AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು.

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?
ಕನ್ನಡ ಬಿಗ್​ ಬಾಸ್​
ರಾಜೇಶ್ ದುಗ್ಗುಮನೆ
|

Updated on: Jun 25, 2021 | 2:34 PM

Share

ಬಿಗ್​ ಬಾಸ್​ ನೀಡದೇ ಇರುವ ಆದೇಶವನ್ನು ಬಿಗ್​ ಬಾಸ್​ ನೀಡಿದ್ದಾರೆ ಎಂದು ಹೇಳುವಂತಿಲ್ಲ. ಅದು ಬಿಗ್​ ಬಾಸ್​ ನಿಯಮ ಮುರಿದಂತೆ. ನೇರವಾಗಿ ಹೇಳುವುದಾದರೆ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ಇದೇ ವಿಚಾರಕ್ಕೆ ಪ್ರಶಾಂತ್​ ಸಂಬರಗಿಗೆ ಸುದೀಪ್​ ಎಚ್ಚರಿಕೆ ನೀಡಿದ್ದರು. ಈಗ ರಘು ಗೌಡ ಅವರನ್ನು ಬಿಟ್ಟು ಮನೆ ಮಂದಿ ಎಲ್ಲರೂ ಈ ತಪ್ಪನ್ನು ಮಾಡಿದ್ದಾರೆ.

ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆಯ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಬಾಕ್ಸಿಂಗ್​ ಗ್ಲೌಸ್​, ಗುಲಾಬಿ ಹೂವು ಹಾಗೂ ಕಾಣಿಕೆ ಹುಂಡಿ ಕಳುಹಿಸಿದ್ದರು. ಎಲ್ಲಾ ಸ್ಪರ್ಧಿಗಳು ಇದನ್ನು ಏಕೆ ಕಳಿಸಿದ್ದರಬಹುದು ಎಂದು ತಲೆಕೆಡಿಸಿಕೊಂಡಿದ್ದರು. ಆ ಸಮಯದಲ್ಲಿ ರಘು ಅಲ್ಲಿರಲಿಲ್ಲ. ಈ ವೇಳೆ ಪ್ರ್ಯಾಂಕ್​ ಮಾಡುವ ಆಲೋಚನೆ ಮನೆಮಂದಿಗೆ ಬಂದಿತ್ತು. ಈ ಕಾರಣಕ್ಕೆ ಮನೆ ಮಂದಿ ಎಲ್ಲರೂ ಸೇರಿ ರಘು ಅವರನ್ನು ಬಕ್ರಾ ಮಾಡೋಕೆ ಮುಂದಾದರು.

ಬಿಗ್​ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದಾರೆ. ಅದರ ಅನುಸಾರ, ಈ ಕಾಣಿಕೆ ಹುಂಡಿಯನ್ನು ಯಾರಿಗೆ ಸಹಾಯ ಮಾಡಬೇಕು ಎಂದನಿಸುತ್ತದೆಯೋ ಅವರಿಗೆ ನೀಡಿ. ಗುಲಾಬಿ ಹೂವನ್ನು ಪ್ರೀತಿ ಪಾತ್ರರರಿಗೆ ನೀಡಿ. ಬಾಕ್ಸಿಂಗ್​ ಗ್ಲೌಸ್​ ನಿಮಗೆ ಯಾರು ಇಷ್ಟವಾಗುವುದಿಲ್ಲವೋ ಅವರಿಗೆ ಕೊಡಿ ಎಂದು ಚಕ್ರವರ್ತಿ ಚಂದ್ರಚೂಡ್​ ಲೆಟರ್​ ಓದಿದಂತೆ ನಟಿಸಿದರು.

ಈ ಬಗ್ಗೆ ತಿಳಿಯದ ರಘು, ಕಾಣಿಕೆ ಹುಂಡಿಯನ್ನು ಶುಭಾಗೆ, ಗುಲಾಬಿಯನ್ನು ವೈಷ್ಣವಿಗೆ ಹಾಗೂ ಬಾಕ್ಸಿಂಗ್​ ಗ್ಲೌಸ್​ ಪ್ರಶಾಂತ್​ಗೆ ನೀಡಿದರು. ಈ ವೇಳೆ ಪ್ರಶಾಂತ್​ ಬೇಕೆಂದೇ ಕಿರಿಕ್​ ತೆಗೆದರು. ಆಗ ರಘು ತುಂಬಾನೇ ಗಂಭೀರವಾದರು. ನಂತರ ನಗುತ್ತಲೇ ಮನೆ ಮಂದಿ ಎಲ್ಲರೂ ಪ್ರ್ಯಾಂಕ್​ ಮಾಡಿದ್ದೇವೆ ಎಂದು ಸತ್ಯ ಬಿಚ್ಚಿಟ್ಟರು.

ಮೊದಲ ಇನ್ನಿಂಗ್ಸ್​ನಲ್ಲಿ ಪ್ರಶಾಂತ್​ ಇದೇ ತಪ್ಪನ್ನು ಮಾಡಿದ್ದರು. ಆಗ ಸುದೀಪ್​ ಎಚ್ಚರಿಕೆ ನೀಡಿದ್ದರು. ಬಿಗ್​ ಬಾಸ್​ ಹೇಳದೇ ಇರುವುದನ್ನು ಬಿಗ್​ ಬಾಸ್​ ಹೇಳಿದ್ದಾರೆ ಎಂದು ಹೇಳಬೇಡಿ. ಆ ರೀತಿ ಮಾಡಿದಾಗ ಸ್ಪರ್ಧಿಗಳು ಅದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಇದು ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಂತೆ ಎಂದು ಅವರು ಹೇಳಿದ್ದರು. ಈಗ ಮನೆಯ 11 ಸ್ಪರ್ಧಿಗಳು ಈ ತಪ್ಪನ್ನು ಮತ್ತೆ ಮಾಡಿದ್ದು, ಬಿಗ್​ ಬಾಸ್​ ಯಾವ ರೀತಿಯ ಶಿಕ್ಷೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: 150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!