AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ಹೋಗಿ ಎಲ್ಲ ಬಟ್ಟೆ ಕಳೆದುಕೊಂಡ ಪೂಜಾ ಹೆಗ್ಡೆ; ಕೊನೇ ಕ್ಷಣದಲ್ಲಿ ನಟಿ ಮಾಡಿದ್ದೇನು?

Pooja Hegde: ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದಕ್ಕೂ ಮುನ್ನ ಪೂಜಾ ಹೆಗ್ಡೆ ಬಟ್ಟೆ ಮತ್ತು ಮೇಕಪ್​ ಪರಿಕರಗಳನ್ನು ಕಳೆದುಕೊಂಡಿದ್ದು ಈಗ ಗೊತ್ತಾಗಿದೆ. ಈ ಕಹಿ ಅನುಭವದಿಂದಾಗಿ ಅವರಿಗೆ ಗಾಬರಿ ಆಗಿತ್ತು.

ವಿದೇಶಕ್ಕೆ ಹೋಗಿ ಎಲ್ಲ ಬಟ್ಟೆ ಕಳೆದುಕೊಂಡ ಪೂಜಾ ಹೆಗ್ಡೆ; ಕೊನೇ ಕ್ಷಣದಲ್ಲಿ ನಟಿ ಮಾಡಿದ್ದೇನು?
ಪೂಜಾ ಹೆಗ್ಡೆ
TV9 Web
| Edited By: |

Updated on: May 21, 2022 | 1:09 PM

Share

ನಟಿಯರು ತಮ್ಮ ಉಡುಗೆ ತೊಡುಗೆ ಬಗ್ಗೆ ಸಖತ್​ ಕಾಳಜಿ ವಹಿಸುತ್ತಾರೆ. ಚಿಕ್ಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗಲೂ ಕೂಡ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಮಾರಂಭದ ಥೀಮ್​ಗೆ ಅನುಗುಣವಾದ ಬಟ್ಟೆ ಧರಿಸಿ, ಅದಕ್ಕೆ ಒಪ್ಪುವಂತಹ ಹೇರ್​ ಸ್ಟೈಲ್​ ಮತ್ತು ಮೇಕಪ್​ ಮಾಡಿಕೊಳ್ಳುತ್ತಾರೆ. ಅಂಥದ್ದರಲ್ಲಿ ಒಂದು ಅಂತಾರಾಷ್ಟ್ರೀಯ ಮಟ್ಟದ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ಎಷ್ಟೆಲ್ಲ ತಯಾರಿ ಮಾಡಿಕೊಳ್ಳುತ್ತಾರೆ ಎಂಬುದನ್ನು ಊಹಿಸುವುದು ಸುಲಭವಲ್ಲ. ಹಾಗೆ ಮಾಡಿಕೊಂಡ ಪೂರ್ವ ತಯಾರಿಯೆಲ್ಲ ಒಂದೇ ನಿಮಿಷದಲ್ಲಿ ಹಾಳಾಗಿಬಿಟ್ಟರೆ? ದಿಕ್ಕೇ ತೋಚದಂತಾಗುತ್ತದೆ. ನಟಿ ಪೂಜಾ ಹೆಗ್ಡೆ ಅವರಿಗೆ ಇತ್ತೀಚೆಗೆ ಹಾಗೆಯೇ ಆಯಿತು. ಆ ಅನುಭವವನ್ನು ಅವರೀಗ ಹಂಚಿಕೊಂಡಿದ್ದಾರೆ. 75ನೇ ವರ್ಷದ ಪ್ರತಿಷ್ಠಿತ ಕಾನ್​ ಚಿತ್ರೋತ್ಸವಕ್ಕೆ (Cannes Film Festival) ಅವರು ಅತಿಥಿಯಾಗಿ ತೆರೆಳಿದ್ದಾರೆ. ರೆಡ್​ ಕಾರ್ಪೆಟ್ (Red Carpet) ಮೇಲೆ ಹೆಜ್ಜೆ ಹಾಕಲು ಅವರು ಸೂಕ್ತ ತಯಾರಿ ಮಾಡಿಕೊಂಡು ಭಾರತದಿಂದ ಹೊರಟರು. ಆದರೆ ಫ್ರಾನ್ಸ್​ಗೆ ಹೋಗಿ ನೋಡಿದಾಗ ಅವರಿಗೆ ಆತಂಕ ಕಾದಿತ್ತು. ಪೂಜಾ ಹೆಗ್ಡೆ (Pooja Hegde) ಅವರು ಎಲ್ಲ ಬಟ್ಟೆಗಳು, ಮೇಕಪ್​ ಸಾಮಾಗ್ರಿಗಳು ಕಾಣೆ ಆಗಿದ್ದವು. ಆ ಸಂದರ್ಭದಲ್ಲಿ ಅವರ ಇಡೀ ತಂಡ ಗಾಬರಿಗೆ ಒಳಗಾಗಿತ್ತು.

ಇದೇ ಮೊದಲ ಬಾರಿಗೆ ಪೂಜಾ ಹೆಗ್ಡೆ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗವಹಿಸಿದ್ದಾರೆ. ಚೊಚ್ಚಲ ಅನುಭವದ ಬಗ್ಗೆ ಯಾವಾಗಲೂ ಎಗ್ಸೈಟ್​ಮೆಂಟ್​ ಇರುತ್ತದೆ. ಆದರೆ ಈ ಕಹಿ ಅನುಭವದಿಂದಾಗಿ ಪೂಜಾ ಹೆಗ್ಡೆಗೆ ಗಾಬರಿ ಆಗಿತ್ತು. ಬಟ್ಟೆ ಮತ್ತು ಮೇಕಪ್​ ಪರಿಕರಗಳನ್ನು ಕಳೆದುಕೊಂಡಿದ್ದು ಮಾತ್ರವಲ್ಲದೇ ಅವರ ಹೇರ್​ ಸ್ಟೈಲಿಸ್ಟ್​ ಒಬ್ಬರಿಗೆ ಫುಡ್​ ಪಾಯಿಸನ್​ ಆಗಿ ಆರೋಗ್ಯ ಕೂಡ ಕೈ ಕೊಟ್ಟಿತ್ತು. ಬಟ್ಟೆಬರೆ ತುಂಬಿಕೊಂಡು ಬಂದಿದ್ದ ಬ್ಯಾಗ್​ ಚೆಕ್​-ಇನ್​ ಸಮಯದಲ್ಲಿ ಭಾರತದಲ್ಲೇ ಉಳಿದುಕೊಂಡಿತು. ಹೀಗೆ ಬ್ಯಾಕ್​ ಟು ಬ್ಯಾಕ್​ ವಿಘ್ನಗಳು ಅವರನ್ನು ಬಾಧಿಸಿದವು.

ಏನೋ ಪುಣ್ಯಕ್ಕೆ ಪೂಜಾ ಹೆಗ್ಡೆ ಅವರು ತಮ್ಮ ಹ್ಯಾಂಡ್​ ಬ್ಯಾಗ್​ನಲ್ಲಿ ಕೆಲವು ಆಭರಣಗಳನ್ನು ಇಟ್ಟುಕೊಂಡಿದ್ದರು. ಅದಕ್ಕೆ ಒಪ್ಪುವಂತಹ ಬಟ್ಟೆಯನ್ನು ಕೂಡಲೇ ಪಡೆದುಕೊಳ್ಳಲಾಯಿತು. ಒಟ್ಟಾರೆ ಟೆನ್ಷನ್​ಗೆ ಆ ದಿನವಿಡೀ ಪೂಜಾ ಹೆಗ್ಡೆ ಅವರು ಊಟ, ತಿಂಡಿ ಏನನ್ನೂ ಮಾಡಲಿಲ್ಲ. ಕಾಸ್ಟ್ಯೂಮ್​ ಮತ್ತು ಮೇಕಪ್​ಗೆ ಹೇಗೋ ವ್ಯವಸ್ಥೆ ಮಾಡಿಕೊಂಡು ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ ನಂತರವೇ ಅವರು ಮತ್ತು ಅವರ ಇಡೀ ತಂಡ ನಿಟ್ಟುಸಿರು ಬಿಟ್ಟಿದ್ದು. ಇಷ್ಟೆಲ್ಲ ಆದರೂ ಕೂಡ ಪೂಜಾ ಹೆಗ್ಡೆ ಅವರು ನೂರಾರು ಕ್ಯಾಮೆರಾಗಳ ಎದುರಿನಲ್ಲಿ ಕೂಲ್​ ಆಗಿ ಕಾಣಿಸುತ್ತಿದ್ದರು ಎಂಬುದು ಗಮನಿಸಬೇಕಾದ ವಿಚಾರ.

ಇದನ್ನೂ ಓದಿ
Image
ಹ್ಯಾಟ್ರಿಕ್ ಸೋಲಿನ ಬಗ್ಗೆ ಪೂಜಾ ಹೆಗ್ಡೆಗೆ ಇಲ್ಲ ಬೇಸರ; ಮೊದಲ ಬಾರಿಗೆ ಮೌನ ಮುರಿದ ನಟಿ
Image
ಗುಲಾಬಿ ಬಣ್ಣದ ಗೌನ್​ ಧರಿಸಿ ಕಾನ್​ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ; ಫೋಟೋ ವೈರಲ್​
Image
Cannes 2022: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಚಿತ್ರರಂಗಕ್ಕೆ ಗೌರವ; ಮೆಚ್ಚುಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ
Image
ಎಷ್ಟೇ ಸಿನಿಮಾ ಸೋತ್ರೂ ಪೂಜಾ ಹೆಗ್ಡೆಗೆ ಸಿಕ್ತಿದೆ ಹೊಸ ಆಫರ್ಸ್​; ಈಗ ವಿಜಯ್​ ಜತೆ ‘ಜನ ಗಣ ಮನ’

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ಪೂಜಾ ಹೆಗ್ಡೆ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಒಂದು ಕಾಲದಲ್ಲಿ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದ ಅವರ ಬದುಕಿನಲ್ಲಿ ಈಗ ಯಾಕೋ ಕೊಂಚ ಅದೃಷ್ಟ ಕೈಕೊಟ್ಟಿದೆ. ಅವರು ನಟಿಸಿದ ‘ರಾಧೆ ಶ್ಯಾಮ್​’, ‘ಬೀಸ್ಟ್​’ ಮತ್ತು ‘ಆಚಾರ್ಯ’ ಚಿತ್ರಗಳು ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಿಲ್ಲ. ಆದರೂ ಕೂಡ ಪೂಜಾ ಹೆಗ್ಡೆ ಅವರ ಡಿಮ್ಯಾಂಡ್​ ಕಮ್ಮಿ ಆಗಿಲ್ಲ. ಸಲ್ಮಾನ್​ ಖಾನ್​ ನಟನೆಯ ‘ಕಭಿ ಈದ್​ ಕಭಿ ದಿವಾಲಿ’ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗಷ್ಟೇ ಆ ಸಿನಿಮಾದ ಶೂಟಿಂಗ್​ ಆರಂಭ ಆಗಿತ್ತು. ಅದರ ನಡುವೆ ಬ್ರೇಕ್​ ಪಡೆದುಕೊಂಡು ಕಾನ್​ ಚಿತ್ರೋತ್ಸವದ ಸಲುವಾಗಿ ಪೂಜಾ ಹೆಗ್ಡೆ ಫ್ರಾನ್ಸ್​ಗೆ ತೆರಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ