ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು.

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?
ಕನ್ನಡ ಬಿಗ್​ ಬಾಸ್​
Follow us
|

Updated on: Jun 25, 2021 | 2:34 PM

ಬಿಗ್​ ಬಾಸ್​ ನೀಡದೇ ಇರುವ ಆದೇಶವನ್ನು ಬಿಗ್​ ಬಾಸ್​ ನೀಡಿದ್ದಾರೆ ಎಂದು ಹೇಳುವಂತಿಲ್ಲ. ಅದು ಬಿಗ್​ ಬಾಸ್​ ನಿಯಮ ಮುರಿದಂತೆ. ನೇರವಾಗಿ ಹೇಳುವುದಾದರೆ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ಇದೇ ವಿಚಾರಕ್ಕೆ ಪ್ರಶಾಂತ್​ ಸಂಬರಗಿಗೆ ಸುದೀಪ್​ ಎಚ್ಚರಿಕೆ ನೀಡಿದ್ದರು. ಈಗ ರಘು ಗೌಡ ಅವರನ್ನು ಬಿಟ್ಟು ಮನೆ ಮಂದಿ ಎಲ್ಲರೂ ಈ ತಪ್ಪನ್ನು ಮಾಡಿದ್ದಾರೆ.

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು. ಆ ಸಮಯದಲ್ಲಿ ರಘು ಅಲ್ಲಿರಲಿಲ್ಲ. ಈ ವೇಳೆ ಪ್ರ್ಯಾಂಕ್​ ಮಾಡುವ ಆಲೋಚನೆ ಮನೆಮಂದಿಗೆ ಬಂದಿತ್ತು. ಈ ಕಾರಣಕ್ಕೆ ಮನೆ ಮಂದಿ ಎಲ್ಲರೂ ಸೇರಿ ರಘು ಅವರನ್ನು ಬಕ್ರಾ ಮಾಡೋಕೆ ಮುಂದಾದರು.

ಬಿಗ್​ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದಾರೆ. ಅದರ ಅನುಸಾರ, ಈ ಕಾಣಿಕೆ ಹುಂಡಿಯನ್ನು ಯಾರಿಗೆ ಸಹಾಯ ಮಾಡಬೇಕು ಎಂದನಿಸುತ್ತದೆಯೋ ಅವರಿಗೆ ನೀಡಿ. ಗುಲಾಬಿ ಹೂವನ್ನು ಪ್ರೀತಿ ಪಾತ್ರರರಿಗೆ ನೀಡಿ. ಬಾಕ್ಸಿಂಗ್​ ಗ್ಲೌಸ್​ ನಿಮಗೆ ಯಾರು ಇಷ್ಟವಾಗುವುದಿಲ್ಲವೋ ಅವರಿಗೆ ಕೊಡಿ ಎಂದು ಚಕ್ರವರ್ತಿ ಚಂದ್ರಚೂಡ್​ ಲೆಟರ್​ ಓದಿದಂತೆ ನಟಿಸಿದರು.

ಈ ಬಗ್ಗೆ ತಿಳಿಯದ ರಘು, ಕಾಣಿಕೆ ಹುಂಡಿಯನ್ನು ಶುಭಾಗೆ, ಗುಲಾಬಿಯನ್ನು ವೈಷ್ಣವಿಗೆ ಹಾಗೂ ಬಾಕ್ಸಿಂಗ್​ ಗ್ಲೌಸ್​ ಪ್ರಶಾಂತ್​ಗೆ ನೀಡಿದರು. ಈ ವೇಳೆ ಪ್ರಶಾಂತ್​ ಬೇಕೆಂದೇ ಕಿರಿಕ್​ ತೆಗೆದರು. ಆಗ ರಘು ತುಂಬಾನೇ ಗಂಭೀರವಾದರು. ನಂತರ ನಗುತ್ತಲೇ ಮನೆ ಮಂದಿ ಎಲ್ಲರೂ ಪ್ರ್ಯಾಂಕ್​ ಮಾಡಿದ್ದೇವೆ ಎಂದು ಸತ್ಯ ಬಿಚ್ಚಿಟ್ಟರು.

ಮೊದಲ ಇನ್ನಿಂಗ್ಸ್​ನಲ್ಲಿ ಪ್ರಶಾಂತ್​ ಇದೇ ತಪ್ಪನ್ನು ಮಾಡಿದ್ದರು. ಆಗ ಸುದೀಪ್​ ಎಚ್ಚರಿಕೆ ನೀಡಿದ್ದರು. ಬಿಗ್​ ಬಾಸ್​ ಹೇಳದೇ ಇರುವುದನ್ನು ಬಿಗ್​ ಬಾಸ್​ ಹೇಳಿದ್ದಾರೆ ಎಂದು ಹೇಳಬೇಡಿ. ಆ ರೀತಿ ಮಾಡಿದಾಗ ಸ್ಪರ್ಧಿಗಳು ಅದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಇದು ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ ಎಂದು ಅವರು ಹೇಳಿದ್ದರು. ಈಗ ಮನೆಯ 11 ಸ್ಪರ್ಧಿಗಳು ಈ ತಪ್ಪನ್ನು ಮತ್ತೆ ಮಾಡಿದ್ದು, ಬಿಗ್​ ಬಾಸ್​ ಯಾವ ರೀತಿಯ ಶಿಕ್ಷೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: 150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!