AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿಗೆ ಕಿವಿಮಾತು ಹೇಳಿದ ಕನ್ನಡ ಚಿತ್ರರಂಗದ ಹಿರಿಯ ವ್ಯಕ್ತಿ; ನಟನ ಪ್ರತಿಕ್ರಿಯೆ ಏನು?

ಬಿಗ್ ಬಾಸ್ ಕನ್ನಡ 12 ಖ್ಯಾತಿಯ ಗಿಲ್ಲಿ ನಟ 'ಸರ್ಕಾರಿ ಶಾಲೆ H8' ಚಿತ್ರದ ಪ್ರಚಾರಕ್ಕೆ ಹಾಜರಾಗದಿರುವ ಬಗ್ಗೆ ಫಿಲ್ಮ್ ಚೇಂಬರ್‌ಗೆ ದೂರು ದಾಖಲಾಗಿತ್ತು. ಹಿರಿಯ ಗೀತಸಾಹಿತಿ ನಾಗೇಂದ್ರ ಪ್ರಸಾದ್ ಗಿಲ್ಲಿಗೆ ‘ಚಾನ್ಸ್ ಕೊಟ್ಟವರನ್ನು ಮರೆಯಬೇಡ’ ಎಂದು ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ಗಿಲ್ಲಿ ಕೂಡ ಪ್ರತಿಕ್ರಿಯೆ ನೀಡಿದ್ದು, ‘ಇತರ ಸಿನಿಮಾ ಕೆಲಸಗಳ ಒತ್ತಡದಿಂದ ಪ್ರಚಾರಕ್ಕೆ ಹೋಗಲು ಆಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಗಿಲ್ಲಿಗೆ ಕಿವಿಮಾತು ಹೇಳಿದ ಕನ್ನಡ ಚಿತ್ರರಂಗದ ಹಿರಿಯ ವ್ಯಕ್ತಿ; ನಟನ ಪ್ರತಿಕ್ರಿಯೆ ಏನು?
ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Feb 09, 2026 | 2:00 PM

Share

ಬಿಗ್ ಬಾಸ್ ಕನ್ನಡ ಸೀಸನ್ 12ರ (BBK 12) ಖ್ಯಾತಿಯ ಗಿಲ್ಲಿ ನಟ ವಿರುದ್ಧ ಒಂದು ಗಂಭೀರ ಆರೋಪ ಕೇಳಿ ಬಂದಿತ್ತು. ‘ಸರ್ಕಾರಿ ಶಾಲೆ H8’ ಚಿತ್ರದ ಪ್ರಚಾರಕ್ಕೆ ಅವರು ಬಂದಿಲ್ಲ ಎಂದು ಸಿನಿಮಾ ತಂಡ ಫಿಲ್ಮ್​ ಚೇಂಬರ್​​ಗೆ ದೂರು ನೀಡಿತ್ತು. ಈ ವಿಷಯ ಚರ್ಚೆಯಲ್ಲಿ ಇರುವಾಗಲೇ ಬೇರೆ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಗಿಲ್ಲಿಗೆ ಕನ್ನಡ ಚಿತ್ರರಂಗದ ಹಿರಿಯರೊಬ್ಬರು ಕಿವಿಮಾತು ಹೇಳಿದ್ದಾರೆ. ಆ ಪ್ರಕರಣದ ಬಗ್ಗೆ ಗಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಸೂಪರ್ ಹಿಟ್’ ಹೆಸರಿನ ಚಿತ್ರದಲ್ಲಿ ಗೌರವ್ ಶೆಟ್ಟಿ ಜೊತೆ ಗಿಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಪ್ರಚಾರ ಭಾಗವಾಗಿ ಸುದ್ದಿಗೋಷ್ಠಿಯಲ್ಲಿ ಆಯೋಜನೆ ಮಾಡಲಾಗಿತ್ತು. ಈ ವೇದಿಕೆ ಮೇಲೆಯೇ ಇದ್ದ ಗೀತ ಸಾಹಿತಿ ನಾಗೇಂದ್ರ ಪ್ರಸಾದ್ ಅವರು ಕಿವಿಮಾತು ಹೇಳಿದ್ದಾರೆ. ‘ನಿಂಗೆ ಚಾನ್ಸ್ ಕೊಟ್ಟವರನ್ನು ಯಾವಾಗಲೂ ಮರೆಯಬೇಡ’ ಎಂದು ನಾಗೇಂದ್ರ ಪ್ರಸಾದ್ ಹೇಳಿದರು.

ಗಿಲ್ಲಿ ನಟ ಅವರು ಚಾನ್ಸ್ ಕೊಟ್ಟವರನ್ನೇ ಮರೆತಿದ್ದಾರೆ, ಬಿಗ್ ಬಾಸ್ ಗೆದ್ದ ಮೇಲೆ ಅವರು ಬೇರೆ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದೆಲ್ಲ ಚರ್ಚೆ ಆಗುತ್ತಿದೆ. ಈ ಕಾರಣದಿಂದ ನಾಗೇಂದ್ರ ಪ್ರಸಾದ್ ಅವರು ಹೀಗೆ ಹೇಳಿದರೇ ಎನ್ನುವ ಪ್ರಶ್ನೆ ಮೂಡಿದೆ.

ಆ ಬಳಿಕ ಗಿಲ್ಲಿ ನಟ ಕೂಡ ಮಾತನಾಡಿದ್ದಾರೆ. ಅವರು ಈ ಘಟನೆ ವಿಷಯವನ್ನು ನೇರವಾಗಿ ಪ್ರಸ್ತಾಪಿಸಿದ್ದಾರೆ. ‘ನನಗೆ ಇತರ ಸಿನಿಮಾ ಕೆಲಸಗಳ ಒತ್ತಡ ಇದ್ದಿದ್ದರಿಂದ ನನಗೆ ಪ್ರಚಾರಕ್ಕೆ ಹೋಗೋಕೆ ಆಗಿಲ್ಲ. ನಾನು ಅವರಿಗೆ ಬೈಟ್ ಕೊಟ್ಟಿದ್ದೇನೆ. ಅದು ಅವರ ಕೈ ಸೇರಿದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಫಿಲ್ಮ್​ ಚೇಂಬರ್​​ಗೆ ನಾನು ಹೇಳೋದು ಹೇಳಿದ್ದೇನೆ’ ಎಂದು ಗಿಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ

ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಲ್ಲಿ ದರ್ಶನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರೆ ಗಿಲ್ಲಿ ಒಂದು ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಬಿಗ್ ಬಾಸ್​​ನಿಂದಾಗಿ ಗಿಲ್ಲಿ ನಟ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಗಿಲ್ಲಿಗೋಸ್ಕರ ‘ಡೆವಿಲ್’ ಸಿನಿಮಾ ನೋಡಿದವರೂ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?
ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?