AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ

Nisha Upadhyay: ಭೋಜ್​ಪುರಿ ಗಾಯಕಿ ನಿಶಾ ಉಪಾಧ್ಯಾಯ್, ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗ ಗುಂಡೇಟು ತಗುಲಿ ಗಾಯಗೊಂಡಿದ್ದಾರೆ.

ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ
ನಿಶಾ ಉಪಾಧ್ಯಾಯ್
ಮಂಜುನಾಥ ಸಿ.
|

Updated on:Jun 01, 2023 | 6:35 PM

Share

ಭೋಜ್​ಪುರಿ ಗಾಯಕಿಯೊಬ್ಬರು (Bhojpuri Singer) ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗಲೆ ಗುಂಡು ಹಾರಿಸಲಾಗಿದ್ದು ಗಾಯಗೊಂಡಿರುವ ಗಾಯಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಟ್ನಾದಲ್ಲಿ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಗಾಯಕಿ ನಿಶಾ ಉಪಾಧ್ಯಾಯ (Nisha Upadhyay) ಸಂಗೀತ ಕಾರ್ಯಕ್ರಮ ನೀಡುತ್ತಿರುವ ವೇಳೆ ಅಗಂತುಕನೊಬ್ಬ ಗುಂಡು ಹಾರಿಸಿದ್ದು, ನಟಿಯ ಎಡಗಾಲಿಗೆ ಗುಂಡು ತಗುಲಿದೆ.

ನಟಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಬದಲಿಗೆ ಗಾಯಕಿಯ ಎಡಗಾಲಿನ ತೊಡೆಯ ಭಾಗಕ್ಕೆ ಸಣ್ಣ ಗಾಯವಷ್ಟೆ ಆಗಿದೆ. ನಟಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಯಾರು ಯಾಕಾಗಿ ನಟಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಘಟನೆ ಬಗ್ಗೆ ಲಿಖಿತ ದೂರು ದಾಖಲಾಗಿಲ್ಲ ಹಾಗಿದ್ದರೂ ಲಭ್ಯ ಮಾಹಿತಿ ಆಧಾರದ ಮೇಲೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಗಾಯಕಿ ನಿಶಾ ಉಪಾಧ್ಯಾಯ, ಬಿಹಾರದ ಸರಾನಾ ಜಿಲ್ಲೆಯ ಗೌರ್ ಬಸಂತ್ ಗ್ರಾಮದವರಾಗಿದ್ದಾರೆ. ಬಿಹಾರದ ಜನಪ್ರಿಯ ಭೋಜ್​ಪುರಿ ಗಾಯಕರಲ್ಲಿ ನಿಶಾ ಸಹ ಒಬ್ಬರಾಗಿದ್ದು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಮದುವೆ, ಹೋಳಿ ಇನ್ನಿತರೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.

ಬಿಹಾರದಲ್ಲಿ ಆಗಾಗ್ಗೆ ಇಂಥಹಾ ಘಟನೆಗಳು ನಡೆಯುತ್ತಿರುತ್ತವೆ. ಬಿಹಾರ, ರಾಜಸ್ಥಾನಗಳಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಲೈವ್ ಸಂಗೀತ ಕಾರ್ಯಕ್ರಮ ಖಾಯಂ ಆಗಿರುತ್ತದೆ. ಸಂಗೀತಗಾರರ ಮೇಲೆ ಹಲ್ಲೆ ಮಾಡುವುದು, ಕಾರ್ಯಕ್ರಮ ನಡೆಯುವಾಗ ಬಂದೂಕು ಪ್ರದರ್ಶಿಸುವುದು, ಗಾಳಿಯಲ್ಲಿ ಗುಂಡು ಹಾರಿಸುವ ಘಟನೆಗಳು ಆಗಾಗ್ಗೆ ವರದಿ ಆಗುತ್ತಲೇ ಇರುತ್ತವೆ. ಆಗೊಮ್ಮೆ ಈಗೊಮ್ಮೆ ಕಲಾವಿದರಿಗೆ ಗುಂಡು ಹಾರಿಸಿ ವಿಕೃತಿ ಮೆರೆಯುವುದೂ ಉಂಟು.

ಇತ್ತೀಚೆಗಷ್ಟೆ ಉತ್ತರ ಭಾರತದ ಜನಪ್ರಿಯ ನೃತ್ಯಗಾರ್ತಿ, ಗಾಯಕಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಗೋರಿ ನಗೋರಿ ಮೇಲೆಯೂ ಹಲ್ಲೆ ನಡೆದಿತ್ತು. ತನ್ನ ಸಹೋದರಿಯ ಮದುವೆ ಮಾಡಲು ರಾಜಸ್ಥಾನದ ಕಿಶನ್​ಘಡ್​ಗೆ ತೆರಳಿದ್ದಾಗ ಗೋರಿ ನಗೋರಿಯ ಅಕ್ಕನ ಪತಿ, ಅವನ ಸಹೋದರರು ಹಾಗೂ ಅವನ ಕೆಲವು ಗೆಳೆಯರು ಸೇರಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದ ಗೋರಿ ನಗೋರಿ, ಪೊಲೀಸರು ದೂರು ಸ್ವೀಕರಿಸುವ ಬದಲಿಗೆ ತನ್ನೊಟ್ಟಿಗೆ ಸೆಲ್ಫಿ ತೆಗೆದುಕೊಂಡರು ಎಂದಿದ್ದರು ಮಾತ್ರವಲ್ಲದೆ ರಾಜಸ್ಥಾನ ಸರ್ಕಾರವು ತಮಗೆ ಭದ್ರತೆ ಒದಗಿಸಬೇಕು ಎಂದು ಮನವಿ ಸಹ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 1 June 23

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ