‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ

ನಟ ಚಿರಂಜೀವಿ ಅವರ ಆರೋಗ್ಯದ ಬಗ್ಗೆ ಗಾಸಿಪ್​ಗಳು ಕೇಳಿಬಂದಿದ್ದರಿಂದ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದರು. ಬೆಂಗಳೂರಿನಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು ಎಂದು ಕೂಡ ಹೇಳಲಾಗಿತ್ತು. ಆದರೆ ಈಗ ಅವರು ದೆಹಲಿಯಲ್ಲಿ ಆಪರೇಷನ್​ ಮಾಡಿಸಿಕೊಂಡಿರುವುದು ಖಚಿತವಾಗಿದೆ. ಸದ್ಯಕ್ಕೆ ಅಲ್ಲಿಯೇ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ
ಮೆಗಾಸ್ಟಾರ್​ ಚಿರಂಜೀವಿ
Follow us
|

Updated on: Aug 16, 2023 | 3:19 PM

ಟಾಲಿವುಡ್​ನ ಖ್ಯಾತ ನಟ ‘ಮೆಗಾ ಸ್ಟಾರ್’ ಚಿರಂಜೀವಿ (Mega Star Chiranjeevi) ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್​ ಮಾಡಲಾಗಿದೆ. ಒಂದು ವಾರಗಳ ಕಾಲ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. ಒಂದು ವಾರದ ನಂತರ ಹೈದರಾಬಾದ್‌ಗೆ ವಾಪಸ್​ ಬರಲಿದ್ದಾರೆ ಎಂದು ಸುದ್ದಿ ಆಗಿದೆ. ಚಿರಂಜೀವಿ ಅವರಿಗೆ ಆಗಾಗ ಮೊಣಕಾಲು ನೋವು (Knee Pain) ಕಾಣಿಸಿಕೊಳ್ಳುತ್ತಿತ್ತು. ಆ ಕಾರಣದಿಂದ ಅವರು ಪರೀಕ್ಷೆ ಮಾಡಿಸಿದ್ದರು. ನೋವು ನಿವಾರಣೆಗಾಗಿ ಅವರು ನೀ ವಾಶ್ ಸರ್ಜರಿ ಮಾಡಿಸಿಕೊಂಡಿದ್ದಾರೆ. ಮೊಣಕಾಲು ಚಿಪ್ಪಿನಲ್ಲಿ ಇರುವ ಸೋಂಕನ್ನು ನಿವಾರಿಸುವ ಸಲುವಾಗಿ ಈ ಶಸ್ತ್ರಚಿಕಿತ್ಸೆ (Knee Surgery) ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಅವರು ಮತ್ತೆ ಹೈದರಾಬಾದ್​ಗೆ ಮರಳಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಆಗಸ್ಟ್​ 11ರಂದು ಚಿರಂಜೀವಿ ನಟನೆಯ ‘ಭೋಲಾ ಶಂಕರ್​’ ಸಿನಿಮಾ ಬಿಡುಗಡೆ ಆಯಿತು. ಅದರ ಜೊತೆಗೆ ಕೆಲವು ಗಾಸಿಪ್​ ಹಬ್ಬಿತ್ತು. ಇತ್ತೀಚೆಗೆ ಚಿರಂಜೀವಿ ಅವರ ಮೊಣಕಾಲಿನ ಶಸ್ತ್ರ ಚಿಕಿತ್ಸೆ ಕುರಿತಂತೆ ಅನೇಕ ಅಂತೆ-ಕಂತೆಗಳು ಹರಿದಾಡಿದ್ದವು. ನೆಚ್ಚಿನ ನಟನ ಆರೋಗ್ಯದ ಬಗ್ಗೆ ಗಾಸಿಪ್​ಗಳು ಕೇಳಿಬಂದಿದ್ದರಿಂದ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದರು. ಬೆಂಗಳೂರಿನಲ್ಲಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬಹುದು ಎಂದು ಕೂಡ ಹೇಳಲಾಗಿತ್ತು. ಆದರೆ ಈಗ ಅವರು ದೆಹಲಿಯಲ್ಲಿ ಆಪರೇಷನ್​ ಮಾಡಿಸಿಕೊಂಡಿರುವುದು ಖಚಿತವಾಗಿದೆ.

ಇದನ್ನೂ ಓದಿ: ಚಿರಂಜೀವಿ ವಿರುದ್ಧ ಸುಳ್ಳು ಆರೋಪ: ನಟ ರಾಜಶೇಖರ್, ಪತ್ನಿ ಜೀವಿತಾಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಇನ್ನು, ಸಿನಿಮಾದ ವಿಚಾರಕ್ಕೆ ಬರುವುದಾದರೆ ‘ಭೋಲಾ ಶಂಕರ್’ ಸಿನಿಮಾಗೆ ಮೆಹರ್ ರಮೇಶ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಹೀನಾಯವಾಗಿ ಸೋತಿದೆ. ಅಭಿಮಾನಿಗಳ ನಿರೀಕ್ಷೆಯನ್ನು ಈ ಚಿತ್ರ ಹುಸಿಗೊಳಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಮುಗ್ಗರಿಸಿದೆ. ಈ ಚಿತ್ರದಲ್ಲಿ ಯಾವುದೇ ಹೊಸತನ ಇಲ್ಲ ಎಂದು ವಿಮರ್ಶಕರು ಜರಿದಿದ್ದಾರೆ. ಅಲ್ಲದೇ, ‘ಜೈಲರ್’, ‘ಗದರ್​ 2’, ‘ಒಎಂಜಿ 2’ ಮುಂತಾದ ಸಿನಿಮಾಗಳ ಪೈಪೋಟಿ ಎದುರು ‘ಭೋಲಾ ಶಂಕರ್​’ ಚಿತ್ರ ಸೋತಿದೆ.

ಇದನ್ನೂ ಓದಿ: ಚಿರಂಜೀವಿ ತೊಟ್ಟ ಈ ವಾಚ್​​ನಲ್ಲಿ ಎರಡು ಐಷಾರಾಮಿ ಕಾರು ಖರೀದಿಸಬಹುದು

‘ಭೋಲಾ ಶಂಕರ್​’ ಸಿನಿಮಾ ಸೋತರೂ ಕೂಡ ನಿರ್ಮಾಪಕ ಉತ್ಸಾಹ ಕಡಿಮೆ ಆಗಿಲ್ಲ. ‘ಎಕೆ ಎಂಟರ್ಟೈನ್ಮೆಂಟ್ಸ್’ ಬ್ಯಾನರ್ ಅಡಿಯಲ್ಲಿ ತೆಲುಗಿನಲ್ಲಿ ಬಿಡುಗಡೆಯಾದ ಈ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್​ ಮಾಡಲು ತಯಾರಿ ನಡೆದಿದೆ. ಆಗಸ್ಟ್ 25ರಂದು ಚಿತ್ರವು ಹಿಂದಿ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಈಗಾಗಲೇ ಹಿಂದಿ ಅವತರಣಿಕೆಯ ಟೀಸರ್ ಕೂಡ ಬಿಡುಗಡೆ ಆಗಿದೆ. ತಮನ್ನಾ ಭಾಟಿಯಾ, ಕೀರ್ತಿ ಸುರೇಶ್, ಸುಶಾಂತ್, ತರುಣ್ ಅರೋರಾ, ಮುರಳಿ ಶರ್ಮಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ