AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೋಲಾ ಶಂಕರ್ ಒಂದು ದುರಂತ’; ಚಿರಂಜೀವಿಗೆ ಮತ್ತೊಂದು ಸೋಲು

ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ ಸೋತಿದೆ. ಟ್ರೇಲರ್ ನೋಡಿದ ಅನೇಕರಿಗೆ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿರಲಿಲ್ಲ. ಚಿತ್ರ ನೋಡಿದವರು ತೆಗಳುತ್ತಿದ್ದಾರೆ. ಟಿಕೆಟ್ ಬುಕಿಂಗ್ ಆ್ಯಪ್ ‘ಬುಕ್ ಮೈ ಶೋ’ನಲ್ಲಿ ಚಿತ್ರಕ್ಕೆ ಕೇವಲ 6.2 ರೇಟಿಂಗ್ ಸಿಕ್ಕಿದೆ. ಐಎಂಡಿಬಿಯಲ್ಲಿ 4.6 ರೇಟಿಂಗ್ ದೊರೆತಿದೆ.

‘ಭೋಲಾ ಶಂಕರ್ ಒಂದು ದುರಂತ’; ಚಿರಂಜೀವಿಗೆ ಮತ್ತೊಂದು ಸೋಲು
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Aug 12, 2023 | 7:08 AM

Share

ನಟ ಚಿರಂಜೀವಿ ಹಾಗೂ ರಾಮ್ ಚರಣ್ ನಟನೆಯ ‘ಆಚಾರ್ಯ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಹೀನಾಯವಾಗಿ ಸೋತಿತು. ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಚಿತ್ರ (Bhola Shankar Movie) ಕೂಡ ಆಗಸ್ಟ್ 11ರಂದು ರಿಲೀಸ್ ಆಯಿತು. ಈ ಚಿತ್ರವನ್ನು ಪ್ರೇಕ್ಷಕರು ‘ದುರಂತ’ ಎಂದು ಘೋಷಿಸಿದ್ದಾರೆ. #Bholashankardisaster ಹ್ಯಾಶ್​ಟ್ಯಾಗ್ ಸೋಶಿಯಲ್​ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಚಿರಂಜೀವಿ (Chiranjeevi) ವೃತ್ತಿ ಜೀವನಕ್ಕೆ ಇದು ಹೊಡೆತ ನೀಡಿದೆ. ಒಳ್ಳೆಯ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಳ್ಳುವಂತೆ ಅನೇಕರು ಕೋರಿದ್ದಾರೆ.

‘ಆಚಾರ್ಯ’, ‘ಗಾಡ್ ಫಾದರ್’ ಸಿನಿಮಾಗಳು ಸೋತವು. ಈಗ ಅವರ ನಟನೆಯ ‘ಭೋಲಾ ಶಂಕರ್’ ಸಿನಿಮಾ ಕೂಡ ಸೋತಿದೆ. ಟ್ರೇಲರ್ ನೋಡಿದ ಅನೇಕರಿಗೆ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿರಲಿಲ್ಲ. ಚಿತ್ರ ನೋಡಿದವರು ತೆಗಳುತ್ತಿದ್ದಾರೆ. ಟಿಕೆಟ್ ಬುಕಿಂಗ್ ಆ್ಯಪ್ ‘ಬುಕ್ ಮೈ ಶೋ’ನಲ್ಲಿ ಚಿತ್ರಕ್ಕೆ ಕೇವಲ 6.2 ರೇಟಿಂಗ್ ಸಿಕ್ಕಿದೆ. ಐಎಂಡಿಬಿಯಲ್ಲಿ 4.6 ರೇಟಿಂಗ್ ದೊರೆತಿದೆ. ಮೆಹರ್ ರಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಭೋಲಾ ಶಂಕರ್’ ಟ್ರೇಲರ್​ನಲ್ಲಿ ಮಿಂಚಿದ ಚಿರಂಜೀವಿ; ಖಡಕ್ ವಿಲನ್ ಆಗಿ ಕಾಣಿಸಿಕೊಂಡ ರವಿಶಂಕರ್

ಚಿರಂಜೀವಿ ಅವರಿಗೆ ಜೊತೆಯಾಗಿ ತಮನ್ನಾ ಕಾಣಿಸಿಕೊಂಡಿದ್ದಾರೆ. ಕೀರ್ತಿ ಸುರೇಶ್ ಅವರು ಚಿರಂಜೀವಿಗೆ ಜೊತೆಯಾಗಿ ನಟಿಸಿದ್ದಾರೆ. ‘ದಿನ ಕಳೆದಂತೆ ಇಬ್ಬರ ವೃತ್ತಿಜೀವನ ಹದಗೆಡುತ್ತಿದೆ. ಸಿನಿಮಾದಲ್ಲಿ ಚಿರಂಜೀವಿ. ರಾಜಕೀಯದಲ್ಲಿ ವೈಎಸ್ ಜಗನ್’ ಎಂದು ಕೆಲವರು ಬರೆದುಕೊಂಡಿದ್ದಾರೆ. ಭೂಮಿಕಾ ಚಿತ್ರಮಂದಿರದಲ್ಲಿ ಯಾವುದೇ ಟಿಕೆಟ್ ಬುಕ್ ಆಗಿಲ್ಲ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ.

ಸದ್ಯ ಚಿರಂಜೀವಿ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಮುಂದೆ ಯಾವ ರೀತಿಯ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ