ಭಾರತಿರಾಜ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ತಪ್ಪಿದ್ದು ಹೇಗೆ?
Bharathiraja movie: ತಮಿಳು ಚಿತ್ರರಂಗದ ಹಾದಿಯನ್ನು ಬದಲಿಸಿದ ನಿರ್ದೇಶಕ ಎಂದು ಭಾರತಿರಾಜ ಅವರನ್ನು ಕರೆಯಲಾಗುತ್ತದೆ. ಭಾರತಿರಾಜ ಅವರ ಮೊದಲ ಸಿನಿಮಾ ‘16 ವಯದಿನಿಲೆ’ 1977 ರಲ್ಲಿ ಬಿಡುಗಡೆ ಆಗಿತ್ತು. ಆದರೆ ಭಾರತಿರಾಜ ಅವರ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ಆದರೆ ಅದು ಕೈತಪ್ಪಿದ್ದು ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಂದ!

ತಮಿಳು ಚಿತ್ರರಂಗದ (Kollywood) ಲೆಜೆಂಡರಿ ಸಿನಿಮಾ ನಿರ್ದೇಶಕ ಭಾರತಿರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿರಾಜ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ತಮಿಳು ಚಿತ್ರರಂಗದ ಹಾದಿಯನ್ನು ಬದಲಿಸಿದ ನಿರ್ದೇಶಕ ಎಂದು ಭಾರತಿರಾಜ ಅವರನ್ನು ಕರೆಯಲಾಗುತ್ತದೆ. ಭಾರತಿರಾಜ ಅವರ ಮೊದಲ ಸಿನಿಮಾ ‘16 ವಯದಿನಿಲೆ’ 1977 ರಲ್ಲಿ ಬಿಡುಗಡೆ ಆಗಿತ್ತು. ಆದರೆ ಭಾರತಿರಾಜ ಅವರ ಮೊದಲ ಸಿನಿಮಾ ಕನ್ನಡದ್ದಾಗಬೇಕಿತ್ತು, ಆದರೆ ಅದು ಕೈತಪ್ಪಿದ್ದು ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಂದ!
ಎಸ್ಪಿ ಬಾಲಸುಬ್ರಹ್ಮಣ್ಯಂ ಹಾಗೂ ಭಾರತಿರಾಜ ಇಬ್ಬರೂ ಚಿತ್ರರಂಗಕ್ಕೆ ಬರುವ ಮುಂಚಿನಿಂದಲೂ ಆಪ್ತ ಗೆಳೆಯರು. 1970-80ರ ದಶಕದಲ್ಲಿ ಹಲವು ಪರ ಭಾಷೆ ಸಿನಿಮಾ ನಿರ್ದೇಶಕರುಗಳು ಕನ್ನಡದಲ್ಲಿ ಸಿನಿಮಾ ಮಾಡಲು ಗುಂಪು-ಗುಂಪಾಗಿ ಬರುತ್ತಿದ್ದರು. ಅದಕ್ಕೆ ಮುಖ್ಯ ಕಾರಣ, ಕರ್ನಾಟಕ ಸರ್ಕಾರ ನೀಡುತ್ತಿದ್ದ ಸಬ್ಸಿಡಿ. ಮಣಿರತ್ನಂ ಸಹ ತಮ್ಮ ಮೊದಲ ಸಿನಿಮಾ ಕನ್ನಡದಲ್ಲಿ ನಿರ್ದೇಶಿಸಿದ್ದು ಇದೇ ಕಾರಣಕ್ಕೆ. ಈ ಸಬ್ಸಿಡಿಗಾಗಿಯೇ ಭಾರತಿರಾಜ ಅವರು ಕನ್ನಡದಲ್ಲಿ ಸಿನಿಮಾ ಮಾಡಲು ಉದ್ದೇಶಿಸಿದ್ದರು. ಆ ಐಡಿಯಾ ಕೊಟ್ಟಿದ್ದು ಎಸ್ಪಿ ಬಾಲಸುಬ್ರಹ್ಮಣ್ಯಂ.
ಇದನ್ನೂ ಓದಿ:ಪೆಟ್ರೋಲ್ ಬಂಕ್ ನೌಕರ ಭಾರತಿರಾಜ್, ತಮಿಳು ಚಿತ್ರರಂಗದಲ್ಲಿ ಕ್ರಾಂತಿ ಮಾಡಿದ್ದು ಹೇಗೆ?
ಬೆಂಗಳೂರಿನಲ್ಲಿ ಎಸ್ಪಿಬಿ ಅವರ ಸಂಬಂಧಿಯೊಬ್ಬರ ಮನೆಯನ್ನೇ ಸಿನಿಮಾ ಆಫೀಸ್ ಎಂದು ತೋರಿಸಲಾಗಿತ್ತು. ಅಲ್ಲಿಯೇ ಭಾರತಿರಾಜ ಅವರು ತಮ್ಮ ಹೊಸ ಸಿನಿಮಾದ ಚಿತ್ರಕತೆಯನ್ನು ಬರೆದು ಅಲ್ಲಿಯೇ ಇರಿಸಿದ್ದರು. ಆದರೆ ಅನಿವಾರ್ಯ ಕಾರಣಗಳಿಂದಾಗಿ ನಿರ್ಮಾಪಕರು ಸಿಗಲಿಲ್ಲ. ಆದರೆ ಕೆಲ ತಿಂಗಳುಗಾದ ಬಳಿಕ ನಿರ್ಮಾಪಕ ಸಿಕ್ಕು, ಚಿತ್ರಕತೆ ಕೊಡುವಂತೆ ಕೇಳಿದರೆ, ಎಸ್ಪಿಬಿ ಅವರ ಸಂಬಂಧಿ ಆ ಚಿತ್ರಕತೆ ಹೊಂದಿದ್ದ ಪುಸ್ತಕವನ್ನು ಕಳೆದುಬಿಟ್ಟಿದ್ದರಂತೆ.
ಎಸ್ಪಿಬಿ ಹೇಳಿರುವಂತೆ ಅದಾಗಲೇ ಅವರ ಸಂಬಂಧಿ ಮೂರು ಬಾರಿ ಮನೆ ಚೇಂಜ್ ಮಾಡಿದ್ದನಂತೆ. ಅದರಿಂದಾಗಿ ಚಿತ್ರಕತೆ ಎಲ್ಲೋ ಮಿಸ್ ಆಗಿ ಹೋಗಿತ್ತಂತೆ. ಆ ವಿಷಯ ತಿಳಿದು, ಭಾರತಿರಾಜ, ತೀರ ಕೆಟ್ಟ-ಕೆಟ್ಟದಾಗಿ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರನ್ನು ಬೈದಿದ್ದರಂತೆ. ಆದರೆ ಆದದ್ದೆಲ್ಲ ಒಳ್ಳೆಯದಕ್ಕೆ ಎಂದಿರುವ ಎಸ್ಪಿಬಿ, ಅದರಿಂದಾಗಿ ‘16 ವಯದಿನಿಲೆ’ ಸಿನಿಮಾ ನಿರ್ಮಾಣ ಆಯ್ತು’ ಎಂದಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




