AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anik Dutta: ಮನೆಯ ಮಹಡಿಯಿಂದ ಬಿದ್ದು ಖ್ಯಾತ ನಿರ್ದೇಶಕ ನಿಧನ; ಮೂಡಿದೆ ಹಲವು ಅನುಮಾನ

ವಿಭಿನ್ನ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿದ್ದ ನಿರ್ದೇಶಕ ಅನಿಕ್ ದತ್ತಾ ಅವರು ನಿಧನರಾಗಿದ್ದಾರೆ. ಮನೆಯ ಮಹಡಿಯಿಂದ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೊದಲೇ ಮೃತಪಟ್ಟಿದ್ದಾರೆ. ಆದರೆ ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ. ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ.

Anik Dutta: ಮನೆಯ ಮಹಡಿಯಿಂದ ಬಿದ್ದು ಖ್ಯಾತ ನಿರ್ದೇಶಕ ನಿಧನ; ಮೂಡಿದೆ ಹಲವು ಅನುಮಾನ
Anik Dutta
ಮದನ್​ ಕುಮಾರ್​
|

Updated on:May 27, 2026 | 5:12 PM

Share

ಬೆಂಗಾಲಿ ಚಿತ್ರರಂಗದ (Bengali Film Industry) ಖ್ಯಾತ ನಿರ್ದೇಶಕ ಅನಿಕ್ ದತ್ತಾ (Anik Dutta) ಅವರು ದಕ್ಷಿಣ ಕೋಲ್ಕತ್ತಾದ ತಮ್ಮ ನಿವಾಸದ ಟೆರೇಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬುಧವಾರ (ಮೇ 27) ಮಧ್ಯಾಹ್ನ ಈ ಘಟನೆ ನಡೆದಿದೆ. 64 ವರ್ಷ ವಯಸ್ಸಿನ ಅನಿಕ್ ದತ್ತಾ ಅವರು ತಮ್ಮ ಚೊಚ್ಚಲ ಚಿತ್ರ ‘ಭೂತೇರ್ ಭವಿಷ್ಯತ್’ (2012) ಮತ್ತು ವಿಮರ್ಶಾತ್ಮಕವಾಗಿ ಪ್ರಶಂಸೆ ಗಳಿಸಿದ ‘ಅಪರಾಜಿತೋ’ (2022) ಸಿನಿಮಾ ಮೂಲಕ ದೇಶಾದ್ಯಂತ ಹೆಸರುವಾಸಿಯಾಗಿದ್ದರು. ಅವರ ನಿಧನಕ್ಕೆ (Anik Dutta Death) ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಕೋಲ್ಕತ್ತಾದ ಹಿಂದುಸ್ತಾನ್ ಪಾರ್ಕ್‌ನಲ್ಲಿರುವ ಅನಿಕ್ ದತ್ತಾ ಅವರ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಹಡಿಯಿಂದ ಬಿದ್ದ ತಕ್ಷಣವೇ ಅವರನ್ನು ಗಂಭೀರ ಸ್ಥಿತಿಯಲ್ಲಿ ಧಾಕುರಿಯಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹಾಗಿದ್ದರೂ ಕೂಡ, ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎನ್ನಲಾಗಿದೆ.

ಅನಿಕ್ ದತ್ತಾ ಅವರ ಸಾವು ಆಕಸ್ಮಿಕವಾಗಿ ಸಂಭವಿಸಿದ್ದೇ ಅಥವಾ ಇದರ ಹಿಂದೆ ಬೇರೆನಾದರೂ ಕಾರಣವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ಮತ್ತು ತನಿಖಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಆದರೆ, ಅವರ ಆಪ್ತರ ಪ್ರಕಾರ, ಅನಿಕ್ ದತ್ತಾ ಅವರು ಕಳೆದ ಕೆಲವು ಸಮಯದಿಂದ ತೀವ್ರ ಖಿನ್ನತೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ತಮ್ಮ ಫ್ಲ್ಯಾಟ್‌ನಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಎಡಪಂಥೀಯ ಸಿದ್ಧಾಂತದ ಮತ್ತು ತೀಕ್ಷ್ಣ ಹಾಸ್ಯಪ್ರಜ್ಞೆಯ ಕಥೆಗಾರರಾಗಿದ್ದ ಅನಿಕ್ ದತ್ತಾ, ಆಧುನಿಕ ಬೆಂಗಾಲಿ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ಚಲನಚಿತ್ರ ರಂಗಕ್ಕೆ ಬರುವ ಮುನ್ನ ಅವರು ಎರಡು ದಶಕಗಳಿಗೂ ಹೆಚ್ಚು ಕಾಲ ಜಾಹೀರಾತು ರಂಗದಲ್ಲಿ ಯಶಸ್ವಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಭಾರತದ ಸಾರ್ವಕಾಲಿಕ ಶ್ರೇಷ್ಠ ನಿರ್ದೇಶಕ ಸತ್ಯಜಿತ್ ರೇ ಕೂಡ ಜಾಹೀರಾತು ಲೋಕದಿಂದಲೇ ಸಿನಿಮಾ ರಂಗಕ್ಕೆ ಬಂದವರಾಗಿದ್ದರು.

ಇದನ್ನೂ ಓದಿ: ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ

ಸತ್ಯಜಿತ್ ರೇ ಅವರಿಗೆ ಗೌರವ ಸಲ್ಲಿಸಲು ಅನಿಕ್ ದತ್ತಾ ಅವರು 2022ರಲ್ಲಿ ‘ಅಪರಾಜಿತೋ’ ಚಿತ್ರವನ್ನು ನಿರ್ದೇಶಿಸಿದ್ದರು. ಸತ್ಯಜಿತ್ ರೇ ಅವರ ‘ಪಥೇರ್ ಪಾಂಚಾಲಿ’ ಸಿನಿಮಾ ಮೇಕಿಂಗ್‌ನ ಜರ್ನಿಯನ್ನು ಈ ಚಿತ್ರದಲ್ಲಿ ತೋರಿಸಲಾಗಿತ್ತು. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಗಳಿಸಿದ್ದಲ್ಲದೆ, 2024ರಲ್ಲಿ ಘೋಷಣೆಯಾದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಎರಡು ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:12 pm, Wed, 27 May 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ