AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’

ಮಾರ್ಚ್​ 25ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರಗಳ ಕಲೆಕ್ಷನ್​ಗೂ ದೊಡ್ಡ ಹೊಡೆತ ಬೀಳುವ ಸೂಚನೆ ಸಿಕ್ಕಿದೆ.

ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’
ಭೀಮ್ಲಾ ನಾಯಕ್
TV9 Web
| Edited By: |

Updated on: Feb 26, 2022 | 8:20 PM

Share

ಸಿನಿಮಾ ​ ಟಿಕೆಟ್ ದರ (Ticket Price)​ ವಿಚಾರದಲ್ಲಿ ಆಂಧ್ರ ಪ್ರದೇಶದಲ್ಲಿ ಹೊಸ ನಿಯಮ ಜಾರಿಗೆ ಬಂದು ಹಲವು ತಿಂಗಳು ಕಳೆದಿದೆ. ಸಿನಿಮಾ ಟಿಕೆಟ್​ ದರ ಮಲ್ಟಿಪ್ಲೆಕ್ಸ್​ಗಳಲ್ಲಿ 250 ರೂಪಾಯಿ ದಾಟುವಂತಿಲ್ಲ. ಸಿಂಗಲ್​ ಸ್ಕ್ರೀನ್​ಗಳಲ್ಲೂ ದರಕ್ಕೆ ಕಡಿವಾಣ ಹಾಕಲಾಗಿದೆ. ಇದರಿಂದ ಎಲ್ಲಾ ಸಿನಿಮಾಗಳ ಕಲೆಕ್ಷನ್​ಗೆ ದೊಡ್ಡ ಮಟ್ಟದ ಹೊಡೆತ ಕೊಡುತ್ತಿದೆ. ಪವನ್​ ಕಲ್ಯಾಣ್ (Pawan Kalyan) ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ (Bheemla Nayak Movie) ಕೂಡ ಈಗ ದೊಡ್ಡ ಹೊಡೆತ ಎದುರಿಸಿದೆ. ಟಿಕೆಟ್​ ದರದ ನಿಯಮದಿಂದಾಗಿ ಮೊದಲ ದಿನವೇ 10 ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ.

ಸಿನಿಮಾ ಟಿಕೆಟ್​ಗೆ ಸರ್ಕಾರ ದರ ನಿಗದಿ ಮಾಡಿದೆ. ನಗರ ವ್ಯಾಪ್ತಿಯಲ್ಲಿ ಇರುವ ಮಲ್ಟಿಪ್ಲೆಕ್ಸ್​ಗಳಿಗೆ ಟಿಕೆಟ್​ ಮೊತ್ತ 75 ರೂಪಾಯಿ ಕನಿಷ್ಠ ಹಾಗೂ 250 ಗರಿಷ್ಟ ಮೊತ್ತ ನಿಗದಿ ಮಾಡಿದೆ. ಎಸಿ ಹಾಗೂ ಎಸಿ ರಹಿತ ಚಿತ್ರಮಂದಿರಗಳ ಟಿಕೆಟ್​ ದರ 20-100 ರೂ ಅಂತರದಲ್ಲಿ ಇರಬೇಕು. ಪಂಚಾಯತ್​ ಭಾಗದಲ್ಲಿ ಟಿಕೆಟ್ ಕನಿಷ್ಠ ದರ 20 ರೂಪಾಯಿಗೂ ಕಡಿಮೆ ಇಡಲು ಸೂಚಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸೋದು ಅನಿವಾರ್ಯ ಆಗಿದೆ.

‘ಭೀಮ್ಲಾ ನಾಯಕ್​’ ಸಿನಿಮಾ ಫೆಬ್ರವರಿ 25ರಂದು ತೆರೆಗೆ ಬಂದಿದೆ. ಈ ಮೊದಲು ತೆರೆಕಂಡಿದ್ದ ಪವನ್​ ಕಲ್ಯಾಣ್​ ನಟನೆಯ ‘ವಕೀಲ್​ ಸಾಬ್​’ ಸಿನಿಮಾ ಮೊದಲ ದಿನ ಆಂಧ್ರ ಪ್ರದೇಶದಲ್ಲಿ 23.6 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಭೀಮ್ಲಾ ನಾಯಕ್​’ ಸಿನಿಮಾ ಆಂಧ್ರದಲ್ಲಿ ಮೊದಲ ದಿನ ಬಾಚಿಕೊಂಡಿದ್ದು ಕೇವಲ 14.5 ಕೋಟಿ ರೂಪಾಯಿ. ಸರ್ಕಾರದ ಹೊಸ ನೀತಿಯಿಂದ 10 ಕೋಟಿ ನಷ್ಟ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ.

ಸಿನಿಮಾ ಹೀರೋಗಳು ತಮ್ಮ ಸಂಭಾವನೆಯನ್ನು ಕಡಿಮೆ ಮಾಡಿಕೊಳ್ಳಲಿ. ಈ ಮೂಲಕ ನಿರ್ಮಾಪಕರಿಗೆ ಸಹಾಯ ಮಾಡಿ ಎಂಬ ಸಲಹೆಯನ್ನು ಆಂಧ್ರ ಪ್ರದೇಶ ಸರ್ಕಾರ ನೀಡಿತ್ತು. ಈ ಸೂಚನೆಗೆ ಎಲ್ಲರಿಂದ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ಈ ನಿಯಮಗಳನ್ನು ಹಿಂಪಡೆಯಬೇಕು ಎನ್ನುವ ಒತ್ತಾಯ ಜೋರಾಗಿದೆ.

ಮಾರ್ಚ್​ 25ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದಿದ್ದಾರೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರಗಳ ಕಲೆಕ್ಷನ್​ಗೂ ದೊಡ್ಡ ಹೊಡೆತ ಬೀಳುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ‘ಭೀಮ್ಲಾ ನಾಯಕ್​’​ ಚಿತ್ರ ನೋಡಿ ಕುಣಿದು ಕುಪ್ಪಳಿಸಿದ ಪವನ್​ ಕಲ್ಯಾಣ್ ಫ್ಯಾನ್ಸ್​

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?