AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ

ನಟ ಚಿರಂಜೀವಿ ಅವರ ಆರೋಗ್ಯದ ಬಗ್ಗೆ ಗಾಸಿಪ್​ಗಳು ಕೇಳಿಬಂದಿದ್ದರಿಂದ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದರು. ಬೆಂಗಳೂರಿನಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು ಎಂದು ಕೂಡ ಹೇಳಲಾಗಿತ್ತು. ಆದರೆ ಈಗ ಅವರು ದೆಹಲಿಯಲ್ಲಿ ಆಪರೇಷನ್​ ಮಾಡಿಸಿಕೊಂಡಿರುವುದು ಖಚಿತವಾಗಿದೆ. ಸದ್ಯಕ್ಕೆ ಅಲ್ಲಿಯೇ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ
ಮೆಗಾಸ್ಟಾರ್​ ಚಿರಂಜೀವಿ
ಮದನ್​ ಕುಮಾರ್​
|

Updated on: Aug 16, 2023 | 3:19 PM

Share

ಟಾಲಿವುಡ್​ನ ಖ್ಯಾತ ನಟ ‘ಮೆಗಾ ಸ್ಟಾರ್’ ಚಿರಂಜೀವಿ (Mega Star Chiranjeevi) ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್​ ಮಾಡಲಾಗಿದೆ. ಒಂದು ವಾರಗಳ ಕಾಲ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. ಒಂದು ವಾರದ ನಂತರ ಹೈದರಾಬಾದ್‌ಗೆ ವಾಪಸ್​ ಬರಲಿದ್ದಾರೆ ಎಂದು ಸುದ್ದಿ ಆಗಿದೆ. ಚಿರಂಜೀವಿ ಅವರಿಗೆ ಆಗಾಗ ಮೊಣಕಾಲು ನೋವು (Knee Pain) ಕಾಣಿಸಿಕೊಳ್ಳುತ್ತಿತ್ತು. ಆ ಕಾರಣದಿಂದ ಅವರು ಪರೀಕ್ಷೆ ಮಾಡಿಸಿದ್ದರು. ನೋವು ನಿವಾರಣೆಗಾಗಿ ಅವರು ನೀ ವಾಶ್ ಸರ್ಜರಿ ಮಾಡಿಸಿಕೊಂಡಿದ್ದಾರೆ. ಮೊಣಕಾಲು ಚಿಪ್ಪಿನಲ್ಲಿ ಇರುವ ಸೋಂಕನ್ನು ನಿವಾರಿಸುವ ಸಲುವಾಗಿ ಈ ಶಸ್ತ್ರಚಿಕಿತ್ಸೆ (Knee Surgery) ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಅವರು ಮತ್ತೆ ಹೈದರಾಬಾದ್​ಗೆ ಮರಳಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಆಗಸ್ಟ್​ 11ರಂದು ಚಿರಂಜೀವಿ ನಟನೆಯ ‘ಭೋಲಾ ಶಂಕರ್​’ ಸಿನಿಮಾ ಬಿಡುಗಡೆ ಆಯಿತು. ಅದರ ಜೊತೆಗೆ ಕೆಲವು ಗಾಸಿಪ್​ ಹಬ್ಬಿತ್ತು. ಇತ್ತೀಚೆಗೆ ಚಿರಂಜೀವಿ ಅವರ ಮೊಣಕಾಲಿನ ಶಸ್ತ್ರ ಚಿಕಿತ್ಸೆ ಕುರಿತಂತೆ ಅನೇಕ ಅಂತೆ-ಕಂತೆಗಳು ಹರಿದಾಡಿದ್ದವು. ನೆಚ್ಚಿನ ನಟನ ಆರೋಗ್ಯದ ಬಗ್ಗೆ ಗಾಸಿಪ್​ಗಳು ಕೇಳಿಬಂದಿದ್ದರಿಂದ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದರು. ಬೆಂಗಳೂರಿನಲ್ಲಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬಹುದು ಎಂದು ಕೂಡ ಹೇಳಲಾಗಿತ್ತು. ಆದರೆ ಈಗ ಅವರು ದೆಹಲಿಯಲ್ಲಿ ಆಪರೇಷನ್​ ಮಾಡಿಸಿಕೊಂಡಿರುವುದು ಖಚಿತವಾಗಿದೆ.

ಇದನ್ನೂ ಓದಿ: ಚಿರಂಜೀವಿ ವಿರುದ್ಧ ಸುಳ್ಳು ಆರೋಪ: ನಟ ರಾಜಶೇಖರ್, ಪತ್ನಿ ಜೀವಿತಾಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಇನ್ನು, ಸಿನಿಮಾದ ವಿಚಾರಕ್ಕೆ ಬರುವುದಾದರೆ ‘ಭೋಲಾ ಶಂಕರ್’ ಸಿನಿಮಾಗೆ ಮೆಹರ್ ರಮೇಶ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಹೀನಾಯವಾಗಿ ಸೋತಿದೆ. ಅಭಿಮಾನಿಗಳ ನಿರೀಕ್ಷೆಯನ್ನು ಈ ಚಿತ್ರ ಹುಸಿಗೊಳಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಮುಗ್ಗರಿಸಿದೆ. ಈ ಚಿತ್ರದಲ್ಲಿ ಯಾವುದೇ ಹೊಸತನ ಇಲ್ಲ ಎಂದು ವಿಮರ್ಶಕರು ಜರಿದಿದ್ದಾರೆ. ಅಲ್ಲದೇ, ‘ಜೈಲರ್’, ‘ಗದರ್​ 2’, ‘ಒಎಂಜಿ 2’ ಮುಂತಾದ ಸಿನಿಮಾಗಳ ಪೈಪೋಟಿ ಎದುರು ‘ಭೋಲಾ ಶಂಕರ್​’ ಚಿತ್ರ ಸೋತಿದೆ.

ಇದನ್ನೂ ಓದಿ: ಚಿರಂಜೀವಿ ತೊಟ್ಟ ಈ ವಾಚ್​​ನಲ್ಲಿ ಎರಡು ಐಷಾರಾಮಿ ಕಾರು ಖರೀದಿಸಬಹುದು

‘ಭೋಲಾ ಶಂಕರ್​’ ಸಿನಿಮಾ ಸೋತರೂ ಕೂಡ ನಿರ್ಮಾಪಕ ಉತ್ಸಾಹ ಕಡಿಮೆ ಆಗಿಲ್ಲ. ‘ಎಕೆ ಎಂಟರ್ಟೈನ್ಮೆಂಟ್ಸ್’ ಬ್ಯಾನರ್ ಅಡಿಯಲ್ಲಿ ತೆಲುಗಿನಲ್ಲಿ ಬಿಡುಗಡೆಯಾದ ಈ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್​ ಮಾಡಲು ತಯಾರಿ ನಡೆದಿದೆ. ಆಗಸ್ಟ್ 25ರಂದು ಚಿತ್ರವು ಹಿಂದಿ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಈಗಾಗಲೇ ಹಿಂದಿ ಅವತರಣಿಕೆಯ ಟೀಸರ್ ಕೂಡ ಬಿಡುಗಡೆ ಆಗಿದೆ. ತಮನ್ನಾ ಭಾಟಿಯಾ, ಕೀರ್ತಿ ಸುರೇಶ್, ಸುಶಾಂತ್, ತರುಣ್ ಅರೋರಾ, ಮುರಳಿ ಶರ್ಮಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ