AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Besharam Rang: ಕೇಸರಿ ಬಿಕಿನಿ ವಿವಾದ: `ಪಠಾಣ್’ ನಟಿ ದೀಪಿಕಾ ಪಡುಕೋಣೆ ಪರ ನಿಂತ ರಮ್ಯಾ

ರಮ್ಯಾ ಅವರು ಸದ್ಯ ಬಹಳ ಚರ್ಚೆಗೆ ಗ್ರಾಸವಾಗಿರುವ ಶಾರುಖ್ ಖಾನ್​ ನಟನೆಯ 'ಪಠಾಣ್' ಚಿತ್ರದ​ ‘ಬೇಷರಂ ರಂಗ್​..’ ಹಾಡು ಮತ್ತು ನಟಿ ದೀಪಿಕಾ ಪಡುಕೋಣೆ ಧರಿಸಿರುವ ಬಟ್ಟೆ ಕುರಿತಾಗಿ ಅವರು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

Besharam Rang: ಕೇಸರಿ ಬಿಕಿನಿ ವಿವಾದ: `ಪಠಾಣ್’ ನಟಿ ದೀಪಿಕಾ ಪಡುಕೋಣೆ ಪರ ನಿಂತ ರಮ್ಯಾ
ರಮ್ಯಾ, ದೀಪಿಕಾ ಪಡುಕೋಣೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 16, 2022 | 8:18 PM

Share

ನಟ ಶಾರುಖ್ ಖಾನ್​ ಸತತ 4 ವರ್ಷಗಳ ಬಳಿಕ ‘ಪಠಾಣ್’ (Pathaan) ಚಿತ್ರದ ಮೂಲಕ ತೆರೆಗೆ ಬರಲು ಸಜ್ಜಾಗಿದ್ದಾರೆ. ಹೀಗಾಗಿ ಬಾಲಿವುಡ್​ ಅಂಗಳದಲ್ಲಿ ಮತ್ತು ಶಾರುಖ್ ಖಾನ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ‘ಪಠಾಣ್’​ ಚಿತ್ರದ ಮೊದಲ ಹಾಡು ‘ಬೇಷರಂ ರಂಗ್​..’ (Besharam Rang) ಡಿ. 12ರಂದು ಬಿಡುಗಡೆಯಾಗಿದೆ. ನಟಿ ದೀಪಿಕಾ ಪಡುಕೋಣೆ ಮೈ ಚಳಿ ಬಿಟ್ಟು ಹೆಜ್ಜೆ ಹಾಕಿದ್ದಾರೆ. ಇಬ್ಬರ ಕೆಮಿಸ್ಟ್ರಿಯನ್ನು ಕೆಲವರು ಮೆಚ್ಚಿಕೊಂಡಿದ್ದಾರೆ. ಆದರೆ ಈ ಹಾಡು ಬಿಡುಗಡೆಯಾಗುತ್ತಿದಂತೆ ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿದೆ. ಎಲ್ಲದರಲ್ಲಿಯೂ ತಪ್ಪು ಹುಡುಕುವ ಕೆಲ ನೆಟ್ಟಿಗರು ಮಾತ್ರ ‘ಬೇಷರಂ ರಂಗ್​..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿಯನ್ನು ಧರಿಸಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಟ ಶಾರುಖ್ ಖಾನ್ ಕೂಡ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸ್ಯಾಂಡಲ್​ವುಡ್​ ಕ್ವೀನ್​ ನಟಿ ರಮ್ಯಾ (Ramya Divya Spandana) ಕೂಡ ಈ ಕುರಿತಾಗಿ ಟ್ವೀಟ್​ ಮಾಡಿದ್ದಾರೆ.

ನಟಿ ರಮ್ಯಾ ಅವರು ಸದ್ಯ ಬಹಳ ಚರ್ಚೆಗೆ ಗ್ರಾಸವಾಗಿರುವ ಶಾರುಖ್ ಖಾನ್​ ನಟನೆಯ ‘ಪಠಾಣ್’ ಚಿತ್ರದ​ ‘ಬೇಷರಂ ರಂಗ್​..’ ಹಾಡು ಮತ್ತು ನಟಿ ದೀಪಿಕಾ ಪಡುಕೋಣೆ ಧರಿಸಿರುವ ಬಟ್ಟೆ ಕುರಿತಾಗಿ ಅವರು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ. ‘ಹೆಣ್ಣುಮಕ್ಕಳು ಸದಾ ಒಂದಿಲ್ಲೊಂದು ಟ್ರೋಲ್​ಗೆ ಒಳಗಾಗುತ್ತಿದ್ದಾರೆ. ಸಮಂತಾ ತನ್ನ ವಿಚ್ಛೇದನಕ್ಕಾಗಿ, ಸಾಯಿ ಪಲ್ಲವಿ ಅವರ ಅಭಿಪ್ರಾಯಕ್ಕಾಗಿ, ರಶ್ಮಿಕಾ ಮಂದಣ್ಣ ಅವರ ಬ್ರೇಕಪ್​ನಿಂದ ಮತ್ತು ಈಗ ದೀಪಿಕಾ ಪಡುಕೋಣೆ ಅವರ ಬಟ್ಟೆಯಿಂದ, ಹೀಗೆ ಇತರೆ ಅನೇಕ ಮಹಿಳೆಯರನ್ನು ಎಲ್ಲದಕ್ಕೂ ಟ್ರೋಲ್ ಮಾಡಲಾಗುತ್ತಿದೆ. ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು. ಮಹಿಳೆಯರು ದುರ್ಗೆಯ ಮೂರ್ತರೂಪವಾಗಿದ್ದಾರೆ. ಸ್ತ್ರೀ ದ್ವೇಷವು ನಾವು ಹೋರಾಡಬೇಕಾದ ದುಷ್ಟತನವಾಗಿದೆ’ ಎಂದು ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಎಲ್ಲೆಡೆ ‘ಪಠಾಣ್’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ಬಗ್ಗೆ ಪ್ರತಿಭಟನೆಗಳು, ವಿರೋಧಗಳು ವ್ಯಕ್ತವಾಗುತ್ತಿದ್ದು ರಮ್ಯಾ ಕೂಡ ರಿಯಾಕ್ಟ್ ಮಾಡಿದ್ದು, ಬಾರಿ ವೈರಲ್​ ಆಗುತ್ತಿದೆ. ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು. ಸದ್ಯ ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಮತ್ತೆ ಸ್ಯಾಂಡಲ್​ವುಡ್​ಗೆ ಕಮ್​ ಬ್ಯಾಕ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Prakash Raj: ‘ಬೇಷರಂ ರಂಗ್​’ ವಿವಾದ; ‘ಇದನ್ನೆಲ್ಲ ಎಲ್ಲಿಯವರೆಗೆ ಸಹಿಸಬೇಕು’ ಅಂತ ಪ್ರಶ್ನೆ ಮಾಡಿದ ಪ್ರಕಾಶ್​ ರಾಜ್​

ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ಮೂಡಿಬರುತ್ತಿದ್ದು,  ರಾಜ್​ ಬಿ. ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಿರಿ ರವಿಕುಮಾರ್​ ಅವರು ನಾಯಕಿ ಆಗಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಕೂಡ​ ಮುಗಿದಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ