AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ

ಚಿರಂಜೀವಿ ಅವರು ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಾರೆ. ‘ಭೋಲಾ ಶಂಕರ್’ ಚಿತ್ರಕ್ಕೂ ಅವರು ದೊಡ್ಡ ಮಟ್ಟದ ಹಣ ಪಡೆದಿದ್ದಾರೆ ಎಂದು ವರದಿ ಆಗಿದೆ. ಅಷ್ಟೇ ಅಲ್ಲ, ಚಿರಂಜೀವಿಗೆ ಸಂಭಾವನೆ ಕೊಡೋಕೆ ನಿರ್ಮಾಪಕ ಅನಿಲ್ ಸುಂಕರ ಅವರು ತಮ್ಮ ಮನೆ ಮಾರಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿತ್ತು.

ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ
ಭೋಲಾ ಶಂಕರ್
Follow us
ರಾಜೇಶ್ ದುಗ್ಗುಮನೆ
|

Updated on:Aug 18, 2023 | 7:48 AM

ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ (Bhola Shankar Movie) ದೊಡ್ಡ ಮಟ್ಟದಲ್ಲಿ ಫ್ಲಾಪ್ ಆಯಿತು. ಆಗಸ್ಟ್ 11ರಂದು ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮ್ಯಾಜಿಕ್ ಮಾಡೋದು ಹಾಗಿರಲಿ ಹಾಕಿದ ದುಡ್ಡನ್ನು ಮರಳಿ ಪಡೆಯಲು ವಿಫಲವಾಯಿತು. ಚಿರಂಜೀವಿ, ತಮನ್ನಾ, ಕೀರ್ತಿ ಸುರೇಶ್ (Keerthi Suresh) ಮೊದಲಾದವರು ನಟಿಸಿದ ಹೊರತಾಗಿಯೂ ಸಿನಿಮಾ ಮೋಡಿ ಮಾಡಿಲ್ಲ. ಈ ಚಿತ್ರದ ನಿರ್ದೇಶಕ ಮೆಹರ್ ರಮೇಶ್ ಅವರನ್ನು ಟ್ರೋಲ್ ಮಾಡಲಾಗಿದೆ. ಈ ಮಧ್ಯೆ ಚಿತ್ರದ ಬಗ್ಗೆ ವದಂತಿ ಒಂದು ಹಬ್ಬಿತ್ತು. ಇದಕ್ಕೆ ನಿರ್ಮಾಪಕರು ಉತ್ತರಿಸಿದ್ದಾರೆ.

ಚಿರಂಜೀವಿ ಅವರು ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಾರೆ. ‘ಭೋಲಾ ಶಂಕರ್’ ಚಿತ್ರಕ್ಕೂ ಅವರು ದೊಡ್ಡ ಮಟ್ಟದ ಹಣ ಪಡೆದಿದ್ದಾರೆ ಎಂದು ವರದಿ ಆಗಿದೆ. ಅಷ್ಟೇ ಅಲ್ಲ, ಚಿರಂಜೀವಿಗೆ ಸಂಭಾವನೆ ಕೊಡೋಕೆ ನಿರ್ಮಾಪಕ ಅನಿಲ್ ಸುಂಕರ ಅವರು ತಮ್ಮ ಮನೆ ಮಾರಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿತ್ತು. ಆದರೆ, ಈ ವಿಚಾರವನ್ನು ಅಲ್ಲಗಳೆದಿದ್ದಾರೆ.

‘ವದಂತಿಗಳು ಕೆಲವು ಜನರಿಗೆ ಖುಷಿ ನೀಡಬಹುದು. ಆದರೆ, ಹಲವು ವರ್ಷಗಳಿಂದ ಕಟ್ಟಲ್ಪಟ್ಟ ವರ್ಚಸ್ಸಿಗೆ ಕಳಂಕ ತರುವುದು ಒಪ್ಪಲಾರದ ಅಪರಾಧ. ಸಂಬಂಧಿಸಿದವರ ಎಲ್ಲಾ ಕುಟುಂಬದವರಿಗೂ ಇದರಿಂದ ತೊಂದರೆ ಉಂಟಾಗುತ್ತದೆ. ನನ್ನ ಮತ್ತು ಚಿರಂಜೀವಿ ಅವರ ನಡುವೆ ವಿವಾದ ಆಗಿದೆ ಎಂಬ ಸುದ್ದಿ ಶುದ್ಧ ಸುಳ್ಳು. ಅವರು ನನಗೆ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಅವರಿಗೆ ನನ್ನೊಂದಿಗೆ ಉತ್ತಮ ಸಂಬಂಧ ಇದೆ. ದಯವಿಟ್ಟು ಸತ್ಯಗಳ ತಿರುಚಬೇಡಿ. ನಕಲಿ ಸುದ್ದಿಗಳನ್ನು ಸೃಷ್ಟಿಸುವುದು ಕೆಲವರಿಗೆ ಖುಷಿ ನೀಡುತ್ತದೆ. ಆದರೆ ಇದು ಅನೇಕರ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ನನ್ನ ಎಲ್ಲಾ ಹಿತೈಷಿಗಳಿಗೆ ನಾನು ಕೃತಜ್ಞನಾಗಿದ್ದೇನೆ. ಮತ್ತಷ್ಟು ಬಲ ಪಡೆದು ಬರುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಲಾಪ್​ನಲ್ಲಿ ತಮ್ಮ ದಾಖಲೆಯನ್ನು ತಾವೇ ಮುರಿದ ಚಿರಂಜೀವಿ:ಭೋಲಾ ಶಂಕರ್; ಸಿನಿಮಾದ ನಷ್ಟವೆಷ್ಟು?

ಚಿರಂಜೀವಿ ನಟನೆಯ ‘ಗಾಡ್ ಫಾದರ್’ ಸೋತಿತು. ‘ವಾಲ್ತೇರು ವೀರಯ್ಯ’ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಸಿನಿಮಾದಲ್ಲಿ ರವಿತೇಜ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಭೋಲಾ ಶಂಕರ್’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಅದು ಸುಳ್ಳಾಗಿದೆ. ಚಿರಂಜೀವಿ ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಸಿನಿಮಾ ಮಾಡಲಿ ಎಂದು ಅನೇಕರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Fri, 18 August 23

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ