Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Mistry Death: ‘ಬಂದಿಶ್ ಬ್ಯಾಂಡಿಟ್ಸ್’ ಖ್ಯಾತಿಯ ನಟ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನ

Amit Mistry Heart Attack: ಹೃದಯಾಘಾತ ಆದ ಕೂಡಲೇ ಅಮಿತ್​ ಮಿಸ್ತ್ರೀ ಅವರ ಪ್ರಾಣಪಕ್ಷಿ ಹಾರಿಹೋಯಿತು. ಆಸ್ಪತ್ರೆಗೆ ಕರೆತರುವಷ್ಟು ಸಮಯವೂ ಉಳಿದಿರಲಿಲ್ಲ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ.

Amit Mistry Death: ‘ಬಂದಿಶ್ ಬ್ಯಾಂಡಿಟ್ಸ್’ ಖ್ಯಾತಿಯ ನಟ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನ
ಅಮಿತ್ ಮಿಸ್ತ್ರೀ
Follow us
ಮದನ್​ ಕುಮಾರ್​
|

Updated on: Apr 23, 2021 | 1:08 PM

ಹಿಂದಿ ಚಿತ್ರರಂಗಕ್ಕೆ ಮೇಲಿಂದ ಮೇಲೆ ಕಹಿ ಸುದ್ದಿ ಕೇಳಿಬರುತ್ತಲೇ ಇವೆ. ಹಿರಿಯ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ನಿಧನರಾದ ಬೆನ್ನಲೇ ನಟ ಅಮಿತ್​ ಮಿಸ್ತ್ರೀ ಮೃತರಾಗಿದ್ದಾರೆ. ಅಮಿತ್​ ಅವರಿಗೆ ಶುಕ್ರವಾರ (ಏ.23) ಹೃದಯಾಘಾತ ಆಗಿದ್ದು, ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿ ಬಳಗಕ್ಕೆ ತೀವ್ರ ನೋವು ಉಂಟಾಗಿದೆ.

ಶುಕ್ರವಾರ ಬೆಳಗ್ಗೆಯೇ ಅಮಿತ್​ ಮಿಸ್ತ್ರೀಗೆ ತೀವ್ರ ಹೃದಯಾಘಾತ ಆಗಿದೆ. ಕೂಡಲೇ ಅವರ ಪ್ರಾಣಪಕ್ಷಿ ಹಾರಿಹೋಯಿತು. ಆಸ್ಪತ್ರೆಗೆ ಕರೆತರುವಷ್ಟು ಸಮಯವೂ ಉಳಿದಿರಲಿಲ್ಲ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ. ಅಮಿತ್​ ಮಿಸ್ತ್ರೀ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಗುಜರಾತಿ ರಂಗಭೂಮಿ ಮತ್ತು ಸಿನಿಮಾಗಳಲ್ಲಿ ಅಮಿತ್​ ಸಕ್ರಿಯರಾಗಿದ್ದರು. ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದ್ದರು. 2020ರಲ್ಲಿ ಅಮೇಜಾನ್​ ಪ್ರೈಮ್​ನಲ್ಲಿ ಬಿಡುಗಡೆಯಾದ ಬಂದಿಶ್​ ಬ್ಯಾಂಡಿಟ್ಸ್​ ವೆಬ್​ ಸಿರೀಸ್​ನಲ್ಲಿ ಅಮಿತ್​ ಒಂದು ಮುಖ್ಯ ಪಾತ್ರ ಮಾಡಿದ್ದರು. ಆ ಮೂಲಕ ಅವರು ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದರು.

ಕ್ಯಾ ಹೆಹ್ನಾ ಹೈ, ಏಕ್​ ಚಾಲೀಸ್​ ಕಿ ಲಾಸ್ಟ್​ ಲೋಕಲ್​, 99, ಶೋರ್​ ಇನ್​ ದ ಸಿಟಿ, ಎಮ್ಲಾ ಪಗ್ಲಾ ದೀವಾನ, ಎ ಜಂಟಲ್​ಮನ್​ ಮುಂತಾದ ಹಿಂದಿ ಸಿನಿಮಾಗಳಲ್ಲಿ ಅಮಿತ್​ ನಟಿಸಿದ್ದರು. ತೆನಾಲಿ ರಾಮ, ವೋ, ಶ್​, ಕೊಯಿ ಹೈ ಮುಂತಾದ ಧಾರಾವಾಹಿಗಳು ಅಮಿತ್​ ಅವರಿಗೆ ಖ್ಯಾತಿ ತಂದುಕೊಟ್ಟಿದ್ದವು.

ಕೊರೊನಾ ಕಾರಣದಿಂದಲೂ ಚಿತ್ರರಂಗದ ಅನೇಕರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಹಿರಿಯ ನಟ ಕಿಶೋರ್​ ನಂದಲಸ್ಕರ್​ ಅವರು ಕೊವಿಡ್​ನಿಂದ ಮೃತರಾದರು. ಗುರುವಾರ (ಏ.22) ರಾತ್ರಿ ಹಿರಿಯ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ನಿಧನರಾದರು. ಈಗ ಅಮಿತ್​ ಮಿಸ್ತ್ರೀ ಅವರ ಸಾವಿನ ಸುದ್ದಿಯಿಂದ ಬಾಲಿವುಡ್​ನಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರಿಗೆ ಕೊವಿಡ್​ ತಗುಲಿತ್ತೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

(Bandish Bandits actor Amit Mistry dies of cardiac arrest)

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ