AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು.

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?
ಕನ್ನಡ ಬಿಗ್​ ಬಾಸ್​
ರಾಜೇಶ್ ದುಗ್ಗುಮನೆ
|

Updated on: Jun 25, 2021 | 2:34 PM

Share

ಬಿಗ್​ ಬಾಸ್​ ನೀಡದೇ ಇರುವ ಆದೇಶವನ್ನು ಬಿಗ್​ ಬಾಸ್​ ನೀಡಿದ್ದಾರೆ ಎಂದು ಹೇಳುವಂತಿಲ್ಲ. ಅದು ಬಿಗ್​ ಬಾಸ್​ ನಿಯಮ ಮುರಿದಂತೆ. ನೇರವಾಗಿ ಹೇಳುವುದಾದರೆ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ಇದೇ ವಿಚಾರಕ್ಕೆ ಪ್ರಶಾಂತ್​ ಸಂಬರಗಿಗೆ ಸುದೀಪ್​ ಎಚ್ಚರಿಕೆ ನೀಡಿದ್ದರು. ಈಗ ರಘು ಗೌಡ ಅವರನ್ನು ಬಿಟ್ಟು ಮನೆ ಮಂದಿ ಎಲ್ಲರೂ ಈ ತಪ್ಪನ್ನು ಮಾಡಿದ್ದಾರೆ.

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು. ಆ ಸಮಯದಲ್ಲಿ ರಘು ಅಲ್ಲಿರಲಿಲ್ಲ. ಈ ವೇಳೆ ಪ್ರ್ಯಾಂಕ್​ ಮಾಡುವ ಆಲೋಚನೆ ಮನೆಮಂದಿಗೆ ಬಂದಿತ್ತು. ಈ ಕಾರಣಕ್ಕೆ ಮನೆ ಮಂದಿ ಎಲ್ಲರೂ ಸೇರಿ ರಘು ಅವರನ್ನು ಬಕ್ರಾ ಮಾಡೋಕೆ ಮುಂದಾದರು.

ಬಿಗ್​ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದಾರೆ. ಅದರ ಅನುಸಾರ, ಈ ಕಾಣಿಕೆ ಹುಂಡಿಯನ್ನು ಯಾರಿಗೆ ಸಹಾಯ ಮಾಡಬೇಕು ಎಂದನಿಸುತ್ತದೆಯೋ ಅವರಿಗೆ ನೀಡಿ. ಗುಲಾಬಿ ಹೂವನ್ನು ಪ್ರೀತಿ ಪಾತ್ರರರಿಗೆ ನೀಡಿ. ಬಾಕ್ಸಿಂಗ್​ ಗ್ಲೌಸ್​ ನಿಮಗೆ ಯಾರು ಇಷ್ಟವಾಗುವುದಿಲ್ಲವೋ ಅವರಿಗೆ ಕೊಡಿ ಎಂದು ಚಕ್ರವರ್ತಿ ಚಂದ್ರಚೂಡ್​ ಲೆಟರ್​ ಓದಿದಂತೆ ನಟಿಸಿದರು.

ಈ ಬಗ್ಗೆ ತಿಳಿಯದ ರಘು, ಕಾಣಿಕೆ ಹುಂಡಿಯನ್ನು ಶುಭಾಗೆ, ಗುಲಾಬಿಯನ್ನು ವೈಷ್ಣವಿಗೆ ಹಾಗೂ ಬಾಕ್ಸಿಂಗ್​ ಗ್ಲೌಸ್​ ಪ್ರಶಾಂತ್​ಗೆ ನೀಡಿದರು. ಈ ವೇಳೆ ಪ್ರಶಾಂತ್​ ಬೇಕೆಂದೇ ಕಿರಿಕ್​ ತೆಗೆದರು. ಆಗ ರಘು ತುಂಬಾನೇ ಗಂಭೀರವಾದರು. ನಂತರ ನಗುತ್ತಲೇ ಮನೆ ಮಂದಿ ಎಲ್ಲರೂ ಪ್ರ್ಯಾಂಕ್​ ಮಾಡಿದ್ದೇವೆ ಎಂದು ಸತ್ಯ ಬಿಚ್ಚಿಟ್ಟರು.

ಮೊದಲ ಇನ್ನಿಂಗ್ಸ್​ನಲ್ಲಿ ಪ್ರಶಾಂತ್​ ಇದೇ ತಪ್ಪನ್ನು ಮಾಡಿದ್ದರು. ಆಗ ಸುದೀಪ್​ ಎಚ್ಚರಿಕೆ ನೀಡಿದ್ದರು. ಬಿಗ್​ ಬಾಸ್​ ಹೇಳದೇ ಇರುವುದನ್ನು ಬಿಗ್​ ಬಾಸ್​ ಹೇಳಿದ್ದಾರೆ ಎಂದು ಹೇಳಬೇಡಿ. ಆ ರೀತಿ ಮಾಡಿದಾಗ ಸ್ಪರ್ಧಿಗಳು ಅದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಇದು ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ ಎಂದು ಅವರು ಹೇಳಿದ್ದರು. ಈಗ ಮನೆಯ 11 ಸ್ಪರ್ಧಿಗಳು ಈ ತಪ್ಪನ್ನು ಮತ್ತೆ ಮಾಡಿದ್ದು, ಬಿಗ್​ ಬಾಸ್​ ಯಾವ ರೀತಿಯ ಶಿಕ್ಷೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: 150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ