡೆಯಲು ಲಕ್ಷಾಂತರ ರೂಪಾಯಿ ನೀಡಲು ರೆಡಿ ಇರುತ್ತಾರೆ. ಕೆಲವರು ತಮ್ಮ ಎಲ್ಲ ಕಾರುಗಳಿಗೆ ಒಂದೇ ರೀತಿಯ ಸಂಖ್ಯೆ ನೀಡುತ್ತಾರೆ. ಈಗ ನಟ ಹಾಗೂ ಶಾಸಕ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಕೂಡ ಒಂದು ಕಾರಿನ ನಂಬರ್​ ಪ್ಲೇಟ್​ಗೆ ಬರೋಬ್ಬರಿ 7 ಲಕ್ಷ ರೂಪಾಯಿ ನೀಡಿದ್ದಾರೆ ಎಂದು ವರದಿ ಆಗಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಬಾಲಕೃಷ್ಣ ಅವರು ಇತ್ತೀಚೆಗೆ ಹೊಸ ಬಿಎಂಡಬ್ಲ್ಯೂ ಕಾರನ್ನು ಖರೀದಿ ಮಾಡಿದ್ದಾರೆ. ಅವರು ಕಾರಿನ ಸಂಖ್ಯೆ ಪಡೆಯಲು ಆಕ್ಷನ್​ಗೆ ಹೋಗಿದ್ದಾರೆ. TG09 F001 ಇದು ಅವರ ಹೊಸ ಕಾರಿನ ಸಂಖ್ಯೆ. ನಂಬರ್ 1 ಇದೆ ಎಂಬ ಕಾರಣಕ್ಕೆ ಅವರಿಗೆ 7.75 ಲಕ್ಷ ರೂಪಾಯಿ ಪಾವತಿ ಮಾಡಿದ್ದಾರೆ. ಈ ಹಣದಲ್ಲಿ ಮತ್ತೊಂದು ಕಾರೇ ಬರುತ್ತಿತ್ತು ಎಂದು ಅನೇಕರು ಹೇಳಿದ್ದಾರೆ.

ಖೈರಾತಾಬಾದ್ ಆರ್​ಟಿಒನಲ್ಲಿ ಈ ಆಕ್ಷನ್ ನಡೆದಿದೆ. ಒಂದೇ ದಿನ ಆಕ್ಷನ್​ನಿಂದ ಈ ಆರ್​ಟಿಒಗೆ ಬರೋಬ್ಬರಿ 37.15 ಲಕ್ಷ ರೂಪಾಯಿ ಗಳಿಕೆ ಆಗಿದೆ. ಇದರಲ್ಲಿ ಬಾಲಕೃಷ್ಣ ಅವರು ಪಾವತಿಸಿದ್ದು ದೊಡ್ಡ ಮೊತ್ತ ಎನ್ನಲಾಗುತ್ತಿದೆ. ವೈಯಕ್ತಿವಾಗಿ ಮಾತ್ರವಲ್ಲದೆ, ಅನೇಕ ಕಂಪನಿಗಳು ಕೂಡ ಈ ಸಂಖ್ಯೆಯನ್ನು ಖರೀದಿ ಮಾಡಿವೆ ಅನ್ನೋದು ವಿಶೇಷ. ಫ್ಯಾನ್ಸಿ ಸಂಖ್ಯೆಯ ಹುಚ್ಚು ಕೇವಲ ಬಾಲಕೃಷ್ಣ ಅವರಿಗೆ ಮಾತ್ರ ಸೀಮಿತ ಆಗಿಲ್ಲ. ಜೂನಿಯರ್ ಎನ್​ಟಿಆರ್, ಯಶ್ ಸೇರಿದಂತೆ ಅನೇಕರು ಈ ರೀತಿ ಫ್ಯಾನ್ಸಿ ನಂಬರ್ ಖರೀದಿ ಮಾಡಿದ್ದಾರೆ. ಜೂನಿಯರ್ ಎನ್​ಟಿಆರ್ ಕಾರಿನಲ್ಲಿ ನಂಬರ್​ ಪ್ಲೇಟ್ 9999 ಇರುತ್ತದೆ. ಯಶ್ ಅವರ ಕಾರಿನ ಸಂಖ್ಯೆ 8055 (BOSS) ಕೂಡ ಗಮನ ಸೆಳೆದಿತ್ತು.

ಇದನ್ನೂ ಓದಿ
Image
ಭೀಕರ ಅಪಘಾತಕ್ಕೆ ಒಳಗಾದ ನಟ ಅಜಿತ್ ಕುಮಾರ್; ಶಾಕಿಂಗ್ ವಿಡಿಯೋ ವೈರಲ್
Image
ಉಪೇಂದ್ರ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?
Image
ಬಿಗ್ ಬಾಸ್ ಮನೆಯಲ್ಲಿದ್ದಾಗ ವೋಟ್ ಹಾಕಿದ ಫ್ಯಾನ್ಸ್​ಗೆ ತ್ರಿವಿಕ್ರಂ ಅವಮಾನ
Image
ಪ್ರಿಯಾಂಕಾ ಪತಿ ನಿಕ್ ಜೋನಸ್​ನ ಭೇಟಿ ಮಾಡಿದ ಸಿತಾರಾ ಕುಟುಂಬ

ಇದನ್ನೂ ಓದಿ: ತೆಲುಗು ಯುವನಟನಿಗೆ ದುರಹಂಕಾರ ಎನ್ನುತ್ತಿರುವ ನಂದಮೂರಿ ಬಾಲಕೃಷ್ಣ ಅಭಿಮಾನಿಗಳು

ಸಿನಿಮಾ ವಿಚಾರಕ್ಕೆ ಬರೋದಾದರೆ ಬಾಲಯ್ಯ ಅವರು ‘ಡಾಕು ಮಹರಾಜ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸಂಕ್ರಾಂತಿಗೆ ರಿಲೀಸ್​ ಆಗಿ ಸೂಪರ್ ಹಿಟ್ ಆಯಿತು. ಈಗ ಅವರು ‘ಅಖಂಡ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಅಖಂಡ’ ಸಿನಿಮಾ ಹಿಟ್ ಆದ ಬಳಿಕ ಇದಕ್ಕೆ ಸೀಕ್ವೆಲ್ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು