AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೋಲಾ ಶಂಕರ್ ಒಂದು ದುರಂತ’; ಚಿರಂಜೀವಿಗೆ ಮತ್ತೊಂದು ಸೋಲು

ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ ಸೋತಿದೆ. ಟ್ರೇಲರ್ ನೋಡಿದ ಅನೇಕರಿಗೆ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿರಲಿಲ್ಲ. ಚಿತ್ರ ನೋಡಿದವರು ತೆಗಳುತ್ತಿದ್ದಾರೆ. ಟಿಕೆಟ್ ಬುಕಿಂಗ್ ಆ್ಯಪ್ ‘ಬುಕ್ ಮೈ ಶೋ’ನಲ್ಲಿ ಚಿತ್ರಕ್ಕೆ ಕೇವಲ 6.2 ರೇಟಿಂಗ್ ಸಿಕ್ಕಿದೆ. ಐಎಂಡಿಬಿಯಲ್ಲಿ 4.6 ರೇಟಿಂಗ್ ದೊರೆತಿದೆ.

‘ಭೋಲಾ ಶಂಕರ್ ಒಂದು ದುರಂತ’; ಚಿರಂಜೀವಿಗೆ ಮತ್ತೊಂದು ಸೋಲು
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Aug 12, 2023 | 7:08 AM

Share

ನಟ ಚಿರಂಜೀವಿ ಹಾಗೂ ರಾಮ್ ಚರಣ್ ನಟನೆಯ ‘ಆಚಾರ್ಯ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಹೀನಾಯವಾಗಿ ಸೋತಿತು. ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಚಿತ್ರ (Bhola Shankar Movie) ಕೂಡ ಆಗಸ್ಟ್ 11ರಂದು ರಿಲೀಸ್ ಆಯಿತು. ಈ ಚಿತ್ರವನ್ನು ಪ್ರೇಕ್ಷಕರು ‘ದುರಂತ’ ಎಂದು ಘೋಷಿಸಿದ್ದಾರೆ. #Bholashankardisaster ಹ್ಯಾಶ್​ಟ್ಯಾಗ್ ಸೋಶಿಯಲ್​ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಚಿರಂಜೀವಿ (Chiranjeevi) ವೃತ್ತಿ ಜೀವನಕ್ಕೆ ಇದು ಹೊಡೆತ ನೀಡಿದೆ. ಒಳ್ಳೆಯ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಳ್ಳುವಂತೆ ಅನೇಕರು ಕೋರಿದ್ದಾರೆ.

‘ಆಚಾರ್ಯ’, ‘ಗಾಡ್ ಫಾದರ್’ ಸಿನಿಮಾಗಳು ಸೋತವು. ಈಗ ಅವರ ನಟನೆಯ ‘ಭೋಲಾ ಶಂಕರ್’ ಸಿನಿಮಾ ಕೂಡ ಸೋತಿದೆ. ಟ್ರೇಲರ್ ನೋಡಿದ ಅನೇಕರಿಗೆ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿರಲಿಲ್ಲ. ಚಿತ್ರ ನೋಡಿದವರು ತೆಗಳುತ್ತಿದ್ದಾರೆ. ಟಿಕೆಟ್ ಬುಕಿಂಗ್ ಆ್ಯಪ್ ‘ಬುಕ್ ಮೈ ಶೋ’ನಲ್ಲಿ ಚಿತ್ರಕ್ಕೆ ಕೇವಲ 6.2 ರೇಟಿಂಗ್ ಸಿಕ್ಕಿದೆ. ಐಎಂಡಿಬಿಯಲ್ಲಿ 4.6 ರೇಟಿಂಗ್ ದೊರೆತಿದೆ. ಮೆಹರ್ ರಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಭೋಲಾ ಶಂಕರ್’ ಟ್ರೇಲರ್​ನಲ್ಲಿ ಮಿಂಚಿದ ಚಿರಂಜೀವಿ; ಖಡಕ್ ವಿಲನ್ ಆಗಿ ಕಾಣಿಸಿಕೊಂಡ ರವಿಶಂಕರ್

ಚಿರಂಜೀವಿ ಅವರಿಗೆ ಜೊತೆಯಾಗಿ ತಮನ್ನಾ ಕಾಣಿಸಿಕೊಂಡಿದ್ದಾರೆ. ಕೀರ್ತಿ ಸುರೇಶ್ ಅವರು ಚಿರಂಜೀವಿಗೆ ಜೊತೆಯಾಗಿ ನಟಿಸಿದ್ದಾರೆ. ‘ದಿನ ಕಳೆದಂತೆ ಇಬ್ಬರ ವೃತ್ತಿಜೀವನ ಹದಗೆಡುತ್ತಿದೆ. ಸಿನಿಮಾದಲ್ಲಿ ಚಿರಂಜೀವಿ. ರಾಜಕೀಯದಲ್ಲಿ ವೈಎಸ್ ಜಗನ್’ ಎಂದು ಕೆಲವರು ಬರೆದುಕೊಂಡಿದ್ದಾರೆ. ಭೂಮಿಕಾ ಚಿತ್ರಮಂದಿರದಲ್ಲಿ ಯಾವುದೇ ಟಿಕೆಟ್ ಬುಕ್ ಆಗಿಲ್ಲ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ.

ಸದ್ಯ ಚಿರಂಜೀವಿ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಮುಂದೆ ಯಾವ ರೀತಿಯ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!