AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?

ಮಾರಿ ಸೆಲ್ವರಾಜ್​ ನಿರ್ದೇಶನ ಮಾಡಿರುವ ‘ಕರ್ಣನ್​’ ಮೇಲೆ ಈಗ ತೆಲುಗು ಮಂದಿ ಕಣ್ಣಿಟ್ಟಿದ್ದಾರೆ. ಟಾಲಿವುಡ್​ಗೆ ರಿಮೇಕ್​ ಮಾಡಲು ಸಕಲ ತಯಾರಿ ನಡೆದಿದೆ. ಹಳ್ಳಿ ಹಿನ್ನೆಲೆಯ ಕಥೆಯನ್ನು ಕರ್ಣನ್​ ಸಿನಿಮಾ ಹೊಂದಿದೆ.

ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?
ಧನುಷ್ ನಟನೆಯ ಕರ್ಣನ್ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 01, 2021 | 11:09 AM

Share

ವಿಭಿನ್ನವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಜನಮನ ಗೆದ್ದವರು ನಟ ಧನುಷ್​. ಹೀರೋಯಿಸಂ ಮತ್ತು ಬಿಲ್ಡಪ್​ಗಳಿಗೆ ಹೆಚ್ಚು ಬೆಲೆ ನೀಡದೇ ಪಾತ್ರಕ್ಕೆ ಶರಣಾಗುವುದು ಅವರ ರೂಢಿ. ಈ ಕಾರಣದಿಂದಲೇ ಅವರಿಗೆ ಕಾಲಿವುಡ್​ ಮಾತ್ರವಲ್ಲದೇ ದೇಶಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಅವರು ಮಾಡುವ ಸಿನಿಮಾಗಳು ಬೇರೆ ಭಾಷೆಗಳಿಗೂ ರಿಮೇಕ್​ ಆಗಿ ಅಲ್ಲಿನ ಪ್ರೇಕ್ಷಕರನ್ನು ರಂಜಿಸುತ್ತವೆ. ಈಗ ಧನುಷ್​ ನಟನೆಯ ‘ಕರ್ಣನ್​’ ಚಿತ್ರ ಕೂಡ ರಿಮೇಕ್​ ಆಗುತ್ತಿದೆ.

ಕೊರೊನಾ ಎರಡನೇ ಅಲೆಯ ಕಾರಣಕ್ಕಾಗಿ ಲಾಕ್​ಡೌನ್​ ಘೋಷಣೆ ಆಗುವುದಕ್ಕಿಂತ ಕೆಲವೇ ದಿನಗಳ ಮುಂಚೆ ಧನುಷ್ ನಟನೆಯ ಕರ್ಣನ್​ ಸಿನಿಮಾ ತೆರೆಕಂಡಿತ್ತು. ಚಿತ್ರಮಂದಿರದಲ್ಲಿ ಈ ಸಿನಿಮಾಗೆ ಒಳ್ಳೆಯ ಕಲೆಕ್ಷನ್​ ಕೂಡ ಆಯಿತು. ಮಾರಿ ಸೆಲ್ವರಾಜ್​ ನಿರ್ದೇಶನ ಮಾಡಿರುವ ‘ಕರ್ಣನ್​’ ಮೇಲೆ ಈಗ ತೆಲುಗು ಮಂದಿ ಕಣ್ಣಿಟ್ಟಿದ್ದಾರೆ. ಟಾಲಿವುಡ್​ಗೆ ರಿಮೇಕ್​ ಮಾಡಲು ಸಕಲ ತಯಾರಿ ನಡೆದಿದೆ.

ಹಳ್ಳಿ ಹಿನ್ನೆಲೆಯ ಕಥೆಯನ್ನು ಕರ್ಣನ್​ ಸಿನಿಮಾ ಹೊಂದಿದೆ. ಪಕ್ಕಾ ಹಳ್ಳಿ ಹೈದನಾಗಿ ಧನುಷ್ ನಟಿಸಿದ್ದಾರೆ. ನೈಜ ಘಟನೆಯನ್ನು ಆಧರಿಸಿ ತಯಾರಾದ ಈ ಚಿತ್ರ ತನ್ನ ಮೇಕಿಂಗ್​ ಮತ್ತು ಗುಣಮಟ್ಟದ ಕಾರಣಕ್ಕಾಗಿಯೇ ಗಮನ ಸೆಳೆದಿದೆ. ಹಾಗಾಗಿ ರಿಮೇಕ್​​ ಮಾಡುವವರಿಗೆ ಇದೊಂದು ಸವಾಲು ಕೂಡ ಹೌದು. ಅಂಥ ಸವಾಲನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ ಟಾಲಿವುಡ್​ನ ನಿರ್ಮಾಪಕ ಬೆಲ್ಲಂಕೊಂಡ ಸುರೇಶ್​​.

ಈಗಾಗಲೇ ಕರ್ಣನ್​ ರಿಮೇಕ್​ ಹಕ್ಕುಗಳನ್ನು ಕೊಂಡುಕೊಳ್ಳಲಾಗಿದ್ದು, ಬೆಲ್ಲಂಕೊಂಡ ಸುರೇಶ್​ ಅವರ ಪುತ್ರ ಬೆಲ್ಲಂಕೊಂಡ ಶ್ರೀನಿವಾಸ್​ ನಾಯಕನಾಗಿ ನಟಿಸಲಿದ್ದಾರೆ. ತೆಲುಗಿನ ನೇಟಿವಿಟಿಗೆ ತಕ್ಕಂತೆ ಈ ಸಿನಿಮಾ ಹೇಗೆ ಮೂಡಿಬರಲಿದೆ ಎಂಬ ಕೌತುಕ ಈಗ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಬೆಲ್ಲಂಕೊಂಡ ಶ್ರೀನಿವಾಸ್​ ಜೊತೆ ಯಾರೆಲ್ಲ ನಟಿಸಲಿದ್ದಾರೆ, ಶೂಟಿಂಗ್​ ಯಾವಾಗ ಶುರು ಎಂಬಿತ್ಯಾದಿ ವಿವರಗಳನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: Dhanush: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮೊಬೈಲ್​ಗೆ ಬಂತು ಧನುಷ್​ ಸಿನಿಮಾ ಕರ್ಣನ್​!

‘ಅಸುರನ್’ ಪಾತ್ರದಲ್ಲಿ ವಿಕ್ಟರಿ ವೆಂಕಟೇಶ್, ಫಸ್ಟ್​ಲುಕ್​ಗೆ ಫ್ಯಾನ್ಸ್ ಫುಲ್ ಫಿದಾ!

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ