AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವಾರ್ಡ್​ನಲ್ಲೂ ಜೀವನೋತ್ಸಾಹದ ಸಂಗೀತ; ಬಪ್ಪಿ ಲಹರಿ ವಿಡಿಯೋ ವೈರಲ್​

ಕೊವಿಡ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಒಂದೇ ದಿನ 2.94 ಲಕ್ಷ ಜನರಿಗೆ ಕೊರೊನಾ ಅಂಟಿದೆ. ದೇಶವೊಂದರಲ್ಲಿ ಒಂದೇ ದಿನ ಇಷ್ಟೊಂದು ಕೊರೊನಾ ಕೇಸ್​ ಬಂದಿದ್ದು ಇದೇ ಮೊದಲು.

ಕೊವಿಡ್​ ವಾರ್ಡ್​ನಲ್ಲೂ ಜೀವನೋತ್ಸಾಹದ ಸಂಗೀತ; ಬಪ್ಪಿ ಲಹರಿ ವಿಡಿಯೋ ವೈರಲ್​
ರಾಜೇಶ್ ದುಗ್ಗುಮನೆ
|

Updated on:Apr 21, 2021 | 2:44 PM

Share

ಕೊರೊನಾ ವೈರಸ್​ ಎರಡನೇ ಅಲೇ ದೇಶದ್ಯಾಂತ ವೇಗವಾಗಿ ಹಬ್ಬುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಕೆಲವೆಡೆ ಲಾಕ್​ಡೌನ್​ ಕೂಡ ಘೋಷಣೆ ಮಾಡಲಾಗಿದೆ. ಅನೇಕ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೆ ಜನರು ಪರದಾಡುವಂತಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಕೊರೊನಾ ಎಂದರೆ ಭಯ ಶುರುವಾಗಿದೆ. ಕೊರೊನಾ ವಾರ್ಡ್​ ಸೇರಿದವರು ನರಕಯಾತನೆ ಅನುಭವಿಸುತ್ತಿರುವ ವಿಡಿಯೋಗಳು ಕೂಡ ವೈರಲ್​ ಆಗುತ್ತಿವೆ. ಹೀಗಿರುವಾಗಲೇ ಕೊರೊನಾ ವಾರಿಯರ್​​ಗಳು ಕೊವಿಡ್​ ರೋಗಿಗಳನ್ನು ಮನರಂಜಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ಸಂಗೀತ ನಿರ್ದೇಶಕ ಬಪ್ಪಿ ಲಹರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಒಂದೇ ದಿನ 2.94 ಲಕ್ಷ ಜನರಿಗೆ ಕೊರೊನಾ ಅಂಟಿದೆ. ದೇಶವೊಂದರಲ್ಲಿ ಒಂದೇ ದಿನ ಇಷ್ಟೊಂದು ಕೊರೊನಾ ಕೇಸ್​ ಬಂದಿದ್ದು ಇದೇ ಮೊದಲು. ಕೊವಿಡ್​ ಕೇಸ್​ಗಳು ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಉಂಟಾಗುತ್ತಿದೆ.

ಪರಿಸ್ಥಿತಿ ಗಂಭೀರವಾಗುತ್ತಿರುವ ಮಧ್ಯೆಯೇ ಕೊವಿಡ್​​ ವಾರಿಯರ್​ಗಳು ತಮ್ಮ ನಿಸ್ವಾರ್ಥ ಸೇವೆ ಒದಗಿಸುತ್ತಿದ್ದು, ರೋಗಿಗಳ ಆರೈಕೆಯಲ್ಲಿ ತೊಡಗುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಕೊವಿಡ್​ ರೋಗಿಗಳನ್ನು ಮನರಂಜಿಸುವ ಕೆಲಸ ಕೂಡ ಮಾಡಲಾಗುತ್ತಿದೆ. ಈಗ ವೈರಲ್​ ಆದ ವಿಡಿಯೋ ಸಾಕಷ್ಟು ಸೆನ್ಸೇಶನ್​ ಸೃಷ್ಟಿ ಮಾಡಿದೆ.

ಕೊವಿಡ್​ ವಾರ್ಡ್​ನಲ್ಲಿ ರೋಗಿಗಳು ಬೆಡ್​ ಮೇಲೆ ಮಲಗಿರುತ್ತಾರೆ. ಆಗ ಕೊವಿಡ್​ ವಾರಿಯರ್​ಗಳು ರೋಗಿಗಳನ್ನು ಮನರಂಜಿಸುವ ಕೆಲಸ ಮಾಡಿದ್ದಾರೆ. ರೋಗಿಗಳು ಕೂಡ ತಮ್ಮ ಆತಂಕವನ್ನು ಮರೆತು ಹಾಡಿಗೆ ಚಪ್ಪಾಳೆ ತಟ್ಟಿದ್ದಾರೆ. ಯೋಚಿಸಬೆಡಿ ಏನಾಗುತ್ತದೆ ನೋಡೋಣ, ನಾಳೆಗೋಸ್ಕರ ಇವತ್ತನ್ನು ಕಳೆದುಕೊಳ್ಳಬೇಡಿ ಎಂಬುದು ಹಾಡಿನ ಅರ್ಥ. ಈ ಹಾಡು ಸಂದರ್ಭಕ್ಕೆ ತುಂಬಾನೇ ಸೂಕ್ತವಾಗಿದೆ. ಈ ಹಾಡು 1990ರಲ್ಲಿ ತೆರೆಕಂಡ ಗಯಾಲ್​ ಚಿತ್ರದ್ದು. ಈ ಹಾಡಿಗೆ ಬಪ್ಪಿ ಲಹರಿ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ.

ಏಪ್ರಿಲ್​ ತಿಂಗಳ ಆರಂಭದಲ್ಲಿ ಬಪ್ಪಿ ಲಹರಿ ಅವರಿಗೆ ಕೊರೊನಾ ವೈರಸ್​ ಅಂಟಿತ್ತು. ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದ ನಂತರದಲ್ಲಿ ಅವರು ಚೇತರಿಕೆ ಕಂಡಿದ್ದರು.

ಇದನ್ನೂ ಓದಿ: ನಟಿ ಅನುಪ್ರಭಾಕರ್​ಗೆ ಕೊರೊನಾ ಪಾಸಿಟಿವ್​; ಎರಡನೇ ಅಲೆಯನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಮನವಿ ಮಾಡಿದ ನಟಿ

ಬೆಂಗಳೂರಿನ ಕೆಲವೆಡೆ ಕೊರೊನಾ ಲಸಿಕೆ ಕೊರತೆ; ಎರಡನೇ ಡೋಸ್ ಪಡೆಯಲು ಬಂದವರಿಗೆ ಲಸಿಕೆಯೇ ಸಿಗುತ್ತಿಲ್ಲ

Published On - 2:38 pm, Wed, 21 April 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ