AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸಿನಿಮಾದಲ್ಲಿ ಬೆಂಗಳೂರು ಯುವತಿಯರಿಗೆ ‘ಡಗಾರ್’ ಪದ ಬಳಕೆ; ಭುಗಿಲೆದ್ದ ಆಕ್ರೋಶ

‘ಲೋಕಃ’ ಸಿನಿಮಾದಲ್ಲಿ ಬೆಂಗಳೂರನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಯುವತಿಯರನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವುದು ಮತ್ತು ಪಾರ್ಟಿ, ಡ್ರಗ್ಸ್‌ಗಳನ್ನು ವೈಭವೀಕರಿಸೋದು ವಿರೋಧಕ್ಕೆ ಕಾರಣವಾಗಿದೆ. ಚಿತ್ರದಲ್ಲಿನ ಕೆಲವು ಸಂಭಾಷಣೆಗಳು ಮತ್ತು ದೃಶ್ಯಗಳನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗುತ್ತಿದೆ. ಕನ್ನಡದಲ್ಲಿ ಚಿತ್ರೀಕರಣ ಆಗಿದ್ದರೂ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಸರಿಯಾಗಿ ಪ್ರತಿನಿಧಿಸದಿರುವುದು ಕೂಡ ಟೀಕೆಗೆ ಗುರಿಯಾಗಿದೆ.

ಮಲಯಾಳಂ ಸಿನಿಮಾದಲ್ಲಿ ಬೆಂಗಳೂರು ಯುವತಿಯರಿಗೆ ‘ಡಗಾರ್’ ಪದ ಬಳಕೆ; ಭುಗಿಲೆದ್ದ ಆಕ್ರೋಶ
ಲೋಕಃ
ರಾಜೇಶ್ ದುಗ್ಗುಮನೆ
|

Updated on:Sep 02, 2025 | 8:44 AM

Share

ಬಾಲಿವುಡ್​ನ ‘ಪರಮ ಸುಂದರಿ’ ಸಿನಿಮಾ ವಿಚಾರದಲ್ಲಿ ಕೇರಳದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ತಮ್ಮ ಭಾಷೆಯನ್ನು ಸಿನಿಮಾದಲ್ಲಿ ಸರಿಯಾಗಿ ಚಿತ್ರಿಸಲಾಗಿಲ್ಲ ಎಂದು ಸಿನಿಮಾ ವಿರುದ್ಧ ಕೇರಳದಲ್ಲಿ ಪ್ರತಿಭಟನೆಗಳು ಕೂಡ ನಡೆದವು. ಹೀಗಿರುವಾಗಲೇ ಮಲಯಾಳಂನ ‘ಲೋಕಃ: ಚಾಪ್ಟರ್ 1- ಚಂದ್ರ’ ಸಿನಿಮಾದಲ್ಲಿ (Lokah) ಬೆಂಗಳೂರಿಗರಿಗೆ ಅವಮಾನ ಮಾಡೋ ಪದ ಬಳಕೆ ಆಗಿದೆ. ಅಲ್ಲದೆ, ಬೆಂಗಳೂರನ್ನು ಕೇವಲ ಪಾರ್ಟಿ, ಡ್ರಗ್ಸ್​ಗಳಿಗೆ ಮಾತ್ರ ಎಂದು ಚಿತ್ರಿಸಿರೋ ರೀತಿ ಚರ್ಚೆಯನ್ನು ಹುಟ್ಟುಹಾಕಿದೆ.

ಸಿನಿಮಾದಲ್ಲಿ ಬರೋ ನಾಚಿಯಪ್ಪ ಗೌಡನಿಗೆ (ಸ್ಯಾಂಡಿ) ಮದುವೆ ಆಫರ್ ನೀಡಲಾಗುತ್ತದೆ. ಆದರೆ, ಆತ, ‘ನಾನು ಮದುವೆ ಆಗೋಕೆ ಒಪ್ಪಿಕೊಳ್ಳೋದಿಲ್ಲ ಎಂದಲ್ಲ. ಇಲ್ಲಿಯವರನ್ನು ಮದುವೆ ಆಗಲ್ಲ. ಇಲ್ಲಿಯವರು ಡಗಾರ್​ಗಳು’ ಎಂದು ಹೇಳುತ್ತಾನೆ. ಇಡೀ ಬೆಂಗಳೂರು ಯುವತಿಯರು/ಮಹಿಳೆಯರನ್ನು ಈ ರೀತಿ ಕರೆದಿರೋದು ಚರ್ಚೆ ಹುಟ್ಟುಹಾಕಿದೆ. ಈ ವಾಕ್ಯವನ್ನು ತೆಗೆದು ಹಾಕಬೇಕು ಎಂದು ಅನೇಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
‘ನನ್ನ ಗೇಲಿ ಮಾಡುವುದರಿಂದ ನಿಮಗೆ ಊಟ ಸಿಗುತ್ತಿದೆ ಎಂದರೆ ಖುಷಿ’; ಸಲ್ಮಾನ್
Image
‘ಸು ಫ್ರಮ್ ಸೋ ಅಬ್ಬರ’; 38ನೇ ದಿನ ದೊಡ್ಡ ಮೊತ್ತ ಬಾಚಿದ ಸಿನಿಮಾ
Image
‘ಕಡಿಮೆ ಬೆಲೆ ಎಂದು ಮುಸ್ಲಿಮರು ಗೋಮಾಂಸ ಸೇವಿಸುತ್ತಾರೆ, ನಾನು ತಿಂದೇ ಇಲ್ಲ’
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್

‘ಲೋಕಃ’ ಸಿನಿಮಾದಲ್ಲಿ ಸಾಕಷ್ಟು ಪಾರ್ಟಿ ದೃಶ್ಯಗಳು, ಅದರಲ್ಲಿ ಡ್ರಗ್ ಬಳಕೆ ತೋರಿಸಲಾಗಿದೆ. ಅದು ಕಾಮನ್ ಎಂಬ ರೀತಿಯಲ್ಲಿ ಚಿತ್ರಿಸಲಾಗಿದೆ. ಇದು ಕೂಡ ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ. ಹೊರ ಜಗತ್ತಿಗೆ ನೋಡುವವರಿಗೆ ‘ಬೆಂಗಳೂರು ಇಷ್ಟಕ್ಕೆ ಸೀಮಿತವಾ’ ಎಂಬ ಪ್ರಶ್ನೆ ಹುಟ್ಟುಹಾಕುವಂತೆ ಮಾಡುತ್ತದೆ ಈ ದೃಶ್ಯಗಳು.

ನಾಚಿಯಪ್ಪ ಗೌಡ ಪಾತ್ರ ಮಾಡಿದ್ದು ಸ್ಯಾಂಡಿ. ಅವರು ಮೂಲತಃ ತಮಿಳುನಾಡಿನವರು. ಈ ಪಾತ್ರಕ್ಕೆ ಕನ್ನಡದವರನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತಲ್ಲ ಎಂದು ಅನೇಕರು ಹೇಳಿದ್ದಾರೆ. ಪಾತ್ರದ ಹೆಸರಷ್ಟೇ ನಾಚಿಯಪ್ಪ ಗೌಡ. ಆದರೆ, ಅವರು ಮಾತನಾಡೋದು ತಮಿಳು ಶೈಲಿಯಲ್ಲಿ. ಇದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆ ಮೂಡಿದೆ.

‘ನೀವು ಎಲ್ಲಿಗೆ ಹೋಗಬೇಕು’ ಎಂದು ಆಟೋದವನು ಕೇಳುತ್ತಾನೆ. ‘ಕನ್ನಡ್ ಗೊತ್ತಿಲ್ಲ’ ಎನ್ನುತ್ತಾನೆ ಕಥಾ ನಾಯಕ. ಇದನ್ನು ಅಣಕಿಸುವ ರೀತಿಯಲ್ಲಿ ತೋರಿಸಲಾಗಿದೆ ಎಂದು ಹೇಳಲಾಗುತ್ತಿದೆ.  ಕನ್ನಡ ಸಿನಿಮಾದಲ್ಲಿ ಕೊಚ್ಚಿಗೋ ಅಥವಾ ಮಲಯಾಳಂ ಭಾಷೆಯನ್ನು ಈ ರೀತಿ ಅವಮಾನ ಮಾಡಿದ್ದರೆ ಅಲ್ಲಿಯವರು ಉಗ್ರ ಪ್ರತಿಭಟನೆಯನ್ನೇ ಮಾಡುತ್ತಿದ್ದರು ಎನ್ನುವ ಮಾತುಗಳು ಕೇಳಿ ಬಂದಿವೆ.

ಇದನ್ನೂ ಓದಿ: ‘ಲೋಕಃ’ ಸಿನಿಮಾ ವಿಮರ್ಶೆ; ಮಲಯಾಳಂನಲ್ಲಿ ಉದಯಿಸಿದ ಮಹಿಳಾ ಸೂಪರ್ ಹೀರೋ  

‘ಲೋಕಃ’ ಸಿನಿಮಾ ಒಂದೊಳ್ಳೆಯ ಪ್ರಯತ್ನ. ಇಡೀ ಚಿತ್ರದ ಕಥೆ ಬೆಂಗಳೂರಿನಲ್ಲೇ ಸಾಗುತ್ತದೆ. ಆದರೆ, ಈ ರೀತಿಯ ತಪ್ಪುಗಳಿಂದ ಸಿನಿಮಾ ಟೀಕೆಗೆ ಗುರಿಯಾಗಿದೆ. ಈ ಚಿತ್ರವನ್ನು ದುಲ್ಖರ್ ಸಲ್ಮಾನ್ ನಿರ್ಮಾಣ ಮಾಡಿದ್ದಾರೆ. ಕಲ್ಯಾಣಿ ಪ್ರಿಯದರ್ಶನ್ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Tue, 2 September 25

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ