AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು.

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?
ಕನ್ನಡ ಬಿಗ್​ ಬಾಸ್​
ರಾಜೇಶ್ ದುಗ್ಗುಮನೆ
|

Updated on: Jun 25, 2021 | 2:34 PM

Share

ಬಿಗ್​ ಬಾಸ್​ ನೀಡದೇ ಇರುವ ಆದೇಶವನ್ನು ಬಿಗ್​ ಬಾಸ್​ ನೀಡಿದ್ದಾರೆ ಎಂದು ಹೇಳುವಂತಿಲ್ಲ. ಅದು ಬಿಗ್​ ಬಾಸ್​ ನಿಯಮ ಮುರಿದಂತೆ. ನೇರವಾಗಿ ಹೇಳುವುದಾದರೆ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ಇದೇ ವಿಚಾರಕ್ಕೆ ಪ್ರಶಾಂತ್​ ಸಂಬರಗಿಗೆ ಸುದೀಪ್​ ಎಚ್ಚರಿಕೆ ನೀಡಿದ್ದರು. ಈಗ ರಘು ಗೌಡ ಅವರನ್ನು ಬಿಟ್ಟು ಮನೆ ಮಂದಿ ಎಲ್ಲರೂ ಈ ತಪ್ಪನ್ನು ಮಾಡಿದ್ದಾರೆ.

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು. ಆ ಸಮಯದಲ್ಲಿ ರಘು ಅಲ್ಲಿರಲಿಲ್ಲ. ಈ ವೇಳೆ ಪ್ರ್ಯಾಂಕ್​ ಮಾಡುವ ಆಲೋಚನೆ ಮನೆಮಂದಿಗೆ ಬಂದಿತ್ತು. ಈ ಕಾರಣಕ್ಕೆ ಮನೆ ಮಂದಿ ಎಲ್ಲರೂ ಸೇರಿ ರಘು ಅವರನ್ನು ಬಕ್ರಾ ಮಾಡೋಕೆ ಮುಂದಾದರು.

ಬಿಗ್​ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದಾರೆ. ಅದರ ಅನುಸಾರ, ಈ ಕಾಣಿಕೆ ಹುಂಡಿಯನ್ನು ಯಾರಿಗೆ ಸಹಾಯ ಮಾಡಬೇಕು ಎಂದನಿಸುತ್ತದೆಯೋ ಅವರಿಗೆ ನೀಡಿ. ಗುಲಾಬಿ ಹೂವನ್ನು ಪ್ರೀತಿ ಪಾತ್ರರರಿಗೆ ನೀಡಿ. ಬಾಕ್ಸಿಂಗ್​ ಗ್ಲೌಸ್​ ನಿಮಗೆ ಯಾರು ಇಷ್ಟವಾಗುವುದಿಲ್ಲವೋ ಅವರಿಗೆ ಕೊಡಿ ಎಂದು ಚಕ್ರವರ್ತಿ ಚಂದ್ರಚೂಡ್​ ಲೆಟರ್​ ಓದಿದಂತೆ ನಟಿಸಿದರು.

ಈ ಬಗ್ಗೆ ತಿಳಿಯದ ರಘು, ಕಾಣಿಕೆ ಹುಂಡಿಯನ್ನು ಶುಭಾಗೆ, ಗುಲಾಬಿಯನ್ನು ವೈಷ್ಣವಿಗೆ ಹಾಗೂ ಬಾಕ್ಸಿಂಗ್​ ಗ್ಲೌಸ್​ ಪ್ರಶಾಂತ್​ಗೆ ನೀಡಿದರು. ಈ ವೇಳೆ ಪ್ರಶಾಂತ್​ ಬೇಕೆಂದೇ ಕಿರಿಕ್​ ತೆಗೆದರು. ಆಗ ರಘು ತುಂಬಾನೇ ಗಂಭೀರವಾದರು. ನಂತರ ನಗುತ್ತಲೇ ಮನೆ ಮಂದಿ ಎಲ್ಲರೂ ಪ್ರ್ಯಾಂಕ್​ ಮಾಡಿದ್ದೇವೆ ಎಂದು ಸತ್ಯ ಬಿಚ್ಚಿಟ್ಟರು.

ಮೊದಲ ಇನ್ನಿಂಗ್ಸ್​ನಲ್ಲಿ ಪ್ರಶಾಂತ್​ ಇದೇ ತಪ್ಪನ್ನು ಮಾಡಿದ್ದರು. ಆಗ ಸುದೀಪ್​ ಎಚ್ಚರಿಕೆ ನೀಡಿದ್ದರು. ಬಿಗ್​ ಬಾಸ್​ ಹೇಳದೇ ಇರುವುದನ್ನು ಬಿಗ್​ ಬಾಸ್​ ಹೇಳಿದ್ದಾರೆ ಎಂದು ಹೇಳಬೇಡಿ. ಆ ರೀತಿ ಮಾಡಿದಾಗ ಸ್ಪರ್ಧಿಗಳು ಅದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಇದು ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ ಎಂದು ಅವರು ಹೇಳಿದ್ದರು. ಈಗ ಮನೆಯ 11 ಸ್ಪರ್ಧಿಗಳು ಈ ತಪ್ಪನ್ನು ಮತ್ತೆ ಮಾಡಿದ್ದು, ಬಿಗ್​ ಬಾಸ್​ ಯಾವ ರೀತಿಯ ಶಿಕ್ಷೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: 150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ