AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ

ಚಿರಂಜೀವಿ ಅವರು ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಾರೆ. ‘ಭೋಲಾ ಶಂಕರ್’ ಚಿತ್ರಕ್ಕೂ ಅವರು ದೊಡ್ಡ ಮಟ್ಟದ ಹಣ ಪಡೆದಿದ್ದಾರೆ ಎಂದು ವರದಿ ಆಗಿದೆ. ಅಷ್ಟೇ ಅಲ್ಲ, ಚಿರಂಜೀವಿಗೆ ಸಂಭಾವನೆ ಕೊಡೋಕೆ ನಿರ್ಮಾಪಕ ಅನಿಲ್ ಸುಂಕರ ಅವರು ತಮ್ಮ ಮನೆ ಮಾರಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿತ್ತು.

ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ
ಭೋಲಾ ಶಂಕರ್
ರಾಜೇಶ್ ದುಗ್ಗುಮನೆ
|

Updated on:Aug 18, 2023 | 7:48 AM

Share

ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ (Bhola Shankar Movie) ದೊಡ್ಡ ಮಟ್ಟದಲ್ಲಿ ಫ್ಲಾಪ್ ಆಯಿತು. ಆಗಸ್ಟ್ 11ರಂದು ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮ್ಯಾಜಿಕ್ ಮಾಡೋದು ಹಾಗಿರಲಿ ಹಾಕಿದ ದುಡ್ಡನ್ನು ಮರಳಿ ಪಡೆಯಲು ವಿಫಲವಾಯಿತು. ಚಿರಂಜೀವಿ, ತಮನ್ನಾ, ಕೀರ್ತಿ ಸುರೇಶ್ (Keerthi Suresh) ಮೊದಲಾದವರು ನಟಿಸಿದ ಹೊರತಾಗಿಯೂ ಸಿನಿಮಾ ಮೋಡಿ ಮಾಡಿಲ್ಲ. ಈ ಚಿತ್ರದ ನಿರ್ದೇಶಕ ಮೆಹರ್ ರಮೇಶ್ ಅವರನ್ನು ಟ್ರೋಲ್ ಮಾಡಲಾಗಿದೆ. ಈ ಮಧ್ಯೆ ಚಿತ್ರದ ಬಗ್ಗೆ ವದಂತಿ ಒಂದು ಹಬ್ಬಿತ್ತು. ಇದಕ್ಕೆ ನಿರ್ಮಾಪಕರು ಉತ್ತರಿಸಿದ್ದಾರೆ.

ಚಿರಂಜೀವಿ ಅವರು ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಾರೆ. ‘ಭೋಲಾ ಶಂಕರ್’ ಚಿತ್ರಕ್ಕೂ ಅವರು ದೊಡ್ಡ ಮಟ್ಟದ ಹಣ ಪಡೆದಿದ್ದಾರೆ ಎಂದು ವರದಿ ಆಗಿದೆ. ಅಷ್ಟೇ ಅಲ್ಲ, ಚಿರಂಜೀವಿಗೆ ಸಂಭಾವನೆ ಕೊಡೋಕೆ ನಿರ್ಮಾಪಕ ಅನಿಲ್ ಸುಂಕರ ಅವರು ತಮ್ಮ ಮನೆ ಮಾರಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿತ್ತು. ಆದರೆ, ಈ ವಿಚಾರವನ್ನು ಅಲ್ಲಗಳೆದಿದ್ದಾರೆ.

‘ವದಂತಿಗಳು ಕೆಲವು ಜನರಿಗೆ ಖುಷಿ ನೀಡಬಹುದು. ಆದರೆ, ಹಲವು ವರ್ಷಗಳಿಂದ ಕಟ್ಟಲ್ಪಟ್ಟ ವರ್ಚಸ್ಸಿಗೆ ಕಳಂಕ ತರುವುದು ಒಪ್ಪಲಾರದ ಅಪರಾಧ. ಸಂಬಂಧಿಸಿದವರ ಎಲ್ಲಾ ಕುಟುಂಬದವರಿಗೂ ಇದರಿಂದ ತೊಂದರೆ ಉಂಟಾಗುತ್ತದೆ. ನನ್ನ ಮತ್ತು ಚಿರಂಜೀವಿ ಅವರ ನಡುವೆ ವಿವಾದ ಆಗಿದೆ ಎಂಬ ಸುದ್ದಿ ಶುದ್ಧ ಸುಳ್ಳು. ಅವರು ನನಗೆ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಅವರಿಗೆ ನನ್ನೊಂದಿಗೆ ಉತ್ತಮ ಸಂಬಂಧ ಇದೆ. ದಯವಿಟ್ಟು ಸತ್ಯಗಳ ತಿರುಚಬೇಡಿ. ನಕಲಿ ಸುದ್ದಿಗಳನ್ನು ಸೃಷ್ಟಿಸುವುದು ಕೆಲವರಿಗೆ ಖುಷಿ ನೀಡುತ್ತದೆ. ಆದರೆ ಇದು ಅನೇಕರ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ನನ್ನ ಎಲ್ಲಾ ಹಿತೈಷಿಗಳಿಗೆ ನಾನು ಕೃತಜ್ಞನಾಗಿದ್ದೇನೆ. ಮತ್ತಷ್ಟು ಬಲ ಪಡೆದು ಬರುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಲಾಪ್​ನಲ್ಲಿ ತಮ್ಮ ದಾಖಲೆಯನ್ನು ತಾವೇ ಮುರಿದ ಚಿರಂಜೀವಿ:ಭೋಲಾ ಶಂಕರ್; ಸಿನಿಮಾದ ನಷ್ಟವೆಷ್ಟು?

ಚಿರಂಜೀವಿ ನಟನೆಯ ‘ಗಾಡ್ ಫಾದರ್’ ಸೋತಿತು. ‘ವಾಲ್ತೇರು ವೀರಯ್ಯ’ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಸಿನಿಮಾದಲ್ಲಿ ರವಿತೇಜ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಭೋಲಾ ಶಂಕರ್’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಅದು ಸುಳ್ಳಾಗಿದೆ. ಚಿರಂಜೀವಿ ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಸಿನಿಮಾ ಮಾಡಲಿ ಎಂದು ಅನೇಕರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Fri, 18 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ