AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ನಟನಿಗೆ ಕೆಟ್ಟ ಸಾವು ಬರುತ್ತೆ’; ಪೊಸಾನಿಗೆ ಬಂಡ್ಲ ಗಣೇಶ್​ ಶಾಪ: ಪವನ್​ ಕಲ್ಯಾಣ್​ ಬಗ್ಗೆ ಮಾತಾಡಿದ್ದೇ ತಪ್ಪಾಯ್ತು

‘ಪವನ್​ ಕಲ್ಯಾಣ್​ ಮೇಲೆ ಪೊಸಾನಿ ಕೃಷ್ಣ ಮುರಳಿ ಮಾತಿನ ದಾಳಿ ಮಾಡಿದ್ದರ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಆದರೆ ಪವನ್​ ಕಲ್ಯಾಣ್​ರ ತಾಯಿ ಬಗ್ಗೆ ಮಾತನಾಡಿದ್ದು ತಪ್ಪು’ ಎಂದು ಬಂಡ್ಲ ಗಣೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಆ ನಟನಿಗೆ ಕೆಟ್ಟ ಸಾವು ಬರುತ್ತೆ’; ಪೊಸಾನಿಗೆ ಬಂಡ್ಲ ಗಣೇಶ್​ ಶಾಪ: ಪವನ್​ ಕಲ್ಯಾಣ್​ ಬಗ್ಗೆ ಮಾತಾಡಿದ್ದೇ ತಪ್ಪಾಯ್ತು
ಬಂಡ್ಲ ಗಣೇಶ್, ಪವನ್ ಕಲ್ಯಾಣ್, ಪೊಸಾನಿ ಕೃಷ್ಣ ಮುರಳಿ
TV9 Web
| Edited By: |

Updated on:Oct 02, 2021 | 9:31 AM

Share

ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲಿ ಪೊಸಾನಿ ಕೃಷ್ಣ ಮುರಳಿ ಕೂಡ ಪ್ರಮುಖರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇರುವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ಈಗ ಅವರು ವಿವಾದ ಮಾಡಿಕೊಂಡಿದ್ದಾರೆ. ‘ಪವರ್​ ಸ್ಟಾರ್​’ ಪವನ್​ ಕಲ್ಯಾಣ್​ ಬಗ್ಗೆ ಅನೇಕ ಆರೋಪಗಳನ್ನು ಹೊರಿಸಿರುವ ಪೊಸಾನಿ ಕೃಷ್ಣ ಮುರಳಿ ವಿರುದ್ಧ ಪವನ್​ ಕಲ್ಯಾಣ್​ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ಟಾಲಿವುಡ್​ನ ಜನಪ್ರಿಯ ನಿರ್ಮಾಪಕ ಬಂಡ್ಲ ಗಣೇಶ್​ ಕೂಡ ಪೊಸಾನಿ ಕೃಷ್ಣ ಮುರಳಿ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​’ ಚುನಾವಣೆಗೆ ತಾವು ಸಲ್ಲಿಸಿದ್ದ ನಾಮಪತ್ರವನ್ನು ಬಂಡ್ಲ ಗಣೇಶ್​ ಹಿಂಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪೊಸಾನಿ ಕೃಷ್ಣ ಮುರಳಿ ಬಗ್ಗೆ ಕಿಡಿಕಾರಿದ್ದಾರೆ. ‘ಪೊಸಾನಿ ಅವರ ಪತ್ನಿ ನನಗೆ ತಾಯಿ ಇದ್ದಂತೆ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ಪೊಸಾನಿಯನ್ನು ಇಷ್ಟು ದಿನ ಸಹಿಸಿಕೊಂಡಿದ್ದಕ್ಕೆ ಅವರಿಗೆ ಹ್ಯಾಟ್ಸ್​ ಆಫ್​. ದೇವರು ಇರುವುದೇ ನಿಜವಾದರೆ ಪೊಸಾನಿಗೆ ಬರ್ಬರವಾದ ಸಾವು ಬರಲಿದೆ’ ಎಂದು ಬಂಡ್ಲ ಗಣೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪವನ್​ ಕಲ್ಯಾಣ್​ ಮೇಲೆ ಪೊಸಾನಿ ಮಾತಿನ ದಾಳಿ ಮಾಡಿದ್ದರ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಆದರೆ ಪವನ್​ ಕಲ್ಯಾಣ್​ರ ತಾಯಿ ಬಗ್ಗೆ ಮಾತನಾಡಿದ್ದು ತಪ್ಪು. ಅವರನ್ನು ಈ ವಿಚಾರದಲ್ಲಿ ಎಳೆದು ತರಬಾರದಿತ್ತು. ಕುಟುಂಬದ ಮಹಿಳೆಯರ ಬಗ್ಗೆ ಪೊಸಾನಿ ಮಾತನಾಡಿದ್ದು ಸರಿಯಲ್ಲ’ ಎಂದು ಬಂಡ್ಲ ಗಣೇಶ್​ ಗರಂ ಆಗಿದ್ದಾರೆ.

ಪವನ್ ಕಲ್ಯಾಣ್ ಇತ್ತೀಚೆಗೆ ಆಂಧ್ರಪ್ರದೇಶದ ಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸುವಾಗ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ ಎಂದು ಪೊಸಾನಿ ಕೃಷ್ಣ ಮುರಳಿ ಆರೋಪಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪವನ್ ಕಲ್ಯಾಣ್​ರ ವೈಯಕ್ತಿಕ ಜೀವನದ ವಿಚಾರಗಳನ್ನು ಎಳೆದುತಂದು ಅವರಿಗೆ ಪಂಜಾಬ್ ಮೂಲದ ನಟಿಯೊಂದಿಗೆ ಸಂಬಂಧ ಇತ್ತು ಎಂದು ಆರೋಪಿಸಿದ್ದರು. ಈ ಎಲ್ಲ ಕಾರಣಗಳಿಗಾಗಿ ಪೊಸಾನಿ ವಿರುದ್ಧ ಪವನ್​ ಕಲ್ಯಾಣ್​ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ:

‘ಪವರ್​ ಇಲ್ಲದವರಿಗೆ ಪವರ್​ ಸ್ಟಾರ್​ ಅಂತ ಯಾಕೆ ಕರೆಯುತ್ತೀರಿ’? ಪವನ್​ ಕಲ್ಯಾಣ್​ ಟಾಂಗ್​ ಕೊಟ್ಟಿದ್ದು ಯಾರಿಗೆ?

ಪೊಸಾನಿ ಕೃಷ್ಣ ಮುರಳಿ ಮೇಲೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ, 10 ಜನರ ಬಂಧನ; ಏನಿದು ಪ್ರಕರಣ?

Published On - 9:21 am, Sat, 2 October 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ