AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ನಟನಿಗೆ ಕೆಟ್ಟ ಸಾವು ಬರುತ್ತೆ’; ಪೊಸಾನಿಗೆ ಬಂಡ್ಲ ಗಣೇಶ್​ ಶಾಪ: ಪವನ್​ ಕಲ್ಯಾಣ್​ ಬಗ್ಗೆ ಮಾತಾಡಿದ್ದೇ ತಪ್ಪಾಯ್ತು

‘ಪವನ್​ ಕಲ್ಯಾಣ್​ ಮೇಲೆ ಪೊಸಾನಿ ಕೃಷ್ಣ ಮುರಳಿ ಮಾತಿನ ದಾಳಿ ಮಾಡಿದ್ದರ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಆದರೆ ಪವನ್​ ಕಲ್ಯಾಣ್​ರ ತಾಯಿ ಬಗ್ಗೆ ಮಾತನಾಡಿದ್ದು ತಪ್ಪು’ ಎಂದು ಬಂಡ್ಲ ಗಣೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಆ ನಟನಿಗೆ ಕೆಟ್ಟ ಸಾವು ಬರುತ್ತೆ’; ಪೊಸಾನಿಗೆ ಬಂಡ್ಲ ಗಣೇಶ್​ ಶಾಪ: ಪವನ್​ ಕಲ್ಯಾಣ್​ ಬಗ್ಗೆ ಮಾತಾಡಿದ್ದೇ ತಪ್ಪಾಯ್ತು
ಬಂಡ್ಲ ಗಣೇಶ್, ಪವನ್ ಕಲ್ಯಾಣ್, ಪೊಸಾನಿ ಕೃಷ್ಣ ಮುರಳಿ
TV9 Web
| Updated By: ಮದನ್​ ಕುಮಾರ್​|

Updated on:Oct 02, 2021 | 9:31 AM

Share

ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲಿ ಪೊಸಾನಿ ಕೃಷ್ಣ ಮುರಳಿ ಕೂಡ ಪ್ರಮುಖರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇರುವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ಈಗ ಅವರು ವಿವಾದ ಮಾಡಿಕೊಂಡಿದ್ದಾರೆ. ‘ಪವರ್​ ಸ್ಟಾರ್​’ ಪವನ್​ ಕಲ್ಯಾಣ್​ ಬಗ್ಗೆ ಅನೇಕ ಆರೋಪಗಳನ್ನು ಹೊರಿಸಿರುವ ಪೊಸಾನಿ ಕೃಷ್ಣ ಮುರಳಿ ವಿರುದ್ಧ ಪವನ್​ ಕಲ್ಯಾಣ್​ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ಟಾಲಿವುಡ್​ನ ಜನಪ್ರಿಯ ನಿರ್ಮಾಪಕ ಬಂಡ್ಲ ಗಣೇಶ್​ ಕೂಡ ಪೊಸಾನಿ ಕೃಷ್ಣ ಮುರಳಿ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​’ ಚುನಾವಣೆಗೆ ತಾವು ಸಲ್ಲಿಸಿದ್ದ ನಾಮಪತ್ರವನ್ನು ಬಂಡ್ಲ ಗಣೇಶ್​ ಹಿಂಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪೊಸಾನಿ ಕೃಷ್ಣ ಮುರಳಿ ಬಗ್ಗೆ ಕಿಡಿಕಾರಿದ್ದಾರೆ. ‘ಪೊಸಾನಿ ಅವರ ಪತ್ನಿ ನನಗೆ ತಾಯಿ ಇದ್ದಂತೆ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ಪೊಸಾನಿಯನ್ನು ಇಷ್ಟು ದಿನ ಸಹಿಸಿಕೊಂಡಿದ್ದಕ್ಕೆ ಅವರಿಗೆ ಹ್ಯಾಟ್ಸ್​ ಆಫ್​. ದೇವರು ಇರುವುದೇ ನಿಜವಾದರೆ ಪೊಸಾನಿಗೆ ಬರ್ಬರವಾದ ಸಾವು ಬರಲಿದೆ’ ಎಂದು ಬಂಡ್ಲ ಗಣೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪವನ್​ ಕಲ್ಯಾಣ್​ ಮೇಲೆ ಪೊಸಾನಿ ಮಾತಿನ ದಾಳಿ ಮಾಡಿದ್ದರ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಆದರೆ ಪವನ್​ ಕಲ್ಯಾಣ್​ರ ತಾಯಿ ಬಗ್ಗೆ ಮಾತನಾಡಿದ್ದು ತಪ್ಪು. ಅವರನ್ನು ಈ ವಿಚಾರದಲ್ಲಿ ಎಳೆದು ತರಬಾರದಿತ್ತು. ಕುಟುಂಬದ ಮಹಿಳೆಯರ ಬಗ್ಗೆ ಪೊಸಾನಿ ಮಾತನಾಡಿದ್ದು ಸರಿಯಲ್ಲ’ ಎಂದು ಬಂಡ್ಲ ಗಣೇಶ್​ ಗರಂ ಆಗಿದ್ದಾರೆ.

ಪವನ್ ಕಲ್ಯಾಣ್ ಇತ್ತೀಚೆಗೆ ಆಂಧ್ರಪ್ರದೇಶದ ಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸುವಾಗ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ ಎಂದು ಪೊಸಾನಿ ಕೃಷ್ಣ ಮುರಳಿ ಆರೋಪಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪವನ್ ಕಲ್ಯಾಣ್​ರ ವೈಯಕ್ತಿಕ ಜೀವನದ ವಿಚಾರಗಳನ್ನು ಎಳೆದುತಂದು ಅವರಿಗೆ ಪಂಜಾಬ್ ಮೂಲದ ನಟಿಯೊಂದಿಗೆ ಸಂಬಂಧ ಇತ್ತು ಎಂದು ಆರೋಪಿಸಿದ್ದರು. ಈ ಎಲ್ಲ ಕಾರಣಗಳಿಗಾಗಿ ಪೊಸಾನಿ ವಿರುದ್ಧ ಪವನ್​ ಕಲ್ಯಾಣ್​ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ:

‘ಪವರ್​ ಇಲ್ಲದವರಿಗೆ ಪವರ್​ ಸ್ಟಾರ್​ ಅಂತ ಯಾಕೆ ಕರೆಯುತ್ತೀರಿ’? ಪವನ್​ ಕಲ್ಯಾಣ್​ ಟಾಂಗ್​ ಕೊಟ್ಟಿದ್ದು ಯಾರಿಗೆ?

ಪೊಸಾನಿ ಕೃಷ್ಣ ಮುರಳಿ ಮೇಲೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ, 10 ಜನರ ಬಂಧನ; ಏನಿದು ಪ್ರಕರಣ?

Published On - 9:21 am, Sat, 2 October 21

ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್