AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?

ಮಾರಿ ಸೆಲ್ವರಾಜ್​ ನಿರ್ದೇಶನ ಮಾಡಿರುವ ‘ಕರ್ಣನ್​’ ಮೇಲೆ ಈಗ ತೆಲುಗು ಮಂದಿ ಕಣ್ಣಿಟ್ಟಿದ್ದಾರೆ. ಟಾಲಿವುಡ್​ಗೆ ರಿಮೇಕ್​ ಮಾಡಲು ಸಕಲ ತಯಾರಿ ನಡೆದಿದೆ. ಹಳ್ಳಿ ಹಿನ್ನೆಲೆಯ ಕಥೆಯನ್ನು ಕರ್ಣನ್​ ಸಿನಿಮಾ ಹೊಂದಿದೆ.

ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?
ಧನುಷ್ ನಟನೆಯ ಕರ್ಣನ್ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 01, 2021 | 11:09 AM

Share

ವಿಭಿನ್ನವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಜನಮನ ಗೆದ್ದವರು ನಟ ಧನುಷ್​. ಹೀರೋಯಿಸಂ ಮತ್ತು ಬಿಲ್ಡಪ್​ಗಳಿಗೆ ಹೆಚ್ಚು ಬೆಲೆ ನೀಡದೇ ಪಾತ್ರಕ್ಕೆ ಶರಣಾಗುವುದು ಅವರ ರೂಢಿ. ಈ ಕಾರಣದಿಂದಲೇ ಅವರಿಗೆ ಕಾಲಿವುಡ್​ ಮಾತ್ರವಲ್ಲದೇ ದೇಶಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಅವರು ಮಾಡುವ ಸಿನಿಮಾಗಳು ಬೇರೆ ಭಾಷೆಗಳಿಗೂ ರಿಮೇಕ್​ ಆಗಿ ಅಲ್ಲಿನ ಪ್ರೇಕ್ಷಕರನ್ನು ರಂಜಿಸುತ್ತವೆ. ಈಗ ಧನುಷ್​ ನಟನೆಯ ‘ಕರ್ಣನ್​’ ಚಿತ್ರ ಕೂಡ ರಿಮೇಕ್​ ಆಗುತ್ತಿದೆ.

ಕೊರೊನಾ ಎರಡನೇ ಅಲೆಯ ಕಾರಣಕ್ಕಾಗಿ ಲಾಕ್​ಡೌನ್​ ಘೋಷಣೆ ಆಗುವುದಕ್ಕಿಂತ ಕೆಲವೇ ದಿನಗಳ ಮುಂಚೆ ಧನುಷ್ ನಟನೆಯ ಕರ್ಣನ್​ ಸಿನಿಮಾ ತೆರೆಕಂಡಿತ್ತು. ಚಿತ್ರಮಂದಿರದಲ್ಲಿ ಈ ಸಿನಿಮಾಗೆ ಒಳ್ಳೆಯ ಕಲೆಕ್ಷನ್​ ಕೂಡ ಆಯಿತು. ಮಾರಿ ಸೆಲ್ವರಾಜ್​ ನಿರ್ದೇಶನ ಮಾಡಿರುವ ‘ಕರ್ಣನ್​’ ಮೇಲೆ ಈಗ ತೆಲುಗು ಮಂದಿ ಕಣ್ಣಿಟ್ಟಿದ್ದಾರೆ. ಟಾಲಿವುಡ್​ಗೆ ರಿಮೇಕ್​ ಮಾಡಲು ಸಕಲ ತಯಾರಿ ನಡೆದಿದೆ.

ಹಳ್ಳಿ ಹಿನ್ನೆಲೆಯ ಕಥೆಯನ್ನು ಕರ್ಣನ್​ ಸಿನಿಮಾ ಹೊಂದಿದೆ. ಪಕ್ಕಾ ಹಳ್ಳಿ ಹೈದನಾಗಿ ಧನುಷ್ ನಟಿಸಿದ್ದಾರೆ. ನೈಜ ಘಟನೆಯನ್ನು ಆಧರಿಸಿ ತಯಾರಾದ ಈ ಚಿತ್ರ ತನ್ನ ಮೇಕಿಂಗ್​ ಮತ್ತು ಗುಣಮಟ್ಟದ ಕಾರಣಕ್ಕಾಗಿಯೇ ಗಮನ ಸೆಳೆದಿದೆ. ಹಾಗಾಗಿ ರಿಮೇಕ್​​ ಮಾಡುವವರಿಗೆ ಇದೊಂದು ಸವಾಲು ಕೂಡ ಹೌದು. ಅಂಥ ಸವಾಲನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ ಟಾಲಿವುಡ್​ನ ನಿರ್ಮಾಪಕ ಬೆಲ್ಲಂಕೊಂಡ ಸುರೇಶ್​​.

ಈಗಾಗಲೇ ಕರ್ಣನ್​ ರಿಮೇಕ್​ ಹಕ್ಕುಗಳನ್ನು ಕೊಂಡುಕೊಳ್ಳಲಾಗಿದ್ದು, ಬೆಲ್ಲಂಕೊಂಡ ಸುರೇಶ್​ ಅವರ ಪುತ್ರ ಬೆಲ್ಲಂಕೊಂಡ ಶ್ರೀನಿವಾಸ್​ ನಾಯಕನಾಗಿ ನಟಿಸಲಿದ್ದಾರೆ. ತೆಲುಗಿನ ನೇಟಿವಿಟಿಗೆ ತಕ್ಕಂತೆ ಈ ಸಿನಿಮಾ ಹೇಗೆ ಮೂಡಿಬರಲಿದೆ ಎಂಬ ಕೌತುಕ ಈಗ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಬೆಲ್ಲಂಕೊಂಡ ಶ್ರೀನಿವಾಸ್​ ಜೊತೆ ಯಾರೆಲ್ಲ ನಟಿಸಲಿದ್ದಾರೆ, ಶೂಟಿಂಗ್​ ಯಾವಾಗ ಶುರು ಎಂಬಿತ್ಯಾದಿ ವಿವರಗಳನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: Dhanush: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮೊಬೈಲ್​ಗೆ ಬಂತು ಧನುಷ್​ ಸಿನಿಮಾ ಕರ್ಣನ್​!

‘ಅಸುರನ್’ ಪಾತ್ರದಲ್ಲಿ ವಿಕ್ಟರಿ ವೆಂಕಟೇಶ್, ಫಸ್ಟ್​ಲುಕ್​ಗೆ ಫ್ಯಾನ್ಸ್ ಫುಲ್ ಫಿದಾ!

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!