AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ

ಚಿರಂಜೀವಿ ಅವರು ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಾರೆ. ‘ಭೋಲಾ ಶಂಕರ್’ ಚಿತ್ರಕ್ಕೂ ಅವರು ದೊಡ್ಡ ಮಟ್ಟದ ಹಣ ಪಡೆದಿದ್ದಾರೆ ಎಂದು ವರದಿ ಆಗಿದೆ. ಅಷ್ಟೇ ಅಲ್ಲ, ಚಿರಂಜೀವಿಗೆ ಸಂಭಾವನೆ ಕೊಡೋಕೆ ನಿರ್ಮಾಪಕ ಅನಿಲ್ ಸುಂಕರ ಅವರು ತಮ್ಮ ಮನೆ ಮಾರಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿತ್ತು.

ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ
ಭೋಲಾ ಶಂಕರ್
ರಾಜೇಶ್ ದುಗ್ಗುಮನೆ
|

Updated on:Aug 18, 2023 | 7:48 AM

Share

ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ (Bhola Shankar Movie) ದೊಡ್ಡ ಮಟ್ಟದಲ್ಲಿ ಫ್ಲಾಪ್ ಆಯಿತು. ಆಗಸ್ಟ್ 11ರಂದು ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮ್ಯಾಜಿಕ್ ಮಾಡೋದು ಹಾಗಿರಲಿ ಹಾಕಿದ ದುಡ್ಡನ್ನು ಮರಳಿ ಪಡೆಯಲು ವಿಫಲವಾಯಿತು. ಚಿರಂಜೀವಿ, ತಮನ್ನಾ, ಕೀರ್ತಿ ಸುರೇಶ್ (Keerthi Suresh) ಮೊದಲಾದವರು ನಟಿಸಿದ ಹೊರತಾಗಿಯೂ ಸಿನಿಮಾ ಮೋಡಿ ಮಾಡಿಲ್ಲ. ಈ ಚಿತ್ರದ ನಿರ್ದೇಶಕ ಮೆಹರ್ ರಮೇಶ್ ಅವರನ್ನು ಟ್ರೋಲ್ ಮಾಡಲಾಗಿದೆ. ಈ ಮಧ್ಯೆ ಚಿತ್ರದ ಬಗ್ಗೆ ವದಂತಿ ಒಂದು ಹಬ್ಬಿತ್ತು. ಇದಕ್ಕೆ ನಿರ್ಮಾಪಕರು ಉತ್ತರಿಸಿದ್ದಾರೆ.

ಚಿರಂಜೀವಿ ಅವರು ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಾರೆ. ‘ಭೋಲಾ ಶಂಕರ್’ ಚಿತ್ರಕ್ಕೂ ಅವರು ದೊಡ್ಡ ಮಟ್ಟದ ಹಣ ಪಡೆದಿದ್ದಾರೆ ಎಂದು ವರದಿ ಆಗಿದೆ. ಅಷ್ಟೇ ಅಲ್ಲ, ಚಿರಂಜೀವಿಗೆ ಸಂಭಾವನೆ ಕೊಡೋಕೆ ನಿರ್ಮಾಪಕ ಅನಿಲ್ ಸುಂಕರ ಅವರು ತಮ್ಮ ಮನೆ ಮಾರಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿತ್ತು. ಆದರೆ, ಈ ವಿಚಾರವನ್ನು ಅಲ್ಲಗಳೆದಿದ್ದಾರೆ.

‘ವದಂತಿಗಳು ಕೆಲವು ಜನರಿಗೆ ಖುಷಿ ನೀಡಬಹುದು. ಆದರೆ, ಹಲವು ವರ್ಷಗಳಿಂದ ಕಟ್ಟಲ್ಪಟ್ಟ ವರ್ಚಸ್ಸಿಗೆ ಕಳಂಕ ತರುವುದು ಒಪ್ಪಲಾರದ ಅಪರಾಧ. ಸಂಬಂಧಿಸಿದವರ ಎಲ್ಲಾ ಕುಟುಂಬದವರಿಗೂ ಇದರಿಂದ ತೊಂದರೆ ಉಂಟಾಗುತ್ತದೆ. ನನ್ನ ಮತ್ತು ಚಿರಂಜೀವಿ ಅವರ ನಡುವೆ ವಿವಾದ ಆಗಿದೆ ಎಂಬ ಸುದ್ದಿ ಶುದ್ಧ ಸುಳ್ಳು. ಅವರು ನನಗೆ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಅವರಿಗೆ ನನ್ನೊಂದಿಗೆ ಉತ್ತಮ ಸಂಬಂಧ ಇದೆ. ದಯವಿಟ್ಟು ಸತ್ಯಗಳ ತಿರುಚಬೇಡಿ. ನಕಲಿ ಸುದ್ದಿಗಳನ್ನು ಸೃಷ್ಟಿಸುವುದು ಕೆಲವರಿಗೆ ಖುಷಿ ನೀಡುತ್ತದೆ. ಆದರೆ ಇದು ಅನೇಕರ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ನನ್ನ ಎಲ್ಲಾ ಹಿತೈಷಿಗಳಿಗೆ ನಾನು ಕೃತಜ್ಞನಾಗಿದ್ದೇನೆ. ಮತ್ತಷ್ಟು ಬಲ ಪಡೆದು ಬರುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಲಾಪ್​ನಲ್ಲಿ ತಮ್ಮ ದಾಖಲೆಯನ್ನು ತಾವೇ ಮುರಿದ ಚಿರಂಜೀವಿ:ಭೋಲಾ ಶಂಕರ್; ಸಿನಿಮಾದ ನಷ್ಟವೆಷ್ಟು?

ಚಿರಂಜೀವಿ ನಟನೆಯ ‘ಗಾಡ್ ಫಾದರ್’ ಸೋತಿತು. ‘ವಾಲ್ತೇರು ವೀರಯ್ಯ’ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಸಿನಿಮಾದಲ್ಲಿ ರವಿತೇಜ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಭೋಲಾ ಶಂಕರ್’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಅದು ಸುಳ್ಳಾಗಿದೆ. ಚಿರಂಜೀವಿ ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಸಿನಿಮಾ ಮಾಡಲಿ ಎಂದು ಅನೇಕರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Fri, 18 August 23

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ