AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’

ಮಾರ್ಚ್​ 25ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರಗಳ ಕಲೆಕ್ಷನ್​ಗೂ ದೊಡ್ಡ ಹೊಡೆತ ಬೀಳುವ ಸೂಚನೆ ಸಿಕ್ಕಿದೆ.

ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’
ಭೀಮ್ಲಾ ನಾಯಕ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 26, 2022 | 8:20 PM

Share

ಸಿನಿಮಾ ​ ಟಿಕೆಟ್ ದರ (Ticket Price)​ ವಿಚಾರದಲ್ಲಿ ಆಂಧ್ರ ಪ್ರದೇಶದಲ್ಲಿ ಹೊಸ ನಿಯಮ ಜಾರಿಗೆ ಬಂದು ಹಲವು ತಿಂಗಳು ಕಳೆದಿದೆ. ಸಿನಿಮಾ ಟಿಕೆಟ್​ ದರ ಮಲ್ಟಿಪ್ಲೆಕ್ಸ್​ಗಳಲ್ಲಿ 250 ರೂಪಾಯಿ ದಾಟುವಂತಿಲ್ಲ. ಸಿಂಗಲ್​ ಸ್ಕ್ರೀನ್​ಗಳಲ್ಲೂ ದರಕ್ಕೆ ಕಡಿವಾಣ ಹಾಕಲಾಗಿದೆ. ಇದರಿಂದ ಎಲ್ಲಾ ಸಿನಿಮಾಗಳ ಕಲೆಕ್ಷನ್​ಗೆ ದೊಡ್ಡ ಮಟ್ಟದ ಹೊಡೆತ ಕೊಡುತ್ತಿದೆ. ಪವನ್​ ಕಲ್ಯಾಣ್ (Pawan Kalyan) ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ (Bheemla Nayak Movie) ಕೂಡ ಈಗ ದೊಡ್ಡ ಹೊಡೆತ ಎದುರಿಸಿದೆ. ಟಿಕೆಟ್​ ದರದ ನಿಯಮದಿಂದಾಗಿ ಮೊದಲ ದಿನವೇ 10 ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ.

ಸಿನಿಮಾ ಟಿಕೆಟ್​ಗೆ ಸರ್ಕಾರ ದರ ನಿಗದಿ ಮಾಡಿದೆ. ನಗರ ವ್ಯಾಪ್ತಿಯಲ್ಲಿ ಇರುವ ಮಲ್ಟಿಪ್ಲೆಕ್ಸ್​ಗಳಿಗೆ ಟಿಕೆಟ್​ ಮೊತ್ತ 75 ರೂಪಾಯಿ ಕನಿಷ್ಠ ಹಾಗೂ 250 ಗರಿಷ್ಟ ಮೊತ್ತ ನಿಗದಿ ಮಾಡಿದೆ. ಎಸಿ ಹಾಗೂ ಎಸಿ ರಹಿತ ಚಿತ್ರಮಂದಿರಗಳ ಟಿಕೆಟ್​ ದರ 20-100 ರೂ ಅಂತರದಲ್ಲಿ ಇರಬೇಕು. ಪಂಚಾಯತ್​ ಭಾಗದಲ್ಲಿ ಟಿಕೆಟ್ ಕನಿಷ್ಠ ದರ 20 ರೂಪಾಯಿಗೂ ಕಡಿಮೆ ಇಡಲು ಸೂಚಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸೋದು ಅನಿವಾರ್ಯ ಆಗಿದೆ.

‘ಭೀಮ್ಲಾ ನಾಯಕ್​’ ಸಿನಿಮಾ ಫೆಬ್ರವರಿ 25ರಂದು ತೆರೆಗೆ ಬಂದಿದೆ. ಈ ಮೊದಲು ತೆರೆಕಂಡಿದ್ದ ಪವನ್​ ಕಲ್ಯಾಣ್​ ನಟನೆಯ ‘ವಕೀಲ್​ ಸಾಬ್​’ ಸಿನಿಮಾ ಮೊದಲ ದಿನ ಆಂಧ್ರ ಪ್ರದೇಶದಲ್ಲಿ 23.6 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಭೀಮ್ಲಾ ನಾಯಕ್​’ ಸಿನಿಮಾ ಆಂಧ್ರದಲ್ಲಿ ಮೊದಲ ದಿನ ಬಾಚಿಕೊಂಡಿದ್ದು ಕೇವಲ 14.5 ಕೋಟಿ ರೂಪಾಯಿ. ಸರ್ಕಾರದ ಹೊಸ ನೀತಿಯಿಂದ 10 ಕೋಟಿ ನಷ್ಟ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ.

ಸಿನಿಮಾ ಹೀರೋಗಳು ತಮ್ಮ ಸಂಭಾವನೆಯನ್ನು ಕಡಿಮೆ ಮಾಡಿಕೊಳ್ಳಲಿ. ಈ ಮೂಲಕ ನಿರ್ಮಾಪಕರಿಗೆ ಸಹಾಯ ಮಾಡಿ ಎಂಬ ಸಲಹೆಯನ್ನು ಆಂಧ್ರ ಪ್ರದೇಶ ಸರ್ಕಾರ ನೀಡಿತ್ತು. ಈ ಸೂಚನೆಗೆ ಎಲ್ಲರಿಂದ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ಈ ನಿಯಮಗಳನ್ನು ಹಿಂಪಡೆಯಬೇಕು ಎನ್ನುವ ಒತ್ತಾಯ ಜೋರಾಗಿದೆ.

ಮಾರ್ಚ್​ 25ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದಿದ್ದಾರೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರಗಳ ಕಲೆಕ್ಷನ್​ಗೂ ದೊಡ್ಡ ಹೊಡೆತ ಬೀಳುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ‘ಭೀಮ್ಲಾ ನಾಯಕ್​’​ ಚಿತ್ರ ನೋಡಿ ಕುಣಿದು ಕುಪ್ಪಳಿಸಿದ ಪವನ್​ ಕಲ್ಯಾಣ್ ಫ್ಯಾನ್ಸ್​

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ