AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’

ಮಾರ್ಚ್​ 25ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರಗಳ ಕಲೆಕ್ಷನ್​ಗೂ ದೊಡ್ಡ ಹೊಡೆತ ಬೀಳುವ ಸೂಚನೆ ಸಿಕ್ಕಿದೆ.

ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’
ಭೀಮ್ಲಾ ನಾಯಕ್
TV9 Web
| Edited By: |

Updated on: Feb 26, 2022 | 8:20 PM

Share

ಸಿನಿಮಾ ​ ಟಿಕೆಟ್ ದರ (Ticket Price)​ ವಿಚಾರದಲ್ಲಿ ಆಂಧ್ರ ಪ್ರದೇಶದಲ್ಲಿ ಹೊಸ ನಿಯಮ ಜಾರಿಗೆ ಬಂದು ಹಲವು ತಿಂಗಳು ಕಳೆದಿದೆ. ಸಿನಿಮಾ ಟಿಕೆಟ್​ ದರ ಮಲ್ಟಿಪ್ಲೆಕ್ಸ್​ಗಳಲ್ಲಿ 250 ರೂಪಾಯಿ ದಾಟುವಂತಿಲ್ಲ. ಸಿಂಗಲ್​ ಸ್ಕ್ರೀನ್​ಗಳಲ್ಲೂ ದರಕ್ಕೆ ಕಡಿವಾಣ ಹಾಕಲಾಗಿದೆ. ಇದರಿಂದ ಎಲ್ಲಾ ಸಿನಿಮಾಗಳ ಕಲೆಕ್ಷನ್​ಗೆ ದೊಡ್ಡ ಮಟ್ಟದ ಹೊಡೆತ ಕೊಡುತ್ತಿದೆ. ಪವನ್​ ಕಲ್ಯಾಣ್ (Pawan Kalyan) ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ (Bheemla Nayak Movie) ಕೂಡ ಈಗ ದೊಡ್ಡ ಹೊಡೆತ ಎದುರಿಸಿದೆ. ಟಿಕೆಟ್​ ದರದ ನಿಯಮದಿಂದಾಗಿ ಮೊದಲ ದಿನವೇ 10 ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ.

ಸಿನಿಮಾ ಟಿಕೆಟ್​ಗೆ ಸರ್ಕಾರ ದರ ನಿಗದಿ ಮಾಡಿದೆ. ನಗರ ವ್ಯಾಪ್ತಿಯಲ್ಲಿ ಇರುವ ಮಲ್ಟಿಪ್ಲೆಕ್ಸ್​ಗಳಿಗೆ ಟಿಕೆಟ್​ ಮೊತ್ತ 75 ರೂಪಾಯಿ ಕನಿಷ್ಠ ಹಾಗೂ 250 ಗರಿಷ್ಟ ಮೊತ್ತ ನಿಗದಿ ಮಾಡಿದೆ. ಎಸಿ ಹಾಗೂ ಎಸಿ ರಹಿತ ಚಿತ್ರಮಂದಿರಗಳ ಟಿಕೆಟ್​ ದರ 20-100 ರೂ ಅಂತರದಲ್ಲಿ ಇರಬೇಕು. ಪಂಚಾಯತ್​ ಭಾಗದಲ್ಲಿ ಟಿಕೆಟ್ ಕನಿಷ್ಠ ದರ 20 ರೂಪಾಯಿಗೂ ಕಡಿಮೆ ಇಡಲು ಸೂಚಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸೋದು ಅನಿವಾರ್ಯ ಆಗಿದೆ.

‘ಭೀಮ್ಲಾ ನಾಯಕ್​’ ಸಿನಿಮಾ ಫೆಬ್ರವರಿ 25ರಂದು ತೆರೆಗೆ ಬಂದಿದೆ. ಈ ಮೊದಲು ತೆರೆಕಂಡಿದ್ದ ಪವನ್​ ಕಲ್ಯಾಣ್​ ನಟನೆಯ ‘ವಕೀಲ್​ ಸಾಬ್​’ ಸಿನಿಮಾ ಮೊದಲ ದಿನ ಆಂಧ್ರ ಪ್ರದೇಶದಲ್ಲಿ 23.6 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಭೀಮ್ಲಾ ನಾಯಕ್​’ ಸಿನಿಮಾ ಆಂಧ್ರದಲ್ಲಿ ಮೊದಲ ದಿನ ಬಾಚಿಕೊಂಡಿದ್ದು ಕೇವಲ 14.5 ಕೋಟಿ ರೂಪಾಯಿ. ಸರ್ಕಾರದ ಹೊಸ ನೀತಿಯಿಂದ 10 ಕೋಟಿ ನಷ್ಟ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ.

ಸಿನಿಮಾ ಹೀರೋಗಳು ತಮ್ಮ ಸಂಭಾವನೆಯನ್ನು ಕಡಿಮೆ ಮಾಡಿಕೊಳ್ಳಲಿ. ಈ ಮೂಲಕ ನಿರ್ಮಾಪಕರಿಗೆ ಸಹಾಯ ಮಾಡಿ ಎಂಬ ಸಲಹೆಯನ್ನು ಆಂಧ್ರ ಪ್ರದೇಶ ಸರ್ಕಾರ ನೀಡಿತ್ತು. ಈ ಸೂಚನೆಗೆ ಎಲ್ಲರಿಂದ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ಈ ನಿಯಮಗಳನ್ನು ಹಿಂಪಡೆಯಬೇಕು ಎನ್ನುವ ಒತ್ತಾಯ ಜೋರಾಗಿದೆ.

ಮಾರ್ಚ್​ 25ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದಿದ್ದಾರೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರಗಳ ಕಲೆಕ್ಷನ್​ಗೂ ದೊಡ್ಡ ಹೊಡೆತ ಬೀಳುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ‘ಭೀಮ್ಲಾ ನಾಯಕ್​’​ ಚಿತ್ರ ನೋಡಿ ಕುಣಿದು ಕುಪ್ಪಳಿಸಿದ ಪವನ್​ ಕಲ್ಯಾಣ್ ಫ್ಯಾನ್ಸ್​

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ