AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ

Nisha Upadhyay: ಭೋಜ್​ಪುರಿ ಗಾಯಕಿ ನಿಶಾ ಉಪಾಧ್ಯಾಯ್, ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗ ಗುಂಡೇಟು ತಗುಲಿ ಗಾಯಗೊಂಡಿದ್ದಾರೆ.

ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ
ನಿಶಾ ಉಪಾಧ್ಯಾಯ್
ಮಂಜುನಾಥ ಸಿ.
|

Updated on:Jun 01, 2023 | 6:35 PM

Share

ಭೋಜ್​ಪುರಿ ಗಾಯಕಿಯೊಬ್ಬರು (Bhojpuri Singer) ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗಲೆ ಗುಂಡು ಹಾರಿಸಲಾಗಿದ್ದು ಗಾಯಗೊಂಡಿರುವ ಗಾಯಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಟ್ನಾದಲ್ಲಿ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಗಾಯಕಿ ನಿಶಾ ಉಪಾಧ್ಯಾಯ (Nisha Upadhyay) ಸಂಗೀತ ಕಾರ್ಯಕ್ರಮ ನೀಡುತ್ತಿರುವ ವೇಳೆ ಅಗಂತುಕನೊಬ್ಬ ಗುಂಡು ಹಾರಿಸಿದ್ದು, ನಟಿಯ ಎಡಗಾಲಿಗೆ ಗುಂಡು ತಗುಲಿದೆ.

ನಟಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಬದಲಿಗೆ ಗಾಯಕಿಯ ಎಡಗಾಲಿನ ತೊಡೆಯ ಭಾಗಕ್ಕೆ ಸಣ್ಣ ಗಾಯವಷ್ಟೆ ಆಗಿದೆ. ನಟಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಯಾರು ಯಾಕಾಗಿ ನಟಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಘಟನೆ ಬಗ್ಗೆ ಲಿಖಿತ ದೂರು ದಾಖಲಾಗಿಲ್ಲ ಹಾಗಿದ್ದರೂ ಲಭ್ಯ ಮಾಹಿತಿ ಆಧಾರದ ಮೇಲೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಗಾಯಕಿ ನಿಶಾ ಉಪಾಧ್ಯಾಯ, ಬಿಹಾರದ ಸರಾನಾ ಜಿಲ್ಲೆಯ ಗೌರ್ ಬಸಂತ್ ಗ್ರಾಮದವರಾಗಿದ್ದಾರೆ. ಬಿಹಾರದ ಜನಪ್ರಿಯ ಭೋಜ್​ಪುರಿ ಗಾಯಕರಲ್ಲಿ ನಿಶಾ ಸಹ ಒಬ್ಬರಾಗಿದ್ದು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಮದುವೆ, ಹೋಳಿ ಇನ್ನಿತರೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.

ಬಿಹಾರದಲ್ಲಿ ಆಗಾಗ್ಗೆ ಇಂಥಹಾ ಘಟನೆಗಳು ನಡೆಯುತ್ತಿರುತ್ತವೆ. ಬಿಹಾರ, ರಾಜಸ್ಥಾನಗಳಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಲೈವ್ ಸಂಗೀತ ಕಾರ್ಯಕ್ರಮ ಖಾಯಂ ಆಗಿರುತ್ತದೆ. ಸಂಗೀತಗಾರರ ಮೇಲೆ ಹಲ್ಲೆ ಮಾಡುವುದು, ಕಾರ್ಯಕ್ರಮ ನಡೆಯುವಾಗ ಬಂದೂಕು ಪ್ರದರ್ಶಿಸುವುದು, ಗಾಳಿಯಲ್ಲಿ ಗುಂಡು ಹಾರಿಸುವ ಘಟನೆಗಳು ಆಗಾಗ್ಗೆ ವರದಿ ಆಗುತ್ತಲೇ ಇರುತ್ತವೆ. ಆಗೊಮ್ಮೆ ಈಗೊಮ್ಮೆ ಕಲಾವಿದರಿಗೆ ಗುಂಡು ಹಾರಿಸಿ ವಿಕೃತಿ ಮೆರೆಯುವುದೂ ಉಂಟು.

ಇತ್ತೀಚೆಗಷ್ಟೆ ಉತ್ತರ ಭಾರತದ ಜನಪ್ರಿಯ ನೃತ್ಯಗಾರ್ತಿ, ಗಾಯಕಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಗೋರಿ ನಗೋರಿ ಮೇಲೆಯೂ ಹಲ್ಲೆ ನಡೆದಿತ್ತು. ತನ್ನ ಸಹೋದರಿಯ ಮದುವೆ ಮಾಡಲು ರಾಜಸ್ಥಾನದ ಕಿಶನ್​ಘಡ್​ಗೆ ತೆರಳಿದ್ದಾಗ ಗೋರಿ ನಗೋರಿಯ ಅಕ್ಕನ ಪತಿ, ಅವನ ಸಹೋದರರು ಹಾಗೂ ಅವನ ಕೆಲವು ಗೆಳೆಯರು ಸೇರಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದ ಗೋರಿ ನಗೋರಿ, ಪೊಲೀಸರು ದೂರು ಸ್ವೀಕರಿಸುವ ಬದಲಿಗೆ ತನ್ನೊಟ್ಟಿಗೆ ಸೆಲ್ಫಿ ತೆಗೆದುಕೊಂಡರು ಎಂದಿದ್ದರು ಮಾತ್ರವಲ್ಲದೆ ರಾಜಸ್ಥಾನ ಸರ್ಕಾರವು ತಮಗೆ ಭದ್ರತೆ ಒದಗಿಸಬೇಕು ಎಂದು ಮನವಿ ಸಹ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 1 June 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?