Amit Mistry Death: ‘ಬಂದಿಶ್ ಬ್ಯಾಂಡಿಟ್ಸ್’ ಖ್ಯಾತಿಯ ನಟ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನ

Amit Mistry Heart Attack: ಹೃದಯಾಘಾತ ಆದ ಕೂಡಲೇ ಅಮಿತ್​ ಮಿಸ್ತ್ರೀ ಅವರ ಪ್ರಾಣಪಕ್ಷಿ ಹಾರಿಹೋಯಿತು. ಆಸ್ಪತ್ರೆಗೆ ಕರೆತರುವಷ್ಟು ಸಮಯವೂ ಉಳಿದಿರಲಿಲ್ಲ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ.

Amit Mistry Death: ‘ಬಂದಿಶ್ ಬ್ಯಾಂಡಿಟ್ಸ್’ ಖ್ಯಾತಿಯ ನಟ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನ
ಅಮಿತ್ ಮಿಸ್ತ್ರೀ

Updated on: Apr 23, 2021 | 1:08 PM

ಹಿಂದಿ ಚಿತ್ರರಂಗಕ್ಕೆ ಮೇಲಿಂದ ಮೇಲೆ ಕಹಿ ಸುದ್ದಿ ಕೇಳಿಬರುತ್ತಲೇ ಇವೆ. ಹಿರಿಯ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ನಿಧನರಾದ ಬೆನ್ನಲೇ ನಟ ಅಮಿತ್​ ಮಿಸ್ತ್ರೀ ಮೃತರಾಗಿದ್ದಾರೆ. ಅಮಿತ್​ ಅವರಿಗೆ ಶುಕ್ರವಾರ (ಏ.23) ಹೃದಯಾಘಾತ ಆಗಿದ್ದು, ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿ ಬಳಗಕ್ಕೆ ತೀವ್ರ ನೋವು ಉಂಟಾಗಿದೆ.

ಶುಕ್ರವಾರ ಬೆಳಗ್ಗೆಯೇ ಅಮಿತ್​ ಮಿಸ್ತ್ರೀಗೆ ತೀವ್ರ ಹೃದಯಾಘಾತ ಆಗಿದೆ. ಕೂಡಲೇ ಅವರ ಪ್ರಾಣಪಕ್ಷಿ ಹಾರಿಹೋಯಿತು. ಆಸ್ಪತ್ರೆಗೆ ಕರೆತರುವಷ್ಟು ಸಮಯವೂ ಉಳಿದಿರಲಿಲ್ಲ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ. ಅಮಿತ್​ ಮಿಸ್ತ್ರೀ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಗುಜರಾತಿ ರಂಗಭೂಮಿ ಮತ್ತು ಸಿನಿಮಾಗಳಲ್ಲಿ ಅಮಿತ್​ ಸಕ್ರಿಯರಾಗಿದ್ದರು. ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದ್ದರು. 2020ರಲ್ಲಿ ಅಮೇಜಾನ್​ ಪ್ರೈಮ್​ನಲ್ಲಿ ಬಿಡುಗಡೆಯಾದ ಬಂದಿಶ್​ ಬ್ಯಾಂಡಿಟ್ಸ್​ ವೆಬ್​ ಸಿರೀಸ್​ನಲ್ಲಿ ಅಮಿತ್​ ಒಂದು ಮುಖ್ಯ ಪಾತ್ರ ಮಾಡಿದ್ದರು. ಆ ಮೂಲಕ ಅವರು ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದರು.

ಕ್ಯಾ ಹೆಹ್ನಾ ಹೈ, ಏಕ್​ ಚಾಲೀಸ್​ ಕಿ ಲಾಸ್ಟ್​ ಲೋಕಲ್​, 99, ಶೋರ್​ ಇನ್​ ದ ಸಿಟಿ, ಎಮ್ಲಾ ಪಗ್ಲಾ ದೀವಾನ, ಎ ಜಂಟಲ್​ಮನ್​ ಮುಂತಾದ ಹಿಂದಿ ಸಿನಿಮಾಗಳಲ್ಲಿ ಅಮಿತ್​ ನಟಿಸಿದ್ದರು. ತೆನಾಲಿ ರಾಮ, ವೋ, ಶ್​, ಕೊಯಿ ಹೈ ಮುಂತಾದ ಧಾರಾವಾಹಿಗಳು ಅಮಿತ್​ ಅವರಿಗೆ ಖ್ಯಾತಿ ತಂದುಕೊಟ್ಟಿದ್ದವು.

ಕೊರೊನಾ ಕಾರಣದಿಂದಲೂ ಚಿತ್ರರಂಗದ ಅನೇಕರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಹಿರಿಯ ನಟ ಕಿಶೋರ್​ ನಂದಲಸ್ಕರ್​ ಅವರು ಕೊವಿಡ್​ನಿಂದ ಮೃತರಾದರು. ಗುರುವಾರ (ಏ.22) ರಾತ್ರಿ ಹಿರಿಯ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ನಿಧನರಾದರು. ಈಗ ಅಮಿತ್​ ಮಿಸ್ತ್ರೀ ಅವರ ಸಾವಿನ ಸುದ್ದಿಯಿಂದ ಬಾಲಿವುಡ್​ನಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರಿಗೆ ಕೊವಿಡ್​ ತಗುಲಿತ್ತೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

(Bandish Bandits actor Amit Mistry dies of cardiac arrest)

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us