AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವಾರ್ಡ್​ನಲ್ಲೂ ಜೀವನೋತ್ಸಾಹದ ಸಂಗೀತ; ಬಪ್ಪಿ ಲಹರಿ ವಿಡಿಯೋ ವೈರಲ್​

ಕೊವಿಡ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಒಂದೇ ದಿನ 2.94 ಲಕ್ಷ ಜನರಿಗೆ ಕೊರೊನಾ ಅಂಟಿದೆ. ದೇಶವೊಂದರಲ್ಲಿ ಒಂದೇ ದಿನ ಇಷ್ಟೊಂದು ಕೊರೊನಾ ಕೇಸ್​ ಬಂದಿದ್ದು ಇದೇ ಮೊದಲು.

ಕೊವಿಡ್​ ವಾರ್ಡ್​ನಲ್ಲೂ ಜೀವನೋತ್ಸಾಹದ ಸಂಗೀತ; ಬಪ್ಪಿ ಲಹರಿ ವಿಡಿಯೋ ವೈರಲ್​
ರಾಜೇಶ್ ದುಗ್ಗುಮನೆ
|

Updated on:Apr 21, 2021 | 2:44 PM

Share

ಕೊರೊನಾ ವೈರಸ್​ ಎರಡನೇ ಅಲೇ ದೇಶದ್ಯಾಂತ ವೇಗವಾಗಿ ಹಬ್ಬುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಕೆಲವೆಡೆ ಲಾಕ್​ಡೌನ್​ ಕೂಡ ಘೋಷಣೆ ಮಾಡಲಾಗಿದೆ. ಅನೇಕ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೆ ಜನರು ಪರದಾಡುವಂತಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಕೊರೊನಾ ಎಂದರೆ ಭಯ ಶುರುವಾಗಿದೆ. ಕೊರೊನಾ ವಾರ್ಡ್​ ಸೇರಿದವರು ನರಕಯಾತನೆ ಅನುಭವಿಸುತ್ತಿರುವ ವಿಡಿಯೋಗಳು ಕೂಡ ವೈರಲ್​ ಆಗುತ್ತಿವೆ. ಹೀಗಿರುವಾಗಲೇ ಕೊರೊನಾ ವಾರಿಯರ್​​ಗಳು ಕೊವಿಡ್​ ರೋಗಿಗಳನ್ನು ಮನರಂಜಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ಸಂಗೀತ ನಿರ್ದೇಶಕ ಬಪ್ಪಿ ಲಹರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಒಂದೇ ದಿನ 2.94 ಲಕ್ಷ ಜನರಿಗೆ ಕೊರೊನಾ ಅಂಟಿದೆ. ದೇಶವೊಂದರಲ್ಲಿ ಒಂದೇ ದಿನ ಇಷ್ಟೊಂದು ಕೊರೊನಾ ಕೇಸ್​ ಬಂದಿದ್ದು ಇದೇ ಮೊದಲು. ಕೊವಿಡ್​ ಕೇಸ್​ಗಳು ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಉಂಟಾಗುತ್ತಿದೆ.

ಪರಿಸ್ಥಿತಿ ಗಂಭೀರವಾಗುತ್ತಿರುವ ಮಧ್ಯೆಯೇ ಕೊವಿಡ್​​ ವಾರಿಯರ್​ಗಳು ತಮ್ಮ ನಿಸ್ವಾರ್ಥ ಸೇವೆ ಒದಗಿಸುತ್ತಿದ್ದು, ರೋಗಿಗಳ ಆರೈಕೆಯಲ್ಲಿ ತೊಡಗುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಕೊವಿಡ್​ ರೋಗಿಗಳನ್ನು ಮನರಂಜಿಸುವ ಕೆಲಸ ಕೂಡ ಮಾಡಲಾಗುತ್ತಿದೆ. ಈಗ ವೈರಲ್​ ಆದ ವಿಡಿಯೋ ಸಾಕಷ್ಟು ಸೆನ್ಸೇಶನ್​ ಸೃಷ್ಟಿ ಮಾಡಿದೆ.

ಕೊವಿಡ್​ ವಾರ್ಡ್​ನಲ್ಲಿ ರೋಗಿಗಳು ಬೆಡ್​ ಮೇಲೆ ಮಲಗಿರುತ್ತಾರೆ. ಆಗ ಕೊವಿಡ್​ ವಾರಿಯರ್​ಗಳು ರೋಗಿಗಳನ್ನು ಮನರಂಜಿಸುವ ಕೆಲಸ ಮಾಡಿದ್ದಾರೆ. ರೋಗಿಗಳು ಕೂಡ ತಮ್ಮ ಆತಂಕವನ್ನು ಮರೆತು ಹಾಡಿಗೆ ಚಪ್ಪಾಳೆ ತಟ್ಟಿದ್ದಾರೆ. ಯೋಚಿಸಬೆಡಿ ಏನಾಗುತ್ತದೆ ನೋಡೋಣ, ನಾಳೆಗೋಸ್ಕರ ಇವತ್ತನ್ನು ಕಳೆದುಕೊಳ್ಳಬೇಡಿ ಎಂಬುದು ಹಾಡಿನ ಅರ್ಥ. ಈ ಹಾಡು ಸಂದರ್ಭಕ್ಕೆ ತುಂಬಾನೇ ಸೂಕ್ತವಾಗಿದೆ. ಈ ಹಾಡು 1990ರಲ್ಲಿ ತೆರೆಕಂಡ ಗಯಾಲ್​ ಚಿತ್ರದ್ದು. ಈ ಹಾಡಿಗೆ ಬಪ್ಪಿ ಲಹರಿ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ.

ಏಪ್ರಿಲ್​ ತಿಂಗಳ ಆರಂಭದಲ್ಲಿ ಬಪ್ಪಿ ಲಹರಿ ಅವರಿಗೆ ಕೊರೊನಾ ವೈರಸ್​ ಅಂಟಿತ್ತು. ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದ ನಂತರದಲ್ಲಿ ಅವರು ಚೇತರಿಕೆ ಕಂಡಿದ್ದರು.

ಇದನ್ನೂ ಓದಿ: ನಟಿ ಅನುಪ್ರಭಾಕರ್​ಗೆ ಕೊರೊನಾ ಪಾಸಿಟಿವ್​; ಎರಡನೇ ಅಲೆಯನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಮನವಿ ಮಾಡಿದ ನಟಿ

ಬೆಂಗಳೂರಿನ ಕೆಲವೆಡೆ ಕೊರೊನಾ ಲಸಿಕೆ ಕೊರತೆ; ಎರಡನೇ ಡೋಸ್ ಪಡೆಯಲು ಬಂದವರಿಗೆ ಲಸಿಕೆಯೇ ಸಿಗುತ್ತಿಲ್ಲ

Published On - 2:38 pm, Wed, 21 April 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ